ಸಾಂದರ್ಭಿಕ ಚಿತ್ರ 
ಕ್ರೀಡೆ

ಗುರುವಿಗೆ 'ದ್ರೋಣಾಚಾರ್ಯ ಪ್ರಶಸ್ತಿ'; ವಿರಾಟ್ ಕೊಹ್ಲಿ ಅಭಿನಂದನೆ

ತಮ್ಮ ತರಬೇತುದಾರ ರಾಜ್ ಕುಮಾರ್ ಶರ್ಮಾ ಅವರಿಗೆ ಈ ವರ್ಷದ ಪ್ರತಿಷ್ಠಿತ ದ್ರೋಣಾಚಾರ್ಯ ಪ್ರಶಸ್ತಿ ದೊರೆತಿರುವುದಕ್ಕೆ ಭಾರತೀಯ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅಭಿನಂದಿಸಿದ್ದಾರೆ.

ಪೋರ್ಟ್ ಆಫ್ ಸ್ಪೇನ್: ತಮ್ಮ ತರಬೇತುದಾರ ರಾಜ್ ಕುಮಾರ್ ಶರ್ಮಾ ಅವರಿಗೆ ಈ ವರ್ಷದ ಪ್ರತಿಷ್ಠಿತ ದ್ರೋಣಾಚಾರ್ಯ ಪ್ರಶಸ್ತಿ ದೊರೆತಿರುವುದಕ್ಕೆ ಭಾರತೀಯ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅಭಿನಂದಿಸಿದ್ದಾರೆ. 
ಸೋಮವಾರ ಈ ಪ್ರಶಸ್ತಿಗೆ ಇತರ ಮೂವರ ಜೊತೆಗೆ ಶರ್ಮಾ ಅವರ ಹೆಸರು ಕೂಡ ಧೃಢೀಕರಣಗೊಂಡ ನಂತರ ಕೊಹ್ಲಿ ಟ್ವಿಟ್ಟರ್ ಮೂಲಕ ಅಭಿನಂದಿಸಿದ್ದಾರೆ. ಆಗಸ್ಟ್ 29 ರಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. 
"ರಾಜ್ ಕುಮಾರ್ ಸರ್ ಅಭಿನಂದನೆಗಳು. ದೊಡ್ಡ ಚಿತ್ರದ ಹಿಂದಿನ ಶ್ರಮದಾಯಕ ಕೆಲಸ ಗುರುತಿಸುವುದೇ ಇಲ್ಲ. ನಿಮಗೆ ದ್ರೋಣಾಚಾರ್ಯ ಪ್ರಶಸ್ತಿ ಸಿಕ್ಕಿರುವುದಕ್ಕೆ ಸಂತಸವಾಗಿದೆ" ಎಂದು ಕೊಹ್ಲಿ ಟ್ವೀಟ್ ಮಾಡಿದ್ದಾರೆ. 
ಶರ್ಮ ಅವರಲ್ಲದೆ, ಜಿಮ್ನಾಸ್ಟ್ ದೀಪಾ ಕರ್ಮಾಕರ್ ಅವರ ತರಬೇತುದಾರ ಬಿಶೇಶ್ವರ್ ನಂದಿ, ಅಥ್ಲೆಟಿಕ್ಸ್ ತರಬೇತುದಾರ ನಾಗಪುರಿ ರಮೇಶ್, ಬಾಕ್ಸಿಂಗ್ ತರಬೇತುದಾರ ಸಾಗರ್ ಮಾಲ್ ಧಯಾಲ್ ಅವರಿಗೂ ದ್ರೋಣಾಚಾರ್ಯ ಪ್ರಶಸ್ತಿ ಲಭಿಸಿದೆ. 
ಜೀವಮಾನ ಸಾಧನೆಗಾಗಿ ಈಜು ತರಬೇತುದಾರ ಎಸ್ ಪ್ರದೀಪ್ ಕುಮಾರ್ ಮತ್ತು ಕುಸ್ತಿ ತರಬೇತುದಾರ ಮಹಾಬೀರ್ ಸಿಂಗ್ ಅವರಿಗೆ ಕೂಡ ದ್ರೋಣಾಚಾರ್ಯ ಪ್ರಶಸ್ತಿ ನೀಡಲಾಗಿದೆ. ಐದು ಲಕ್ಷ ನಗದು, ಪದಕ ಮತ್ತು ಪ್ರಮಾಣಪತ್ರವನ್ನು ಈ ಪ್ರಶಸ್ತಿ ಒಳಗೊಂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT