ಪರುಪಳ್ಳಿ ಕಶ್ಯಪ್ ಮತ್ತು ಪುಲ್ಲೇಲ ಗೋಪಿಚಂದ್ 
ಕ್ರೀಡೆ

ಸೈನಾ ನಂತರ ಗೋಪಿಚಂದ್ ಅಕಾಡೆಮಿ ತೊರೆಯಲು ನಿರ್ಧರಿಸಿದ ಪರುಪಳ್ಳಿ ಕಶ್ಯಪ್

ಪರುಪಳ್ಳಿ ಕಶ್ಯಪ್ ಹೈದರಾಬಾದ್ ನಲ್ಲಿರುವ ಗೋಪಿಚಂದ್ ಬ್ಯಾಡ್ಮಿಂಟನ್ ಅಕಾಡೆಮಿ ತೊರೆಯಲು ನಿರ್ಧರಿಸಿದ್ದಾರೆ....

ನವದೆಹಲಿ: ರಿಯೋ ಒಲಂಪಿಕ್ಸ್ ನಲ್ಲಿ ಪಿವಿ ಸಿಂಧು ಬೆಳ್ಳಿ ಪದಕ ಪಡೆಯಲು ತರಬೇತಿ ನೀಡಿದ ಕೋಚ್ ಪುಲ್ಲೇಲ ಗೋಪಿಚಂದ್ ಅವರನ್ನು ಇಡಿ ದೇಶವೇ ಹೊಗಳುತ್ತಿದೆ. ಮತ್ತೊಂದೆಡೆ ಮತ್ತೊಬ್ಬ ಷಟಲ್ ಆಟಗಾರ ಪರುಪಳ್ಳಿ ಕಶ್ಯಪ್ ಹೈದರಾಬಾದ್ ನಲ್ಲಿರುವ ಗೋಪಿಚಂದ್ ಬ್ಯಾಡ್ಮಿಂಟನ್ ಅಕಾಡೆಮಿ ತೊರೆಯಲು ನಿರ್ಧರಿಸಿದ್ದಾರೆ.

ರಿಯೋ ಒಲಂಪಿಕ್ಸ್ ನಲ್ಲಿ ಭಾಗವಹಿಸಬೇಕೆಂದು ಕನಸು ಕಂಡಿದ್ದ 29 ವರ್ಷದ ಕಶ್ಯಪ್ ಗೆ ಗಾಯದ ಸಮಸ್ಯೆಗಳಿಂದಾಗಿ ಪಾಲ್ಗೊಳ್ಳಲಾಗಲಿಲ್ಲ. ಈ ವರ್ಷದ ಮಾರ್ಚ್ ನಲ್ಲಿ ನಡೆದ ಜರ್ಮನ್ ಒಪನ್ ಟೂರ್ನಿಯಲ್ಲಿ ಆದ ಮಂಡಿ ನೋವಿನಿಂದಾಗಿ ಮಲೇಶಿಯಾ ಸೂಪರ್ ಸಿರೀಸ್ ಮತ್ತು ಸಿಂಗಾಪುರ್ ಓಪನ್ ನಲ್ಲೂ ಕಶ್ಯಪ್ ಗೆ ಭಾಗವಹಿಸಲು ಸಾಧ್ಯವಾಗಲಿಲ್ಲ.

2014 ರಲ್ಲಿ ಕಾಮನ್ ವೆಲ್ತ್ ಗೇಮ್ ನಲ್ಲಿ ಚಿನ್ನದ ಪದಕ ಗೆದ್ದಿದ್ದ ಕಶ್ಯಪ್ ಬೆಂಗಳೂರಿನ ಟಾಮ್ ಬ್ಯಾಡ್ಮಿಂಟನ್ ಅಕಾಡೆಮಿಯ ಜಾನ್ ಟಾಮ್ ಅವರ ಬಳಿ ತರಬೇತಿ ಪಡೆಯಲು ನಿರ್ಧರಿಸಿದ್ದಾರೆ.

ನಿಮ್ಮ ಈ ನಿರ್ಧಾರವನ್ನು ಗೋಪಿ ಚಂದ್ ಅವರಿಗೆ ತಿಳಿಸಿದ್ದಾರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕಶ್ಯಪ್ ನಾನು ಹಿರಿಯ ಆಟಗಾರ, ನನ್ನ ಪರಿಸ್ಥಿತಿಯನ್ನು ಗೋಪಿಚಂದ್ ಅರ್ಥ ಮಾಡಿಕೊಳ್ಳುತ್ತಾರೆ ಎಂದು ನಂಬಿದ್ದೇನೆ, ಕಳೆದ ಎರಡು ತಿಂಗಳ ಹಿಂದೆಯೇ ಅಕಾಡೆಮಿ ಬಿಡಲು ನಿರ್ಧರಿಸಿದ್ದೆ ಎಂದು ಕಶ್ಯಪ್ ಹೇಳಿದ್ದಾರೆ.

2014 ರಲ್ಲಿ ಮತ್ತೊಬ್ಬ ಆಟಗಾರ್ತಿ ಸೈನಾ ನೆಹ್ವಾಲ್ ಗೋಪಿಚಂದ್ ಅವರ ಅಕಾಡೆಮಿ ಬಿಟ್ಟು ಬೆಂಗಳೂರಿನ ಅರುಣ್ ಕುಮಾರ್ ಎಂಬ ಕೋಚ್ ಬಳಿ ತರಬೇತಿ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT