ಯೋಗೇಶ್ವರ್ ದತ್ 
ಕ್ರೀಡೆ

ಕಂಚಿನ ಪದಕದಿಂದ ಬೆಳ್ಳಿಗೆ ಬಡ್ತಿ: ಪದಕ ಸ್ವೀಕರಿಸಲು ಯೋಗೇಶ್ವರ್ ದತ್ ನಿರಾಕರಣೆ

ಉದ್ದೀಪನ ಮದ್ದು ಪರೀಕ್ಷೆಯಲ್ಲಿ ಸಿಕ್ಕಿಬಿದ್ದು ಬೆಳ್ಳಿ ಪದಕ ಗೆದ್ದಿದ್ದ ರಷ್ಯಾದ ಬೆಸಿಕ್ ಕುಡ್ಕೋವ್ ಅವರ ಪದಕವನ್ನು ಸ್ವೀಕರಿಸಲು ಕುಸ್ತಿಪಟು ಯೋಗೇಶ್ವರ್ ದತ್ ..

ನವದೆಹಲಿ: ಉದ್ದೀಪನ ಮದ್ದು ಪರೀಕ್ಷೆಯಲ್ಲಿ ಸಿಕ್ಕಿಬಿದ್ದು ಬೆಳ್ಳಿ ಪದಕ ಗೆದ್ದಿದ್ದ ರಷ್ಯಾದ ಬೆಸಿಕ್ ಕುಡ್ಕೋವ್ ಅವರ  ಪದಕವನ್ನು ಸ್ವೀಕರಿಸಲು ಕುಸ್ತಿಪಟು ಯೋಗೇಶ್ವರ್ ದತ್ ನಿರಾಕರಿಸಿದ್ದಾರೆ.

2012ರ  ಒಲಿಂಪಿಕ್ಸ್ ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಕುಸ್ತಿ 60 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಕಂಚು ಪದಕ ಗೆದ್ದಿದ್ದ ಯೋಗೇಶ್ವರ್ ದತ್ ಅವರ ಕಂಚಿನ ಪದಕ ಬೆಳ್ಳಿ ಪದಕಕ್ಕೆ ಬಡ್ತಿ ಪಡೆದಿತ್ತು.

ಬೆಳ್ಳಿ ಪದಕ ವಿಜೇತ ರಷ್ಯಾದ ಕುಸ್ತಿಪಟು ಬೆಸಿಕ್ ಕುಡ್ಕೋವ್ ಉದ್ದೀಪನ ಮದ್ದು ಪರೀಕ್ಷೆಯಲ್ಲಿ ಸಿಕ್ಕಿಬಿದ್ದಿದ್ದರಿಂದ ಅವರ ಪದಕವನ್ನು ಹಿಂಪಡೆಯಲಿದ್ದು ಎರಡನೇ ಸ್ಥಾನಕ್ಕೆ ಯೋಗೇಶ್ವರ್ ದತ್ ರನ್ನು ಆಯ್ಕೆ ಮಾಡಲಾಗಿತ್ತು.

ಆದರೆ ಬೆಳ್ಳಿ ಪದಕವನ್ನು ಸ್ವೀಕರಿಸಲು ಯೋಗೇಶ್ವರ್ ದತ್ ನಿರಾಕರಿಸಿದ್ದಾರೆ. ಒಬ್ಬ ಅಥ್ಲೀಟ್ ಆಗಿ ಮತ್ತೊಬ್ಬ ಅಥ್ಲೀಟ್ ನನ್ನು ಗೌರವಿಸುವುದು ನನ್ನ ಕರ್ತವ್ಯ ಹೀಗಾಗಿ ನಾನು ಪದಕ ಸ್ವೀಕರಿಸುವುದಿಲ್ಲ ಎಂದಪ ಯೋಗೇಶ್ವರ್ ದತ್ ಟ್ವೀಟ್ ಮಾಡಿದ್ದಾರೆ.

ಬೆಳ್ಳಿ ಪದಕವನ್ನು ಬೆಸಿಕ್ ಕುಡ್ಕೋವ್ ಅವರ ಕುಟುಂಬಸ್ಥರೇ ಇಟ್ಟುಕೊಳ್ಳಲಿ ಎಂದು ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT