ಚೆನ್ನೈ: ಕಳೆದ ವರ್ಷ ಪ್ರಮುಖ ಸುತ್ತಿಗೆ ಪ್ರವೇಶಿಸುವಲ್ಲಿ ವಿಫಲರಾಗಿದ್ದ ಸೋಮ್ದೆವ್ ದೇವ್ವರ್ಮನ್, ಈ ಬಾರಿಯ ಚೆನ್ನೈ ಓಪನ್ ಟೆನಿಸ್ ಟೂರ್ನಿಯ ಮುಖ್ಯ ಘಟ್ಟಕ್ಕೆ ಲಗ್ಗೆ ಇಟ್ಟಿದ್ದಾರೆ.
ಭಾನುವಾರ ನಡೆದ ಅಂತಿಮ ಅರ್ಹತಾ ಸುತ್ತಿನ ಪಂದ್ಯದಲ್ಲಿ ಭಾರತದ ಪ್ರಮುಖ ಸಿಂಗಲ್ಸ್ ಆಟಗಾರ ಸೋಮ್ದೇವ್, ತಮ್ಮ ಪ್ರತಿಸ್ಪರ್ಧಿ ಬ್ರಿಟನ್ನ ಜೇಮ್ಸ್ ವಾರ್ಡ್ ಅವರನ್ನು 2-6, 7-5,
6-4 ಸೆಟ್ಗಳ ಅಂತರದಿಂದ ಜಯಿಸಿದರು. ಸುದೀರ್ಘ ಎರಡು ಗಂಟೆ 3 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ಸೋಮ್ದೇವ್ ಆರಂಭದಲ್ಲಿ ಹಿನ್ನಡೆ ಅನುಭವಿಸಿದರು.
ಮೊದಲ ಸೆಟ್ನಲ್ಲಿ ವಾರ್ಡ್ ವಿರುದ್ಧ ನಿಯಂತ್ರಣ ಸಾಧಿಸಲು ವಿಫಲರಾದ ಸೋಮ್, 2-6ರ ಹಿನ್ನಡೆ ಅನುಭವಿಸಿದರು. ನಂತರ ಹೇರಾಟ ನಡೆಸಿದ ಸ್ಥಳೀಯ ಆಟಗಾರ ಅಂತಿಮ ಎರಡು ಸೆಟ್ಗಳಲ್ಲಿ ಕ್ರಮವಾಗಿ 7-5, 6-4 ಸೆಟ್ಗಳಿಂದ ಮುನ್ನಡೆ ಸಾಧಿಸಿ ಪಂದ್ಯವನ್ನು ತಮ್ಮ ವಶಕ್ಕೆ ತೆಗೆದುಕೊಂಡರು. ಆ ಮೂಲಕ ರಾಮ್ಕಮಾರ್ ರಾಮನಾಥನ್ ಅವರೊಂದಿಗೆ ಪುರುಷರ ಸಿಂಗಲ್ಸ್ ವಿಭಾಗದ ಪ್ರಮುಖ ಸುತ್ತಿಗೆ ತೆರಳಿದ್ದಾರೆ. ಇನ್ನು ಪುರುಷರ ಡಬಲ್ಸ್ನಲ್ಲಿ ಭಾರತದ ಖ್ಯಾತನಾಮರಾದ ಲಿಯಾಂಡರ್ ಪೇಸ್, ರೋಹನ್ ಬೋಪಣ್ಣ ಮತ್ತು ಮಹೇಶ್ ಭೂಪತಿ ಮತ್ತೆ ಕಣಕ್ಕಿಳಿಯುತ್ತಿರುವುದು ಭಾರತದ ಭರವಸೆ ಹೆಚ್ಚಿಸಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos