ಸುರೇಶ್ ಕಲ್ಮಡಿ 
ಕ್ರೀಡೆ

ತೀವ್ರ ವಿರೋಧದ ನಂತರ ಐಒಎ ಹುದ್ದೆ ತಿರಸ್ಕರಿಸಿದ ಸುರೇಶ್ ಕಲ್ಮಡಿ; ಐಒಎಗೆ ನೋಟಿಸ್

ತೀವ್ರ ವಿರೋಧದ ನಂತರ ಕಳಂಕಿತ ಸುರೇಶ್ ಕಲ್ಮಾಡಿ ಅವರು ಬುಧವಾರ ಭಾರತೀಯ ಒಲಿಂಪಿಕ್ಸ್ ಸಂಸ್ಥೆ(ಐಒಎ)ಯ ಅಜೀವ ಅಧ್ಯಕ್ಷ ಸ್ಥಾನವನ್ನು...

ನವದೆಹಲಿ: ತೀವ್ರ ವಿರೋಧದ ನಂತರ ಕಳಂಕಿತ ಸುರೇಶ್ ಕಲ್ಮಾಡಿ ಅವರು ಬುಧವಾರ ಭಾರತೀಯ ಒಲಿಂಪಿಕ್ಸ್ ಸಂಸ್ಥೆ(ಐಒಎ)ಯ ಅಜೀವ ಅಧ್ಯಕ್ಷ ಸ್ಥಾನವನ್ನು ತಿರಸ್ಕರಿಸಿದ್ದಾರೆ.
ನಿನ್ನೆಯಷ್ಟೇ ಐಒಎ ಸುರೇಶ್ ಕಲ್ಮಡಿ ಅವರಿಗೆ ಆಜೀವ ಅಧ್ಯಕ್ಷ ಸ್ಥಾನ ನೀಡಿತ್ತು. ಇಂದು ಈ ಬಗ್ಗೆ ಟಿವಿ ವಾಹಿನಿಯೊಂದಕ್ಕೆ ಪ್ರತಿಕ್ರಿಯಿಸಿರುವ ಕಲ್ಮಡಿ ವಕೀಲ ಹಿತೇಶ್ ಜೈನ್ ಅವರು, ಕಲ್ಮಾಡಿ ಅವರು ಭ್ರಷ್ಟಾಚಾರ ಆರೋಪದಿಂದ ಮುಕ್ತರಾಗುವವರೆಗೆ ಆ ಹುದ್ದೆಯನ್ನು ಸ್ವೀಕರಿಸದಿರಲು ನಿರ್ಧರಿಸಿದ್ದಾರೆ ಎಂದು ಹೇಳಿದ್ದಾರೆ. ಐಒಎ ಕಲ್ಮಾಡಿ ಅವರನ್ನು ಆಜೀವ ಅಧ್ಯಕ್ಷ ಹುದ್ದೆಗೆ ಆಯ್ಕೆ ಮಾಡುವ ವಿಚಾರ ಸ್ವತಃ ಅವರಿಗೂ ಗೊತ್ತಿರಲಿಲ್ಲ ಎಂದಿದ್ದಾರೆ.
ನಿನ್ನೆ ಚೆನ್ನೈನಲ್ಲಿ ನಡೆದ ಐಒಎನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಕಲ್ಮಾಡಿ ಹಾಗೂ ಮತ್ತೊಬ್ಬ ಕಳಂಕಿತ ಮಾಜಿ ಅಧ್ಯಕ್ಷ ಅಭಯ್ ಸಿಂಗ್ ಚೌಟಾಲ್ ಅವರನ್ನು ಆಜೀವ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿತ್ತು. ಐಒಎನ ಈ ವಿವಾದಾತ್ಮಕ ನೇಮಕಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಅಲ್ಲದೆ ಈ ಸಂಬಂಧ ಕ್ರೀಡಾ ಸಚಿವಾಲಯ ಐಒಎಗೆ ಶೋಕಾಸ್ ನೋಟಿಸ್ ಸಹ ನೀಡಿದೆ.
2010 ರ ಕಾಮನ್ ವೆಲ್ತ್ ಗೇಮ್ಸ್ ನವದೆಹಲಿಯಲ್ಲಿ ನಡೆದಿದ್ದಾಗ ಕಾಂಗ್ರೆಸ್ ನಾಯಕ ಸುರೇಶ್ ಕಲ್ಮಾಡಿ ಕಾಮನ್ ವೆಲ್ತ್ ಗೇಮ್ಸ್ ಅಧ್ಯಕ್ಷರಾಗಿದ್ದರು. ಆ ಸಂದರ್ಭದಲ್ಲಿ ಅವರು ಕೋಟ್ಯಂತರ ರುಪಾಯಿ ಭ್ರಷ್ಟಾಚಾರ ಮಾಡಿದ ಆರೋಪ ಎದುರಿಸುತ್ತಿದ್ದಾರೆ.
ಇನ್ನು ಈ ಬಗ್ಗೆ ಕ್ರೀಡಾ ಸಚಿವ ವಿಜಯ್ ಗೊಯೆಲ್ ರನ್ನು ಕೇಳಿದಾಗ ನನಗೆ ಇದು ಗೊತ್ತಿರಲಿಲ್ಲ. ಶೀಘ್ರದಲ್ಲೇ ಈ ಬಗ್ಗೆ ವಿಚಾರಿಸುತ್ತೇನೆ ಎಂದಿದ್ದರು. ಖಾಸಗಿ ವಾಹಿನಿಯೊಂದಕ್ಕೆ ಮಾತನಾಡಿದ ಭಾರತ ಹಾಕಿ ತಂಡದ ಮಾಜಿ ನಾಯಕ ‘ಕ್ರೀಡಾ ಒಕ್ಕೂಟಗಳಿಗೆ ಕ್ರೀಡಾಳುಗಳನ್ನೇ ಆಯ್ಕೆ ಮಾಡದ ಹೊರತು ಇಂತಹ ಪ್ರಮಾದಗಳು ನಡೆಯುತ್ತಲೇ ಇರುತ್ತವೆ’ ಎಂದು ಪ್ರತಿಕ್ರಿಯಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT