ಅನುರಾಗ್ ಠಾಕೂರ್ 
ಕ್ರೀಡೆ

ಲೋಧಾ ಸಮಿತಿ ವರದಿ ಜಾರಿ ಸಂಬಂಧ ಸಮಸ್ಯೆ: ಸುಪ್ರೀಂಗೆ ಬಿಸಿಸಿಐ ಅಫಿಡವಿಟ್

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಇಂದು ವಿಶೇಷ ಮಹಾಸಭೆ ನಡೆಸಿ ಲೋಧಾ ಸಮಿತಿ ವರದಿ ಜಾರಿ ಸಂಬಂಧಿತ ಹಲವಾರು ಸಮಸ್ಯೆಗಳನ್ನು ಅಫಿಡವಿಟ್...

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಇಂದು ವಿಶೇಷ ಮಹಾಸಭೆ ನಡೆಸಿ ಲೋಧಾ ಸಮಿತಿ ವರದಿ ಜಾರಿ ಸಂಬಂಧಿತ ಹಲವಾರು ಸಮಸ್ಯೆಗಳನ್ನು ಅಫಿಡವಿಟ್ ಮೂಲಕ ಸುಪ್ರೀಂಕೋರ್ಟ್ ಗಮನಕ್ಕೆ ತರಲು ನಿರ್ಧರಿಸಿದೆ.

ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ಅವರು ಬಿಸಿಸಿಐ ಪರವಾಗಿ ಅಫಿಡವಿಟ್ ಸಲ್ಲಿಕೆಯ ಹೊಣೆಯನ್ನು ಹೊತ್ತಿದ್ದಾರೆ.  ಕ್ರಿಕೆಟ್ ಆಡಳಿತ ವೈಖರಿಯಲ್ಲಿ ಹಲವು ಮಹತ್ವದ ಬದಲಾವಣೆಗಳಿಗೆ ಲೋಧಾ ಸಮಿತಿ ಶಿಫಾರಸು ಮಾಡಿದೆ. ಈ ವರದಿ ಬಗ್ಗೆ ಮಂಡಳಿಯ ಸದಸ್ಯ ರಾಜ್ಯ ಸಂಸ್ಥೆಗಳು ವಿರೋಧ ವ್ಯಕ್ತಪಡಿಸಿದ್ದು, ವರದಿ ಜಾರಿ ಮಾಡುವುದು ಕಷ್ಟ ಸಾಧ್ಯ ಹಾಗೂ ಇದರಿಂದ ಬಿಸಿಸಿಐಗೆ ಅಪಾರ ನಷ್ಟವಾಗಲಿದೆ ಎಂದು ಸಭೆಯ ಬಳಿಕ ಅಧಿಕಾರಿಗಳು ತಿಳಿಸಿದ್ದಾರೆ.

ಸಚಿವರು, ಸರ್ಕಾರಿ ನೌಕರರು, ಕ್ರಿಕೆಟ್ ಆಡಳಿತಾಧಿಕಾರಿಗಳಾಗಿರಬಾರದು. ಒಂದು ರಾಜ್ಯಕ್ಕೆ ಒಂದೇ ಮತ, ಉಪಹಾರ ವಿರಾಮ ಅಥವಾ ಚಹಾ ವಿರಾಮ ಇದ್ದಾಗ ಒಮ್ಮೆ ಮಾತ್ರ ಜಾಹೀರಾತು ಪ್ರದರ್ಶಿಸ ಬೇಕೆಂದು ತಿಳಿಸಿತ್ತು, ಇದರಿಂದಾಗಿ ಬಿಸಿಸಿಐಗೆ ಬರೋಬ್ಬರಿ 1500 ಕೋಟಿ ರು. ನಷ್ಟವಾಗುತ್ತಿತ್ತು. ಈ ಎಲ್ಲಾ ಕಾರಣದಿಂದ ಬಿಸಿಸಿಐ ವರದಿ ಜಾರಿ ಮಾಡಲು ಹಿಂದೇಟು ಹಾಕಿದೆ. ಈ ವರದಿಯ ಜಾರಿ ಕುರಿತು ಬಿಸಿಸಿಐ ಉತ್ತರಕ್ಕಾಗಿ ಸುಪ್ರಿಂ ಕೋರ್ಟ್ ಮಾರ್ಚ್ 3ರವರೆಗೆ ಕಾಲಾವಕಾಶ ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT