ಅನುರಾಗ್ ಠಾಕೂರ್ 
ಕ್ರೀಡೆ

ಲೋಧಾ ಸಮಿತಿ ವರದಿ ಜಾರಿ ಸಂಬಂಧ ಸಮಸ್ಯೆ: ಸುಪ್ರೀಂಗೆ ಬಿಸಿಸಿಐ ಅಫಿಡವಿಟ್

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಇಂದು ವಿಶೇಷ ಮಹಾಸಭೆ ನಡೆಸಿ ಲೋಧಾ ಸಮಿತಿ ವರದಿ ಜಾರಿ ಸಂಬಂಧಿತ ಹಲವಾರು ಸಮಸ್ಯೆಗಳನ್ನು ಅಫಿಡವಿಟ್...

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಇಂದು ವಿಶೇಷ ಮಹಾಸಭೆ ನಡೆಸಿ ಲೋಧಾ ಸಮಿತಿ ವರದಿ ಜಾರಿ ಸಂಬಂಧಿತ ಹಲವಾರು ಸಮಸ್ಯೆಗಳನ್ನು ಅಫಿಡವಿಟ್ ಮೂಲಕ ಸುಪ್ರೀಂಕೋರ್ಟ್ ಗಮನಕ್ಕೆ ತರಲು ನಿರ್ಧರಿಸಿದೆ.

ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ಅವರು ಬಿಸಿಸಿಐ ಪರವಾಗಿ ಅಫಿಡವಿಟ್ ಸಲ್ಲಿಕೆಯ ಹೊಣೆಯನ್ನು ಹೊತ್ತಿದ್ದಾರೆ.  ಕ್ರಿಕೆಟ್ ಆಡಳಿತ ವೈಖರಿಯಲ್ಲಿ ಹಲವು ಮಹತ್ವದ ಬದಲಾವಣೆಗಳಿಗೆ ಲೋಧಾ ಸಮಿತಿ ಶಿಫಾರಸು ಮಾಡಿದೆ. ಈ ವರದಿ ಬಗ್ಗೆ ಮಂಡಳಿಯ ಸದಸ್ಯ ರಾಜ್ಯ ಸಂಸ್ಥೆಗಳು ವಿರೋಧ ವ್ಯಕ್ತಪಡಿಸಿದ್ದು, ವರದಿ ಜಾರಿ ಮಾಡುವುದು ಕಷ್ಟ ಸಾಧ್ಯ ಹಾಗೂ ಇದರಿಂದ ಬಿಸಿಸಿಐಗೆ ಅಪಾರ ನಷ್ಟವಾಗಲಿದೆ ಎಂದು ಸಭೆಯ ಬಳಿಕ ಅಧಿಕಾರಿಗಳು ತಿಳಿಸಿದ್ದಾರೆ.

ಸಚಿವರು, ಸರ್ಕಾರಿ ನೌಕರರು, ಕ್ರಿಕೆಟ್ ಆಡಳಿತಾಧಿಕಾರಿಗಳಾಗಿರಬಾರದು. ಒಂದು ರಾಜ್ಯಕ್ಕೆ ಒಂದೇ ಮತ, ಉಪಹಾರ ವಿರಾಮ ಅಥವಾ ಚಹಾ ವಿರಾಮ ಇದ್ದಾಗ ಒಮ್ಮೆ ಮಾತ್ರ ಜಾಹೀರಾತು ಪ್ರದರ್ಶಿಸ ಬೇಕೆಂದು ತಿಳಿಸಿತ್ತು, ಇದರಿಂದಾಗಿ ಬಿಸಿಸಿಐಗೆ ಬರೋಬ್ಬರಿ 1500 ಕೋಟಿ ರು. ನಷ್ಟವಾಗುತ್ತಿತ್ತು. ಈ ಎಲ್ಲಾ ಕಾರಣದಿಂದ ಬಿಸಿಸಿಐ ವರದಿ ಜಾರಿ ಮಾಡಲು ಹಿಂದೇಟು ಹಾಕಿದೆ. ಈ ವರದಿಯ ಜಾರಿ ಕುರಿತು ಬಿಸಿಸಿಐ ಉತ್ತರಕ್ಕಾಗಿ ಸುಪ್ರಿಂ ಕೋರ್ಟ್ ಮಾರ್ಚ್ 3ರವರೆಗೆ ಕಾಲಾವಕಾಶ ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT