ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸುತ್ತಿರುವ ಸಿಂಧು 
ಕ್ರೀಡೆ

ಸಿಂಧು, ಸಾಕ್ಷಿ ಮಲಿಕ್, ದೀಪಾ ಕರ್ಮಾಕರ್, ಜೀತು ರಾಯ್ ಗೆ ಖೇಲ್ ರತ್ನ ಪ್ರಶಸ್ತಿ ಪ್ರದಾನ

ರಿಯೋ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು, ಕಂಚಿನ ಪದಕ ಗೆದ್ದ ಕುಸ್ತಿಪಟು ಸಾಕ್ಷಿ ಮಲಿಕ್, ರಿಯೋ ಒಲಿಂಪಿಕ್ಸ್‌ನಲ್ಲಿ...

ನವದೆಹಲಿ: ರಿಯೋ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು, ಕಂಚಿನ ಪದಕ ಗೆದ್ದ ಕುಸ್ತಿಪಟು ಸಾಕ್ಷಿ ಮಲಿಕ್, ರಿಯೋ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿ ಮೊದಲ ಬಾರಿ ಫೈನಲ್ ಪ್ರವೇಶಿಸಿದ್ದ ಭಾರತದ ಜಿಮ್ನಾಸ್ಟಿಕ್ ಪಟು ದೀಪಾ ಕರ್ಮಾಕರ್ ಹಾಗೂ ಶೂಟರ್ ಜೀತು ರಾಯ್ ಅವರಿಗೆ ಸೋಮವಾರ ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿಯಾದ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು,
ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಕ್ರೀಡಾ ಸಾಧಕರಿಗೆ ರಾಜೀವ್ ಖೇಲ್ ರತ್ನ ಪ್ರಶಸ್ತಿ, ಧ್ಯಾನ್ ಚಂದ್ ಪ್ರಶಸ್ತಿ, ಅರ್ಜು ಪ್ರಶಸ್ತಿ ಹಾಗೂ ದ್ರೋಣಾಚಾರ್ಯ ಪ್ರಶಸ್ತಿ ನೀಡಿ ಗೌರವಿಸಿದರು.
ಕರ್ನಾಟಕದ ಹಾಕಿ ಆಟಗಾರ ವಿ.ಆರ್.ರಘುನಾಥ್, ಕ್ರಿಕೆಟ್ ಆಟಗಾರ ಅಜಿಂಕ್ಯ ರಹಾನೆ, ಲಲಿತ್ ಬಾಬರ್, ಶಿವ ಥಾಪಾ ಹಾಗೂ ಅಪೂರ್ವಿ ಚಾಂಡೇಲಾ ಸೇರಿದಂತೆ 15 ಕ್ರೀಡಾಪಟುಗಳನ್ನು ಅರ್ಜುನ ಪ್ರಶಸ್ತಿ ಸ್ವೀಕರಿಸಿದರು.
ಇನ್ನು ದೀಪಾ ಕರ್ಮಾಕರ್ ಕೋಚ್ ಬಿಶ್ವೇಶ್ವರ್ ನಂದಿ ಸೇರಿದಂತೆ ಆರು ಮಂದಿಗೆ ಈ ಸಾಲಿನ ದ್ರೋಣಾಚಾರ್ಯ ಪ್ರಶಸ್ತಿ ಪಡೆದರು. 
ಒಲಿಂಪಿಕ್ಸ್ ನಲ್ಲಿ ಫೈನಲ್ ಪ್ರವೇಶಿಸಿದ ಮೊದಲ ಜಿಮ್ನಾಸ್ಟರ್ ಎಂಬ ಹೆಗ್ಗಳಿಕೆಯೊಂದಿಗೆ ದೇಶದ ಜನತೆಯ ಮನ ಗೆದ್ದಿದ್ದ ದೀಪಾ ಕರ್ಮಾಕರ್ ಅವರಿಗೆ ಸ್ವಲ್ಪದರಲ್ಲಿ ಐತಿಹಾಸಿಕ ಕಂಚಿನ ಪದಕ ಕೈತಪ್ಪಿತ್ತು.
ಇನ್ನು ಸರ್ಕಾರದ ನಿಯಮದಂತೆ ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದ ಪಿ.ವಿ.ಸಿಂಧು ಹಾಗೂ ಸಾಕ್ಷಿ ಮಲಿಕ್ ಅವರಿಗೆ ಖೇಲ್ ರತ್ನ ಪ್ರಶಸ್ತಿ ತಾನಾಗಿಯೇ ಒಲಿದು ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT