ಬಾಕ್ಸರ್ ಸತೀಶ್ ಕುಮಾರ್ (ಸಂಗ್ರಹಚಿತ್ರ) 
ಕ್ರೀಡೆ

ನಾಲ್ಕರ ಘಟ್ಟಕ್ಕೆ ಸತೀಶ್ ಕುಮಾರ್

ಭಾರತದ ಬಾಕ್ಸರ್ ಸತೀಶ್ ಕುಮಾರ್ ಉತ್ತಮ ಪ್ರದರ್ಶನ ನೀಡುವ ಮೂಲಕ ಏಷ್ಯನ್ ಚಾಂಪಿಯನ್‍ಶಿಪ್‍ನ ಸೆಮಿಫೆೈನಲ್ ಸುತ್ತಿಗೆ ಪ್ರವೇಶಿಸಿದ್ದಾರೆ...

ಬ್ಯಾಂಕಾಕ್: ಭಾರತದ ಬಾಕ್ಸರ್ ಸತೀಶ್ ಕುಮಾರ್ ಉತ್ತಮ ಪ್ರದರ್ಶನ ನೀಡುವ ಮೂಲಕ ಏಷ್ಯನ್ ಚಾಂಪಿಯನ್‍ಶಿಪ್‍ನ ಸೆಮಿಫೆೈನಲ್ ಸುತ್ತಿಗೆ ಪ್ರವೇಶಿಸಿದ್ದಾರೆ.

ಇದರೊಂದಿಗೆ ವಿಶ್ವ ಚಾಂಪಿಯನ್‍ಶಿಪ್‍ಗೆ ಅರ್ಹತೆ ಪಡೆದುಕೊಂಡಿದ್ದಾರೆ. ಬುಧವಾರ ನಡೆದ ಪುರುಷರ 91+ ಕೆ.ಜಿ ವಿಭಾಗದ ಕ್ವಾರ್ಟರ್ಫೆೈನಲ್ ಪಂದ್ಯದಲ್ಲಿ ಸತೀಶ್ ಕುಮಾರ್, ತಮ್ಮ   ಪ್ರತಿಸ್ಪರ್ಧಿ ತಜಕಿಸ್ತಾನದ ಸಿಯೋವುಶ್ ಜುಖುರೋವ್ ಅವರನ್ನು ಮಣಿಸುವ ಮೂಲಕ ಅಂತಿಮ ನಾಲ್ಕರ ಘಟ್ಟಕ್ಕೆ ಲಗ್ಗೆ ಹಾಕಿದರು. ಸೆಮಿಫೆೈನಲ್ ತಲುಪುವುದರೊಂದಿಗೆ ಅವರು ಪದಕವನ್ನೂ ಖಚಿತಪಡಿಸಿಕೊಂಡಿದ್ದಾರೆ. ಇನ್ನು 52 ಕೆ.ಜಿ ವಿಭಾಗದಲ್ಲಿ ಮದನ್ ಲಾಲ್ ಹಾಗೂ 81 ಕೆ.ಜಿ ವಿಭಾಗದಲ್ಲಿ ಕುಲ್ದೀಪ್ ಸಿಂಗ್ ತಮ್ಮ ಪಂದ್ಯಗಳಲ್ಲಿ ಸೋಲನುಭವಿಸುವ ಮೂಲಕ ನಿರಾಸೆ  ಅನುಭವಿಸಿದರು.

ಭಾರತೀಯ ಆಟಗಾರನ ಆಕ್ರಮಣಕಾರಿ ಆಟದವನ್ನು ಎದುರಿಸಲಾಗದೇ ಸಿಯೋವುಶ್ ನಿಗದಿಗಿಂತ ಹೆಚ್ಚು ಬಾಗುತ್ತಿದ್ದರಿಂದ ಅಂಪೈರ್ ಗಳು ಎರಡು ಬಾರಿ ಎಚ್ಚರಿಕೆ ನೀಡಿದರು. ಅಂತಿಮವಾಗಿ  ಸತೀಶ್ ಕುಮಾರ್ ಅವರನ್ನು ತಾಂತ್ರಿಕ ಆಧಾರದ ಮೇಲೆ ಜಯಶಾಲಿ ಎಂದು ಘೋಷಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT