ಕೋಚ್ ಬಿಸ್ವೇಶ್ವರ್ ನಂದಿ ಅವರೊಂದಿಗೆ ತವರಿಗೆ ಆಗಮಿಸಿದ ದೀಪಾ ಕರ್ಮಾಕರ್ 
ಕ್ರೀಡೆ

"ಮಹಿಳಾ ಶಕ್ತಿ ಏನೆಂದು ತಿಳಿಯತೇ?": ಜಿಮ್ನಾಸ್ಟ್ ದೀಪಾ ಕರ್ಮಾಕರ್

ರಿಯೊ ಒಲಿಂಪಿಕ್ಸ್ ನ ಜಿಮ್ನಾಸ್ಟ್ ವಾಲ್ಟ್ ಫೈನಲ್ ಪ್ರವೇಶಿಸಿ ಇಡೀ ವಿಶ್ವದ ಗಮನ ಸೆಳೆದಿದ್ದ ಜಿಮ್ನಾಸ್ಟ್ ದೀಪಾ ಕರ್ಮಾಕರ್ ತವರಿಗೆ ಆಗಮಿಸಿದ್ದು, ಅವರಿಗೆ ಅದ್ದೂರಿ ಸ್ವಾಗತ ದೊರೆತಿದೆ.

ಅಗರ್ತಲಾ: ರಿಯೊ ಒಲಿಂಪಿಕ್ಸ್ ನ ಜಿಮ್ನಾಸ್ಟ್ ವಾಲ್ಟ್ ಫೈನಲ್ ಪ್ರವೇಶಿಸಿ ಇಡೀ ವಿಶ್ವದ ಗಮನ ಸೆಳೆದಿದ್ದ ಜಿಮ್ನಾಸ್ಟ್ ದೀಪಾ ಕರ್ಮಾಕರ್ ತವರಿಗೆ ಆಗಮಿಸಿದ್ದು, ಅವರಿಗೆ ಅದ್ದೂರಿ ಸ್ವಾಗತ ದೊರೆತಿದೆ.

ಅತ್ತ ಬ್ಯಾಡ್ಮಿಂಟನ್ ಗೆದ್ದ ಪಿವಿ ಸಿಂಧೂಗೆ ಹೈದರಾಬಾದ್ ನಲ್ಲಿ ಅಭೂತಪೂರ್ವ ಸ್ವಾಗತ ದೊರೆತಿರುವಂತೆಯೇ ಇತ್ತ ತಮ್ಮ ತವರು ಅಗರ್ತಲಾಗೆ ಆಗಮಿಸಿದ ಜಿಮ್ನಾಸ್ಟ್ ದೀಪಾಕರ್ಮಾಕರ್  ಅವರಿಗೆ ಅದ್ಧೂರಿ ಸ್ವಾಗತ ದೊರೆತಿದೆ. ವಿಮಾನ ನಿಲ್ದಾಣಕ್ಕೆ ಆಗಮಿಸಿದ ದೀಪಾ ಪೋಷಕರು ಅವರಿಗೆ ಮತ್ತು ಕೋಚ್ ಬಿಶ್ವೇಶ್ವರ್ ನಂದಿ ಅವರಿಗೆ ಸಿಹಿ ತಿನ್ನಿಸುವ ಮೂಲಕ ಆದರದಿಂದ ಬರ  ಮಾಡಿಕೊಂಡರು. ದೀಪಾ ಅವರನ್ನು ಬರ ಮಾಡಿಕೊಳ್ಳಲು ತ್ರಿಪುರಾ ಸರ್ಕಾರದ ಪ್ರತಿನಿಧಿಗಳು, ಕ್ರೀಡಾ ಪ್ರಾಧಿಕಾರದ ಅಧಿಕಾರಿಗಳು ಸೇರಿದಂತೆ ಸಾವಿರಾರು ಕ್ರೀಡಾಭಿಮಾನಿಗಳು,  ವಿದ್ಯಾರ್ಥಿಗಳು ಆಗಮಿಸಿದ್ದರು.

ಈ ವೇಳೆ ದೀಪಾ ಅವರನ್ನು ತೆರೆದ ವಾಹನದಲ್ಲಿ ರೋಡ್ ಶೋ ಮೂಲಕ ಕರೆದೊಯ್ದು ಸನ್ಮಾನಿಸಲಾಯಿತು. ಸ್ವತಃ ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಅವರು, ದೀಪಾ ಕರ್ಮಾಕರ್  ಹಾಗೂ ಕೋಚ್ ಬಿಸ್ವೇಶ್ವರ್ ನಂದಿ ಅವರನ್ನು ಸನ್ಮಾನಿಸಿದರು. ಕಾರ್ಯಕ್ರಮದ ಬಳಿಕ ಮಾತನಾಡಿದ ದೀಪಾ ಕರ್ಮಾಕರ್, ತಮಗೆ ದೊರೆತ ಸ್ವಾಗತ ನಿಜಕ್ಕೂ ಅದ್ಬುತವಾಗಿತ್ತು. ನನ್ನ ಮೇಲೆ  ಇಷ್ಟೊಂದು ಪ್ರೀತಿ ಇಟ್ಟಿರುವ ಜನತೆಗೆ ನಾನು ಆಭಾರಿಯಾಗಿದ್ದೇನೆ ಎಂದು ಹೇಳಿದ್ದಾರೆ.

ಇದೇ ವೇಳೆ ಮಹಿಳಾ ಕ್ರೀಡೆಯನ್ನು ಪ್ರೋತ್ಸಾಹಿಸಬೇಕು ಎಂದು ಹೇಳಿದ ದೀಪಾ "ಬೇಟಿ ಬಚಾವೋ, ಭೇಟಿ ಪಡಾವೋ, ಔರ್ ಭೇಟಿ ಖಿಲಾವೋ" ಎಂದೂ ಸಂದೇಶ ಸಾರಿದರು.

ಅಂತೆಯೇ ರಿಯೊ ಒಲಿಂಪಿಕ್ಸ್ ಗೂ ಮೊದಲು ತಮಗಿದ್ದ ಸಮಸ್ಯೆಗಳನ್ನು ವಿವರಿಸಿದ ದೀಪಾ, ಕ್ರೀಡಾಕೂಟಕ್ಕೂ ಮೊದಲು ನಾವು ಅವಧಿ ಮೀರಿದ ಹಾಗೂ ತುಂಬಾ ಹಳೆಯದಾದ ಕ್ರೀಡಾ  ಪರಿಕರಗಳನ್ನು ಬಳಕೆ ಮಾಡುತ್ತಿದ್ದೆವು. ಇಂದಿಗೂ ಕೂಡ ನಮಗೆ ಸೂಕ್ತ ಕ್ರೀಡಾ ಪರಿಕರಗಳಿಲ್ಲ ಎಂದು ಹೇಳಿದ್ದಾರೆ.

ರಿಯೊ ಒಲಿಂಪಿಕ್ಸ್ ನಲ್ಲಿ ಜಿಮ್ನಾಸ್ಟ್ ಮಹಿಳೆಯರ ವಿಭಾಗ ಫೈನಲ್ ಪ್ರವೇಶಿಸಿದ್ದ ದೀಪಾ, ಭಾರತಕ್ಕೆ ಮೊದಲ ಪದಕ ದೊರಕಿಸಿಕೊಡುವ ಭರವಸೆ ಮೂಡಿಸಿದ್ದರು. ಆದರೆ ಫೈನಲ್ ನಲ್ಲಿ 4ನೇ  ಸ್ಥಾನ ಪಡೆಯುವ ಮೂಲಕ ಅದು ನಿರಾಸೆಯಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT