ಜಗಮೋಹನ್ ದಾಲ್ಮಿಯಾ ಅವರ ಪಾರ್ಥೀವ ಶರೀರಕ್ಕೆ ನಮನ ಸಲ್ಲಿಸುತ್ತಿರುವ ಸೌರವ್ ಗಂಗೂಲಿ 
ಕ್ರೀಡೆ

ದಾಲ್ಮಿಯಾಗೆ ಭಾವಪೂರ್ಣ ವಿದಾಯ

ಭಾನುವಾರ ಸಂಜೆ ತೀವ್ರ ಹೃದಯಾಘಾತದಿಂದಾಗಿ ಇಹಲೋಕ ತ್ಯಜಿಸಿದ ದಕ್ಷ ಕ್ರಿಕೆಟ್ ಆಡಳಿತಾಧಿಕಾರಿ ಜಗಮೋಹನ್ ದಾಲ್ಮಿಯಾ...

ಕೋಲ್ಕತಾ: ಭಾನುವಾರ ಸಂಜೆ ತೀವ್ರ ಹೃದಯಾಘಾತದಿಂದಾಗಿ ಇಹಲೋಕ ತ್ಯಜಿಸಿದ ದಕ್ಷ ಕ್ರಿಕೆಟ್ ಆಡಳಿತಾಧಿಕಾರಿ ಜಗಮೋಹನ್ ದಾಲ್ಮಿಯಾ ಅವರಿಗೆ ಸೋಮವಾರ ಭಾವಪೂರ್ವ ವಿದಾಯ ಸಲ್ಲಿಸಲಾಯಿತು.

ಐಸಿಸಿ ಅಧ್ಯಕ್ಷ ಎನ್. ಶ್ರೀನಿವಾಸನ್, ಎನ್‍ಸಿಪಿ ಮುಖಂಡ ಹಾಗೂ ಬಿಸಿಸಿಐ, ಐಸಿಸಿ ಮಾಜಿ ಅಧ್ಯಕ್ಷ ಶರದ್ ಪವಾರ್ ಸೇರಿದಂತೆ ಕ್ರಿಕೆಟ್ ವಲಯ ಅಗಲಿದ ನಾಯಕನಿಗೆ ಕೊನೇ ನಮನ ಸಲ್ಲಿಸಿದರು. ಸೋಮವಾರ ಮಧ್ಯಾಹ್ನ 12.15ಕ್ಕೆ ಅವರ ನಿವಾಸ 10 ಆಲಿಪೊರ್‍ನಿಂದ ದಾಲ್ಮಿಯಾ ಪಾರ್ಥಿವ ಶರೀರವನ್ನು ಇಲ್ಲಿನ ಈಡನ್ ಗಾರ್ಡನ್ ಮೈದಾನದಲ್ಲಿ ಎರಡು ತಾಸಿಗೂ ಹೆಚ್ಚು ಕಾಲ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇರಿಸಲಾಯಿತು.

ಅಂತಿಮವಾಗಿ ಮಧ್ಯಾಹ್ನ 3 ಗಂಟೆ ಸಮಯಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗಮಿಸಿ ಅಂತಿಮ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ 10 ಕೋಲ್ಕತಾ ಪೊಲೀಸ್ ಅಧಿಕಾರಿಗಳು ಮೂರು ಸುತ್ತಿನ ಗುಂಡು ಹಾರಿಸಿ ಸಕಲ ರಾಜ್ಯ ಸರ್ಕಾರಿ ಗೌರವ ಅರ್ಪಿಸಿದರು. ಸಂಜೆ 4 ಗಂಟೆಗೆ ಪುತ್ರ ಅಭಿಷೇಕ್ ವಿಧಿ ವಿಧಾನದಂತೆ ಪಾರ್ಧಿವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಿದರು.

ಭಾರತ ಕ್ರಿಕೆಟ್ ತಂಡದ ನಿರ್ದೇಶಕ ರವಿಶಾಸ್ತ್ರಿ, ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ಹಾಗೂ ಸಿಎಒ ರತ್ನಾಕರ್ ಶೆಟ್ಟಿ, ಬಿಸಿಸಿಐ ಮಾಜಿ ಅಧ್ಯಕ್ಷ ಶಶಾಂಕ್ ಮನೋಹರ್ ಅಲ್ಲದೆ, ಮಾಜಿ ನಾಯಕ ಸೌರವ್ ಗಂಗೂಲಿ ಹಾಗೂ ಬಿಸಿಸಿಐನ ಇತರೆ ಅಧಿಕಾರಿಗಳು ಹಾಗೂ ಗಣ್ಯರು ಅಗಲಿದ ಮಹಾನ್ ಆಡಳಿತಾಧಿಕಾರಿಯ ಅಂತಿಮ ದರ್ಶನ ಪಡೆದರು.

ಭಾನುವಾರ ಸಂಜೆ ಕೋಲ್ಕತಾದ ಬಿ.ಎಂ. ಬಿರ್ಲಾ ಹೃದಯ ಸಂಶೋಧನಾ ಕೇಂದ್ರದಲ್ಲಿ ಕೊನೆಯುಸಿರೆಳೆದ 75 ವರ್ಷದ ದಾಲ್ಮಿಯಾ ಪತ್ನಿ ಚಂದ್ರಲೇಖ, ಪುತ್ರಿ ವೈಶಾಲಿ ಹಾಗೂ ಪುತ್ರ ಅಭಿಷೇಕ್ ಅವರನ್ನು ಅಗಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT