ಯೋಗೇಶ್ವರ್ ದತ್ 
ಕ್ರೀಡೆ

ಕಂಚಿನ ಪದಕದಿಂದ ಬೆಳ್ಳಿಗೆ ಬಡ್ತಿ: ಪದಕ ಸ್ವೀಕರಿಸಲು ಯೋಗೇಶ್ವರ್ ದತ್ ನಿರಾಕರಣೆ

ಉದ್ದೀಪನ ಮದ್ದು ಪರೀಕ್ಷೆಯಲ್ಲಿ ಸಿಕ್ಕಿಬಿದ್ದು ಬೆಳ್ಳಿ ಪದಕ ಗೆದ್ದಿದ್ದ ರಷ್ಯಾದ ಬೆಸಿಕ್ ಕುಡ್ಕೋವ್ ಅವರ ಪದಕವನ್ನು ಸ್ವೀಕರಿಸಲು ಕುಸ್ತಿಪಟು ಯೋಗೇಶ್ವರ್ ದತ್ ..

ನವದೆಹಲಿ: ಉದ್ದೀಪನ ಮದ್ದು ಪರೀಕ್ಷೆಯಲ್ಲಿ ಸಿಕ್ಕಿಬಿದ್ದು ಬೆಳ್ಳಿ ಪದಕ ಗೆದ್ದಿದ್ದ ರಷ್ಯಾದ ಬೆಸಿಕ್ ಕುಡ್ಕೋವ್ ಅವರ  ಪದಕವನ್ನು ಸ್ವೀಕರಿಸಲು ಕುಸ್ತಿಪಟು ಯೋಗೇಶ್ವರ್ ದತ್ ನಿರಾಕರಿಸಿದ್ದಾರೆ.

2012ರ  ಒಲಿಂಪಿಕ್ಸ್ ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಕುಸ್ತಿ 60 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಕಂಚು ಪದಕ ಗೆದ್ದಿದ್ದ ಯೋಗೇಶ್ವರ್ ದತ್ ಅವರ ಕಂಚಿನ ಪದಕ ಬೆಳ್ಳಿ ಪದಕಕ್ಕೆ ಬಡ್ತಿ ಪಡೆದಿತ್ತು.

ಬೆಳ್ಳಿ ಪದಕ ವಿಜೇತ ರಷ್ಯಾದ ಕುಸ್ತಿಪಟು ಬೆಸಿಕ್ ಕುಡ್ಕೋವ್ ಉದ್ದೀಪನ ಮದ್ದು ಪರೀಕ್ಷೆಯಲ್ಲಿ ಸಿಕ್ಕಿಬಿದ್ದಿದ್ದರಿಂದ ಅವರ ಪದಕವನ್ನು ಹಿಂಪಡೆಯಲಿದ್ದು ಎರಡನೇ ಸ್ಥಾನಕ್ಕೆ ಯೋಗೇಶ್ವರ್ ದತ್ ರನ್ನು ಆಯ್ಕೆ ಮಾಡಲಾಗಿತ್ತು.

ಆದರೆ ಬೆಳ್ಳಿ ಪದಕವನ್ನು ಸ್ವೀಕರಿಸಲು ಯೋಗೇಶ್ವರ್ ದತ್ ನಿರಾಕರಿಸಿದ್ದಾರೆ. ಒಬ್ಬ ಅಥ್ಲೀಟ್ ಆಗಿ ಮತ್ತೊಬ್ಬ ಅಥ್ಲೀಟ್ ನನ್ನು ಗೌರವಿಸುವುದು ನನ್ನ ಕರ್ತವ್ಯ ಹೀಗಾಗಿ ನಾನು ಪದಕ ಸ್ವೀಕರಿಸುವುದಿಲ್ಲ ಎಂದಪ ಯೋಗೇಶ್ವರ್ ದತ್ ಟ್ವೀಟ್ ಮಾಡಿದ್ದಾರೆ.

ಬೆಳ್ಳಿ ಪದಕವನ್ನು ಬೆಸಿಕ್ ಕುಡ್ಕೋವ್ ಅವರ ಕುಟುಂಬಸ್ಥರೇ ಇಟ್ಟುಕೊಳ್ಳಲಿ ಎಂದು ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT