ರಾಹುಲ್ ದ್ರಾವಿಡ್ 
ಕ್ರೀಡೆ

ಐಸಿಸಿ ಭ್ರಷ್ಟಾಚಾರ ವಿರೋಧಿ ಪರಾಮರ್ಶೆ ಗ್ರೂಪ್ ನಲ್ಲಿ ಡ್ರಾವಿಡ್

ಭಾರತದ ಅಂಡರ್ 19 ಕ್ರಿಕೆಟ್ ತಂಡದ ಕೋಚ್ ಆಗಿರುವ ಟೀಂ ಇಂಡಿಯಾದ ನಿವೃತ್ತ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರನ್ನು ಐಸಿಸಿ ಭ್ರಷ್ಟಾಚಾರ ವಿರೋಧಿ ಪರಾಮರ್ಶೆ...

ಭಾರತದ ಅಂಡರ್ 19 ಕ್ರಿಕೆಟ್ ತಂಡದ ಕೋಚ್ ಆಗಿರುವ ಟೀಂ ಇಂಡಿಯಾದ ನಿವೃತ್ತ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರನ್ನು ಐಸಿಸಿ ಭ್ರಷ್ಟಾಚಾರ ವಿರೋಧಿ ಪರಾಮರ್ಶೆ ಗ್ರೂಪ್ ಗೆ ಹೆಸರಿಸಲಾಗಿದ್ದು, ಹೊಸ ಜವಾಬ್ದಾರಿ ಹೊರಿಸಲಾಗಿದೆ.

ಈ ಪರಾಮರ್ಶೆ ಗ್ರೂಪ್ ಕಾರ್ಯಕಾರಿ ಸಮಿತಿ ಅಧ್ಯಕ್ಷರನ್ನು ಒಳಗೊಂಡಿದೆ. ಇದರಲ್ಲಿ ಕಾನೂನು ತಜ್ಞ ಲೂಯಿಸ್ ವೆಸ್ಟನ್ ಮತ್ತು ಸ್ವತಂತ್ರ ಭ್ರಷ್ಟಾಚಾರ ವಿರೋಧಿ ಸಲಹೆಗಾರ ಜಾನ್ ಅಬಾಟ್(ಇವರು ಐಕ್ಯತಾ ಕಾರ್ಯಕಾರಿ ಪಕ್ಷದ ಅಧ್ಯಕ್ಷರೂ ಸಹ) ಭ್ರಷ್ಟಾಚಾರ ತಡೆ ಘಟಕದ ಅಧ್ಯಕ್ಷ ಸರ್ ರೋನಿ ಫ್ಲನಗಾನ್, ಐಸಿಸಿ ಮುಖ್ಯ ಕಾರ್ಯಕಾರಿ ಡೇವಿಡ್ ರಿಚರ್ಡ್ ಸನ್ ಇರಲಿದ್ದಾರೆ ಎಂದು ಐಸಿಸಿ ಪ್ರಕಟಣೆ ತಿಳಿಸಿದೆ.

ಈ ಪರಾಮರ್ಶಾ ಸಮಿತಿಯು ವರ್ಷದಲ್ಲಿ ಒಮ್ಮೆ ಮಾತ್ರ ಸಭೆ ಸೇರಿ ಕ್ರಿಕೆಟ್ ನಲ್ಲಿ ಕಳ್ಳಾಟ ನುಸುಳದಂತೆ ಇಲ್ಲವೇ ಭ್ರಷ್ಟಾಚಾರ ತಡೆಗೆ ಬೇಕಾದ ಸೂಕ್ತ ಮಾರ್ಗದರ್ಶನ, ಸಲಹೆ ಹಾಗೂ ಕಾರ್ಯಸೂಚಿಗಳನ್ನು ನೀಡಲಿದೆ ಎಂದು ಐಸಿಸಿ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT