ಪ್ರಸಿದ್ಧ್ ಎಂ ಕೃಷ್ಣ 
ಕ್ರೀಡೆ

ರಣಜಿ ತಂಡದಲ್ಲಿ ಪ್ರಸಿದ್ಧ್, ಸುಚಿತ್

ಪ್ರಸಿದ್ಧ್ ಎಂ ಕೃಷ್ಣ ಹಾಗೂ ಐಪಿಎಲ್ ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದ ಸ್ಪಿನ್ನರ್ ಜೆ.ಸುಚಿತ್ ಕರ್ನಾಟಕ ರಣಜಿ ತಂಡಕ್ಕೆ ಲಗ್ಗೆ ಹಾಕಿದ್ದಾರೆ.

ಬೆಂಗಳೂರು: ಚೊಚ್ಚಲ ಪ್ರಥಮ ದರ್ಜೆ ಪಂದ್ಯದಲ್ಲೇ ಐದು ವಿಕೆಟ್ ಗಳನ್ನು ಎಗರಿಸಿ ಭರವಸೆ ಮೂಡಿಸಿರುವ ವೇಗಿ ಪ್ರಸಿದ್ಧ್ ಎಂ ಕೃಷ್ಣ ಹಾಗೂ ಐಪಿಎಲ್ ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದ ಸ್ಪಿನ್ನರ್ ಜೆ.ಸುಚಿತ್ ಕರ್ನಾಟಕ ರಣಜಿ ತಂಡಕ್ಕೆ ಲಗ್ಗೆ ಹಾಕಿದ್ದಾರೆ.

ಕರ್ನಾಟಕ ತಂಡದ ಆಯ್ಕೆ ಸಮಿತಿ ಅಕ್ಟೋಬರ್ 1 ರಿಂದ 4 ರವರೆಗೆ ರಣಜಿ ಟ್ರೋಫಿ ಎ ಗುಂಪಿನಲ್ಲಿ ಅಸ್ಸಾಂ ವಿರುದ್ಧ ಗುವಾಹಟಿಯಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕೆ ಹದಿನೈದು ಮಂದಿ ಆಟಗಾರರನ್ನು ಅಂತಿಮಗೊಳಿಸಿದ್ದು, ಈ ಇಬ್ಬರು ಯುವ ಆಟಗಾರರನ್ನೂ ಸೇರ್ಪಡೆಗೊಳಿಸಿದೆ. ಇವರೊಂದಿಗೆ ಶಿಶಿರ್ ಭಾವಾನೆ ಹಾಗೂ ಮಯಾಂಕ್ ಅಗರವಾಲ್ ಕೂಡ ತಂಡಕ್ಕೆ ಆಯ್ಕೆಯಾಗಿದ್ದು, ತಂಡದ ಸಾರಥ್ಯವನ್ನು ಆರ್. ವಿನಯ್ ಕುಮಾರ್ ಹೊತ್ತುಕೊಂಡಿದ್ದರೆ, ಬಾಂಗ್ಲಾದೇಶ ಎ ತಂಡದ ವಿರುದ್ಧ ಯುವ ತಂಡವನ್ನು ಯಶಸ್ವಿಯಾಗಿ ಗೆಲುವಿನತ್ತ ಮುನ್ನಡೆಸಿದ ಸಿಎಂ ಗೌತಮ್ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.

ತಂಡದ ವಿವರ: ಆರ್ ವಿನಯ್ ಕುಮಾರ್(ನಾಯಕ), ಸಿ.ಎಂ ಗೌತಮ್(ಉಪನಾಯಕ), ರಾಬಿನ್ ಉತ್ತಪ್ಪ, ಮನೀಶ್ ಪಾಂಡೆ, ಕರುಣ್ ನಾಯರ್, ಆರ್.ಸಮರ್ಥ, ಅಭಿಷೇಕ್ ರೆಡ್ಡಿ, ಶ್ರೇಯಸ್ ಗೋಪಾಲ್, ಉದಿತ್ ಬಿ ಪಟೇಲ್, ಅಭಿಮನ್ಯು ಮಿಥುನ್, ಹೆಚ್.ಎಸ ಶರತ್, ಜೆ.ಸುಚಿತ್, ಶಿಶಿರ್ ಭಾವಾನೆ, ಮಯಾಂಕ್ ಅಗರವಾಲ್ ಮತ್ತು ಪ್ರಸಿದ್ಧ್ ಎಂ ಕೃಷ್ಣ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT