ಸಾಕ್ಷಿ ಮಲಿಕ್ 
ಕ್ರೀಡೆ

ದೆಹಲಿಯಲ್ಲಿ ಕಂಚು ಪದಕ ವಿಜೇತೆ ಸಾಕ್ಷಿ ಮಲಿಕ್ ಗೆ ಭರ್ಜರಿ ಸ್ವಾಗತ

ರಿಯೋ ಒಲಿಂಪಿಕ್ಸ್ ಕುಸ್ತಿ ವಿಭಾಗದಲ್ಲಿ ಕಂಚು ಪದಕ ಗೆಲ್ಲುವ ಮೂಲಕ ಭಾರತದ ಪದಕದ ಬರ ನೀಗಿಸಿದ್ದ ಕುಸ್ತಿಪಟು ಸಾಕ್ಷಿ ಮಲಿಕ್ ಗೆ ದೆಹಲಿಯ ಇಂದಿರಾಗಾಂಧಿ...

ನವದೆಹಲಿ: ರಿಯೋ ಒಲಿಂಪಿಕ್ಸ್ ಕುಸ್ತಿ ವಿಭಾಗದಲ್ಲಿ ಕಂಚು ಪದಕ ಗೆಲ್ಲುವ ಮೂಲಕ ಭಾರತದ ಪದಕದ ಬರ ನೀಗಿಸಿದ್ದ ಕುಸ್ತಿಪಟು ಸಾಕ್ಷಿ ಮಲಿಕ್ ಗೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು.

ಬೆಳಗ್ಗೆ 3.50ರ ಸುಮಾರಿಗೆ ದೆಹಲಿಯ ವಿಮಾನ ನಿಲ್ದಾಣಕ್ಕೆ ಬಂದು ತಲುಪಿದ ಸಾಕ್ಷಿ ಈ ವೇಳೆ ಮಾತನಾಡಿ ರಿಯೋ ಒಲಿಂಪಿಕ್ಸ್ ನಲ್ಲಿ ದೇಶಕ್ಕಾಗಿ ಪದಕ ಗೆಲ್ಲುವುದು ನನ್ನ ಬಹುದಿನಗಳ ಕನಸಾಗಿತ್ತು. ಅದಕ್ಕಾಗಿ ಕಳೆದ ಹನ್ನೆರಡು ವರ್ಷಗಳಿಂದ ಕಠಿಣ ಪರಿಶ್ರಮ ಪಟ್ಟಿದೆ. ನನ್ನ ತಪಸ್ಸಿಗೆ ಫಲ ದೊರೆತಿದೆ ಎಂದು ಹರ್ಷ ವ್ಯಕ್ತಪಡಿಸಿದ್ದು, ಸಮಸ್ತ ಭಾರತೀಯರಿಗೆ ಧನ್ಯವಾದ ಹೇಳಿದ್ದಾರೆ.

ಸಾಕ್ಷಿ ತವರೂರಾದ ರೊಹ್ಟಕ್ ಜಿಲ್ಲೆಯ ಮೊಖ್ರಾ ಹಳ್ಳಿಯಲ್ಲಿ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡು ಸದ್ಯ ಸಾಕ್ಷಿ ದೆಹಲಿಯಿಂದ ರೊಹ್ಟಕ್ ಗೆ ತೆರಳಿದ್ದಾರೆ.

ಬ್ರೆಜಿಲ್ ನಲ್ಲಿ ನಡೆದ ರಿಯೋ ಒಲಿಂಪಿಕ್ಸ್ ನಲ್ಲಿ ಕುಸ್ತಿ ಫ್ರೀಸ್ಟೈಲ್ 58 ಕೆಜಿ ವಿಭಾಗದಲ್ಲಿ ಭಾರತದ ಪರ ಕಂಚಿನ ಪದಕ ಗೆದ್ದು ಭಾರತದ ಪತಾಕೆಯನ್ನು ಹಾರಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

GBA ಆಯ್ತು.. ಈಗ ಗ್ರೇಟರ್ ಮೈಸೂರು ಸಿಟಿ ಕಾರ್ಪೋರೇಷನ್ ಗೆ ಸಂಪುಟ ಅನುಮೋದನೆ!

'ಮಾತು' ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಸಂಸತ್ತಿನಲ್ಲಿ 'ವಂದೇ ಮಾತರಂ', 'ಜೈ ಹಿಂದ್' ಘೋಷಣೆಗಳಿಗೆ ಆಕ್ಷೇಪಣೆ ಯಾಕೆ?: ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್

ಯುದ್ಧ ಸಾರಿದ ನ್ಯೂಜಿಲೆಂಡ್, 25 ಲಕ್ಷ Stone Cold Killers ನಿರ್ಮೂಲನೆ ಮಾಡುವ ಶಪಥ!

ಸಿದ್ದರಾಮಯ್ಯ ಹೈಕಮಾಂಡ್ ಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: CM ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ; Video

SCROLL FOR NEXT