ಸುರೇಶ್ ಕಲ್ಮಡಿ 
ಕ್ರೀಡೆ

ತೀವ್ರ ವಿರೋಧದ ನಂತರ ಐಒಎ ಹುದ್ದೆ ತಿರಸ್ಕರಿಸಿದ ಸುರೇಶ್ ಕಲ್ಮಡಿ; ಐಒಎಗೆ ನೋಟಿಸ್

ತೀವ್ರ ವಿರೋಧದ ನಂತರ ಕಳಂಕಿತ ಸುರೇಶ್ ಕಲ್ಮಾಡಿ ಅವರು ಬುಧವಾರ ಭಾರತೀಯ ಒಲಿಂಪಿಕ್ಸ್ ಸಂಸ್ಥೆ(ಐಒಎ)ಯ ಅಜೀವ ಅಧ್ಯಕ್ಷ ಸ್ಥಾನವನ್ನು...

ನವದೆಹಲಿ: ತೀವ್ರ ವಿರೋಧದ ನಂತರ ಕಳಂಕಿತ ಸುರೇಶ್ ಕಲ್ಮಾಡಿ ಅವರು ಬುಧವಾರ ಭಾರತೀಯ ಒಲಿಂಪಿಕ್ಸ್ ಸಂಸ್ಥೆ(ಐಒಎ)ಯ ಅಜೀವ ಅಧ್ಯಕ್ಷ ಸ್ಥಾನವನ್ನು ತಿರಸ್ಕರಿಸಿದ್ದಾರೆ.
ನಿನ್ನೆಯಷ್ಟೇ ಐಒಎ ಸುರೇಶ್ ಕಲ್ಮಡಿ ಅವರಿಗೆ ಆಜೀವ ಅಧ್ಯಕ್ಷ ಸ್ಥಾನ ನೀಡಿತ್ತು. ಇಂದು ಈ ಬಗ್ಗೆ ಟಿವಿ ವಾಹಿನಿಯೊಂದಕ್ಕೆ ಪ್ರತಿಕ್ರಿಯಿಸಿರುವ ಕಲ್ಮಡಿ ವಕೀಲ ಹಿತೇಶ್ ಜೈನ್ ಅವರು, ಕಲ್ಮಾಡಿ ಅವರು ಭ್ರಷ್ಟಾಚಾರ ಆರೋಪದಿಂದ ಮುಕ್ತರಾಗುವವರೆಗೆ ಆ ಹುದ್ದೆಯನ್ನು ಸ್ವೀಕರಿಸದಿರಲು ನಿರ್ಧರಿಸಿದ್ದಾರೆ ಎಂದು ಹೇಳಿದ್ದಾರೆ. ಐಒಎ ಕಲ್ಮಾಡಿ ಅವರನ್ನು ಆಜೀವ ಅಧ್ಯಕ್ಷ ಹುದ್ದೆಗೆ ಆಯ್ಕೆ ಮಾಡುವ ವಿಚಾರ ಸ್ವತಃ ಅವರಿಗೂ ಗೊತ್ತಿರಲಿಲ್ಲ ಎಂದಿದ್ದಾರೆ.
ನಿನ್ನೆ ಚೆನ್ನೈನಲ್ಲಿ ನಡೆದ ಐಒಎನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಕಲ್ಮಾಡಿ ಹಾಗೂ ಮತ್ತೊಬ್ಬ ಕಳಂಕಿತ ಮಾಜಿ ಅಧ್ಯಕ್ಷ ಅಭಯ್ ಸಿಂಗ್ ಚೌಟಾಲ್ ಅವರನ್ನು ಆಜೀವ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿತ್ತು. ಐಒಎನ ಈ ವಿವಾದಾತ್ಮಕ ನೇಮಕಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಅಲ್ಲದೆ ಈ ಸಂಬಂಧ ಕ್ರೀಡಾ ಸಚಿವಾಲಯ ಐಒಎಗೆ ಶೋಕಾಸ್ ನೋಟಿಸ್ ಸಹ ನೀಡಿದೆ.
2010 ರ ಕಾಮನ್ ವೆಲ್ತ್ ಗೇಮ್ಸ್ ನವದೆಹಲಿಯಲ್ಲಿ ನಡೆದಿದ್ದಾಗ ಕಾಂಗ್ರೆಸ್ ನಾಯಕ ಸುರೇಶ್ ಕಲ್ಮಾಡಿ ಕಾಮನ್ ವೆಲ್ತ್ ಗೇಮ್ಸ್ ಅಧ್ಯಕ್ಷರಾಗಿದ್ದರು. ಆ ಸಂದರ್ಭದಲ್ಲಿ ಅವರು ಕೋಟ್ಯಂತರ ರುಪಾಯಿ ಭ್ರಷ್ಟಾಚಾರ ಮಾಡಿದ ಆರೋಪ ಎದುರಿಸುತ್ತಿದ್ದಾರೆ.
ಇನ್ನು ಈ ಬಗ್ಗೆ ಕ್ರೀಡಾ ಸಚಿವ ವಿಜಯ್ ಗೊಯೆಲ್ ರನ್ನು ಕೇಳಿದಾಗ ನನಗೆ ಇದು ಗೊತ್ತಿರಲಿಲ್ಲ. ಶೀಘ್ರದಲ್ಲೇ ಈ ಬಗ್ಗೆ ವಿಚಾರಿಸುತ್ತೇನೆ ಎಂದಿದ್ದರು. ಖಾಸಗಿ ವಾಹಿನಿಯೊಂದಕ್ಕೆ ಮಾತನಾಡಿದ ಭಾರತ ಹಾಕಿ ತಂಡದ ಮಾಜಿ ನಾಯಕ ‘ಕ್ರೀಡಾ ಒಕ್ಕೂಟಗಳಿಗೆ ಕ್ರೀಡಾಳುಗಳನ್ನೇ ಆಯ್ಕೆ ಮಾಡದ ಹೊರತು ಇಂತಹ ಪ್ರಮಾದಗಳು ನಡೆಯುತ್ತಲೇ ಇರುತ್ತವೆ’ ಎಂದು ಪ್ರತಿಕ್ರಿಯಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT