ಅಜಯ್ ಜಯರಾಮ್ (ಸಂಗ್ರಹ ಚಿತ್ರ) 
ಕ್ರೀಡೆ

ಅಜಯ್ ಜಯರಾಮ್ಗೆ ಬಡ್ತಿ

ಇತ್ತೀಚೆಗೆ ನಡೆದ ಕೊರಿಯಾ ಓಪನ್ ಟೂರ್ನಿಯಲ್ಲಿ ರನ್ನರ್ ಆಪ್ ಆಗುವ ಮೂಲಕ ಗಮನ ಸೆಳೆದ ಭಾರತದ ಭರವಸೆಯ ಬ್ಯಾಡ್ಮಿಂಟನ್ ಆಟಗಾರ ಅಜಯ್ ಜಯರಾಮ್, ವಿಶ್ವ ಬ್ಯಾಡ್ಮಿಂಟನ್ ರ್ಯಾಂಕಿಂಗ್‍ನಲ್ಲಿ ಬಡ್ತಿ ಪಡೆದು 25ನೇ ಸ್ಥಾನದಲ್ಲಿದ್ದಾರೆ...

ನವದೆಹಲಿ: ಇತ್ತೀಚೆಗೆ ನಡೆದ ಕೊರಿಯಾ ಓಪನ್ ಟೂರ್ನಿಯಲ್ಲಿ ರನ್ನರ್ ಆಪ್ ಆಗುವ ಮೂಲಕ ಗಮನ ಸೆಳೆದ ಭಾರತದ ಭರವಸೆಯ ಬ್ಯಾಡ್ಮಿಂಟನ್ ಆಟಗಾರ ಅಜಯ್ ಜಯರಾಮ್, ವಿಶ್ವ ಬ್ಯಾಡ್ಮಿಂಟನ್  ರ್ಯಾಂಕಿಂಗ್‍ನಲ್ಲಿ ಬಡ್ತಿ ಪಡೆದು 25ನೇ ಸ್ಥಾನದಲ್ಲಿದ್ದಾರೆ.

ಗುರುವಾರ ಬಿಡುಗಡೆಯಾದ ವಿಶ್ವ ಬ್ಯಾಡ್ಮಿಂಟನ್ ಸಂಸ್ಥೆ ನೂತನ ರ್ಯಾಂಕಿಂಗ್‍ನಲ್ಲಿ ಅಜಯ್ 7 ಸ್ಥಾನಗಳ ಏರಿಕೆ ಕಂಡಿದ್ದಾರೆ. ಜಯರಾಮ್ ಕೊರಿಯಾ ಓಪನ್ ಟೂರ್ನಿಯ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ನಂಬರ್  ಒನ್ ಆಟಗಾರ ಚೀನಾದ ಚೆನ್ ಲಾಂಗ್ ವಿರುದ್ಧ ಪರಾಭವಗೊಂಡಿದ್ದರು. ಅಲ್ಲದೆ ರಷ್ಯಾ ಓಪನ್ ಹಾಗೂ ಮಲೇಷ್ಯಾ ಮಾಸ್ಟರ್ಸ್ ಟೂರ್ನಿಗಳೂ ಸೇರಿದಂತೆ ಎಲ್ಲಾ ಗ್ರಾಂಡ್ ಪ್ರಿಕ್ಸ್ ಟೂರ್ನಿಯಲ್ಲಿ ಅಜಯ್  ಸೆಮಿಫೈನಲ್‍ವರೆಗೂ ಸಾಗಿದ್ದರು. ಇನ್ನು ಭಾರತದ ಪ್ರಮುಖ ಆಟಗಾರರಾದ ಕೆ.ಶ್ರೀಕಾಂತ್ ಮತ್ತು ಪರುಪಳ್ಳಿ ಕಶ್ಯಪ್ ಕ್ರಮವಾಗಿ 5ನೇ ಹಾಗೂ 8ನೇ ಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು  ಎಚ್.ಎಸ್ ಪ್ರಣಯ್ ತಮ್ಮ ಸ್ಥಾನದಲ್ಲಿ ಕುಸಿತ ಕಂಡಿದ್ದು, 16ನೇ ಸ್ಥಾನಕ್ಕೆ ಇಳಿದಿದ್ದಾರೆ.

ಅಗ್ರಸ್ಥಾನದಲ್ಲೇ ಉಳಿದ ಸೈನಾ
ಮಹಿಳೆಯರ ವಿಭಾಗದಲ್ಲಿ ವಿಶ್ವ ಚಾಂಪಿಯನ್ ಷಿಪ್ ರನ್ನರ್ ಅಪ್ ಸ್ಥಾನ ಪಡೆದ ಸೈನಾ ನೆಹ್ವಾಲ್ ಅಗ್ರಸ್ಥಾನದಲ್ಲೇ ಮುಂದುವರೆದಿದ್ದಾರೆ. ಇನ್ನು ಪಿವಿಸಿಂಧು 13ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಮಹಗಿಳೆಯರ  ಡಬಲ್ಸ್  ಜೋಡಿ ಅಶ್ವಿನಿ ಪೊನ್ನಪ್ಪ ಮತ್ತು ಜ್ವಾಲಾ ಗುಟ್ಟಾ  ತಮ್ಮ 11ನೇ ಸ್ಥಾನ ಮುಂದುವರೆದಿದ್ದಾರೆ. ಇತ್ತ ಪುರುಷರ ಡಬಲ್ಸ್ ಆಟಗಾರರಾದ ಮನು ಅತ್ರಿ ಮತ್ತು ಸುಮಿತ್ ರೆಡ್ಡಿ 19ನೇ ಸ್ಥಾನ ಪಡೆದಿದ್ದಾರೆ. ಮಿಶ್ರ  ಡಬಲ್ಸ್ ವಿಭಾಗದಲ್ಲಿ ಭಾರತದ ಯಾವುದೇ ಜೋಡಿ ಅಗ್ರ 25ರಲ್ಲಿ ಕಾಣಿಸಿಕೊಂಡಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

Street Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನತೆ, ಕಾಟದಿಂದ ಮುಕ್ತಿಗೆ ಬಣ್ಣ ನೀರಿನ ಪ್ರಯೋಗ..!

ನಮ್ಮವರು ಬೇರೆ ಧರ್ಮದವರ ಪ್ರಾರ್ಥನೆ ಸ್ಥಳಗಳಿಗೆ ಹೋಗುವುದಿಲ್ಲವೇ? ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ: DKS

SCROLL FOR NEXT