ಕ್ರೀಡಾಪಟುಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ) 
ಕ್ರೀಡೆ

ಮುಂದಿನ 3 ಒಲಿಂಪಿಕ್ಸ್ ಸಿದ್ಧತೆಗೆ ಟಾಸ್ಕ್ ಫೋರ್ಸ್: ಪ್ರಧಾನಿ ಮೋದಿ

ರಿಯೊ ಒಲಿಂಪಿಕ್ಸ್ ನಲ್ಲಿ ಉತ್ತಮ ಸಾಧನೆಯ ಹೊರತಾಗಿಯೂ ನಿರ್ಣಾಯಕ ಪಂದ್ಯಗಳಲ್ಲಿ ನಿರಾಸೆ ಮೂಡಿಸಿ ಹೆಚ್ಚು ಪದಕಗಳಿಸುವಲ್ಲಿ ವಿಫಲವಾದ ಭಾರತದ ಆಥ್ಲೀಟ್ ಗಳನ್ನು ಪ್ರೋತ್ಸಾಹಿಸಲು ಮತ್ತು ಒಲಿಂಪಿಕ್ಸ್ ನಲ್ಲಿ ಉತ್ತಮ ಸಾಧನೆ ತೋರಲು ಕೇಂದ್ರ ಸಂಪುಟ ಸಭೆಯಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.

ನವದೆಹಲಿ: ರಿಯೊ ಒಲಿಂಪಿಕ್ಸ್ ನಲ್ಲಿ ಉತ್ತಮ ಸಾಧನೆಯ ಹೊರತಾಗಿಯೂ ನಿರ್ಣಾಯಕ ಪಂದ್ಯಗಳಲ್ಲಿ ನಿರಾಸೆ ಮೂಡಿಸಿ ಹೆಚ್ಚು ಪದಕಗಳಿಸುವಲ್ಲಿ ವಿಫಲವಾದ ಭಾರತದ ಆಥ್ಲೀಟ್ ಗಳನ್ನು  ಪ್ರೋತ್ಸಾಹಿಸಲು ಮತ್ತು ಒಲಿಂಪಿಕ್ಸ್ ನಲ್ಲಿ ಉತ್ತಮ ಸಾಧನೆ ತೋರಲು ಕೇಂದ್ರ ಸಂಪುಟ ಸಭೆಯಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.

ರಿಯೊ ಒಲಿಂಪಿಕ್ಸ್ ನಲ್ಲಿ ಭಾರತೀಯ ಕ್ರೀಡಾಪಟುಗಳ ಅನುಭವಿಸಿದ ನಿರಾಸೆ ಮುಂದಿನ ಕ್ರೀಡಾಕೂಟಗಳಲ್ಲಿ ಆಗಬಾರದು ಎಂದು ಮುಂದಿನ ಮೂರು ಒಲಿಂಪಿಕ್ಸ್ ಕ್ರೀಡಾಕೂಟಗಳಿಗಾಗಿ  ಕಾರ್ಯತಂತ್ರ ಹೆಣೆಯಲು ಟಾಸ್ಕ್ ಫೋರ್ಸ್ ರಚನೆ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಬಗ್ಗೆ ಶುಕ್ರವಾರ ದೆಹಲಿಯಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಮಹತ್ವದ  ನಿರ್ಣಯ ಕೈಗೊಳ್ಳಲಾಗಿದ್ದು, ಟಾಸ್ಕ್ ಫೋರ್ಸ್ ನ ಸಹಾಯದ ಮೂಲಕ ಭಾರತದ ಅಥ್ಲೀಟ್ ಗಳನ್ನು ಮುಂದಿನ ಒಲಿಂಪಿಕ್ಸ್ ಗೆ ಸಿದ್ಧಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ಒಲಿಂಪಿಕ್ಸ್ ಗೆ ಉತ್ತಮ ಮತ್ತು ಅರ್ಹ ಅಥ್ಲೀಟ್ ಗಳನ್ನು ಆಯ್ಕೆ ಮಾಡುವುದು, ಆಯ್ಕೆಯಾದ ಕ್ರೀಡಾಪಟುಗಳಿಗೆ ಉತ್ತಮ ತರಬೇತಿ ಮೂಲಕ ಕ್ರೀಡಾಕೂಟಕ್ಕೆ ಅಣಿಗೊಳಿಸುವುದು ಈ ಟಾಸ್ಕ್  ಫೋರ್ಸ್ ಪ್ರಮುಖ ಉದ್ದೇಶವಾಗಿದೆ. ಇದಲ್ಲದೆ ಕ್ರೀಡಾಪಟುಗಳ ಮೂಲಭೂತ ಸೌಕರ್ಯ ಒದಗಿಸುವುದೂ ಕೂಡ ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ರಿಯೋ ಒಲಿಂಪಿಕ್ಸ್ ಗೂ ಇತ್ತು ಟಿಒಪಿ ಪ್ರೋತ್ಸಾಹ
ಬ್ರೆಜಿಲ್ ನಲ್ಲಿ ನಡೆದ ರಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಅಥ್ಲೀಟ್ ಗಳನ್ನು ಪ್ರೋತ್ಸಾಹಿಸುವ ನಿಟ್ಟಿನಿಂದ ಕೇಂದ್ರ ಸರ್ಕಾರ ಟಿಒಪಿ ಯೋಜನೆಯಡಿಯಲ್ಲಿ 120 ಕೋಟಿ ರು.  ಅನುದಾನ ನೀಡಿತ್ತು. ಈ ಹಿನ್ನಲೆಯಲ್ಲಿ ಭಾರತ ಅಥ್ಲೀಟ್ ತಂಡ ರಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ತೋರಿ ವಿಶ್ವದ ಗಮನೆ ಸೆಳೆಯಿತಾದರೂ ಪದಕಗಳಿಸುವಲ್ಲಿ  ವಿಫಲವಾಗಿತ್ತು.

ಈ ಹಿನ್ನಲೆಯಲ್ಲಿ ಮತ್ತಷ್ಟು ಕ್ರಮಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ 2020, 2024 ಮತ್ತು 2028ರ ಒಲಿಂಪಿಕ್ಸ್ ಕ್ರೀಡಾಕೂಟವನ್ನು ಗುರಿಯಾಗಿರಿಸಿಕೊಂಡು ಕಾರ್ಯತಂತ್ರ ರಚನೆಗೆ ಟಾಸ್ಕ್  ಫೋರ್ಸ್ ರಚನೆ ಮಾಡಿದೆ. ಕೇಂದ್ರ ಸರ್ಕಾರದ ಈ ಕ್ರಮಕ್ಕೆ ಕ್ರೀಡಾಪಟುಗಳು ಹರ್ಷ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT