ಮಹೇಂದ್ರ ಸಿಂಗ್ ಧೋನಿ 
ಕ್ರೀಡೆ

ಸೈನಿಕರಿಗೆ ಗೌರವ ಸಲ್ಲಿಸಿ ಧೋನಿ ಟ್ವೀಟ್

ಜೆಎನ್‌ಯು ವಿವಾದಕ್ಕೆ ಸಂಬಂಧಪಟ್ಟಂತೆ ದೇಶಪ್ರೇಮ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ದೇಶದ ಜನರ ಒಂದೊಂದು ನಿಲುವುಗಳು ಚರ್ಚಾಸ್ಪದವಾಗುತ್ತಲೇ...

ನವದೆಹಲಿ:  ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ, ದೇಶಪ್ರೇಮದ ಬಗ್ಗೆಯೇ ಚರ್ಚೆಯಾಗುತ್ತಿರುವ ಈ ಹೊತ್ತಿನಲ್ಲಿ ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ಭಾರತೀಯ ಸೇನೆಗೆ ಗೌರವ ಸಲ್ಲಿಸಿ ಶನಿವಾರ ಟ್ವೀಟ್ ಮಾಡಿದ್ದಾರೆ.
ಜೆಎನ್‌ಯು ವಿವಾದಕ್ಕೆ ಸಂಬಂಧಪಟ್ಟಂತೆ ದೇಶಪ್ರೇಮ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ದೇಶದ ಜನರ ಒಂದೊಂದು ನಿಲುವುಗಳು ಚರ್ಚಾಸ್ಪದವಾಗುತ್ತಲೇ ಇರುತ್ತವೆ. ಈ ಹಿಂದೆ ಗೌತಂ ಗಂಭೀರ್, ಕುಸ್ತಿಪಟು ಯೋಗೇಶ್ವರ್ ದತ್ತಾ ಮತ್ತು ಬಾಕ್ಸರ್ ವಿಜೇಂದರ್ ಸಿಂಗ್ ಅವರು ದೇಶಪ್ರೇಮವನ್ನು ವ್ಯಕ್ತ ಪಡಿಸಿ ತಮ್ಮ ಅಭಿಪ್ರಾಯಗಳನ್ನು ಹೇಳಿದ್ದರು.
ಇದೀಗ ಧೋನಿ, ಸ್ಪೆಷಲ್ ಫೋರ್ಸ್ ಮತ್ತು ಕಮಾಂಡೋಗಳು ನಮ್ಮ ನಿಮ್ಮಂತಿರುವ ಮನುಷ್ಯರೇ ಆಗಿದ್ದು, ದೇಶ ಮೊದಲು ಎಂದು ಹೇಳಿ ಅವರು ಸೇವೆಗೈಯ್ಯುತ್ತಿದ್ದಾರೆ.
ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ನಾವು ಚರ್ಚೆ ಮಾಡುತ್ತಿರುವ ಈ ಹೊತ್ತಿನಲ್ಲಿ ನಮ್ಮ ಸೈನಿಕರು ನಾವು ಸುರಕ್ಷಿತರಾಗಿರುವಂತೆ ಕಾಪಾಡುತ್ತಿದ್ದಾರೆ ಎಂದು ಟ್ವೀಟ್ ಮಾಡಿ ಸೈನಿಕರಿಗೆ ಗೌರವ ಸಲ್ಲಿಸಿದ್ದಾರೆ.
ಟೀಂ ಇಂಡಿಯಾ ನಾಯಕ ಧೋನಿ, ಭಾರತೀಯ ಗಡಿ ರಕ್ಷಣಾ ಪಡೆಯಲ್ಲಿ ಲೆಫ್ಟೆನೆಂಟ್ ಕರ್ನಲ್‌ನ ಗೌರವ ಪದವಿಯನ್ನು ಹೊಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT