ಸೈಯದ್ ಮುಷ್ತಾಕ್ ಅಲಿ ಟೂರ್ನಿ ಪಂದ್ಯ(ಸಂಗ್ರಹ ಚಿತ್ರ) 
ಕ್ರೀಡೆ

ಸೈಯದ್ ಮುಷ್ತಾಕ್ ಅಲಿ ಟ್ರೋಫಿ: ಕರ್ನಾಟಕಕ್ಕೆ ಮತ್ತೆ ನಿರಾಸೆ

ಎದುರಾಳಿ ತಂಡದ ಬ್ಯಾಟಿಂಗ್ ವಿಭಾಗವನ್ನು ಕಟ್ಟಿ ಹಾಕಲು ವಿಫಲವಾದ ಕರ್ನಾಟಕ ತಂಡ ಸೈಯದ್ ಮುಷ್ತಾಕ್ ಅಲಿ ಟಿ 20 ಟೂರ್ನಿಯಲ್ಲಿ ಎರಡನೇ ಬಾರಿ ಸೋಲನುಭವಿಸಿತು.

ಕಟಕ್: ಎದುರಾಳಿ ತಂಡದ ಬ್ಯಾಟಿಂಗ್ ವಿಭಾಗವನ್ನು ಕಟ್ಟಿ ಹಾಕಲು ವಿಫಲವಾದ ಕರ್ನಾಟಕ ತಂಡ ಸೈಯದ್ ಮುಷ್ತಾಕ್ ಅಲಿ ಟಿ 20 ಟೂರ್ನಿಯಲ್ಲಿ ಎರಡನೇ ಬಾರಿ ಸೋಲನುಭವಿಸಿತು. ಆ ಮೂಲಕ ಪ್ರಸಕ್ತ ಟೂರ್ನಿಯಲ್ಲಿ ಎರಡನೇ ಪಂದ್ಯದಲ್ಲಿ ಸೋಲನುಭವಿಸಿದೆ.
ಟಾಸ್ ಗೆದ್ದ ಕರ್ನಾಟಕ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ನಂತರ 20 ಓವರ್ ಗಳಲ್ಲಿ 6 ವಿಕೆಟ್ ಗೆ 160 ರನ್ ದಾಖಲಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಉತ್ತರ ಪ್ರದೇಶ ತಂಡ 19 .1 ಓವರ್ ಗಳಲ್ಲಿ 5 ವಿಕೆಟ್ ಗೆ 161 ರನ್ ಗಳಿಸಿ ಜಯ ಸಾಧಿಸಿತು. ಆ ಮೂಲಕ ಉತ್ತರ ಪ್ರದೇಶ ತಂಡ ಆಡಿದ ಮೂರು ಪಂದ್ಯಗಳಲ್ಲಿ ಜಯ ಸಾಧಿಸುವುದರೊಂದಿಗೆ ಅಗ್ರ 12 ಅಂಕ ಸಂಪಾದಿಸಿ ಗುಂಪಿನಲ್ಲಿ ಅಗ್ರ ಸ್ಥಾನ ಪಡೆದಿದೆ.    
ತಹ ಉತ್ತಮ ಆರಂಭ: ಮೊದಲು ಬ್ಯಾಟಿಂಗ್ ಮಾಡಲು ಕಣಕ್ಕಿಳಿದ ಕರ್ನಾಟಕ ತಂಡಕ್ಕೆ ಆರಂಭಿಕ ಮೊಹಮದ್ ತಹ(45 ರನ್, 40 ಎಸೆತ, 5 ಬೌಂಡರಿ, 2 ಸಿಕ್ಸರ್) ಉತ್ತಮ ಆರಂಭ ನೀಡಿದರು. ಮತ್ತೊಬ್ಬ ಆರಂಭಿಕ ಮಯಾಂಕ್ ಅಗರ್ ವಾಲ್ 20, ರಾಬಿನ್ ಉತ್ತಪ್ಪ 25 ರನ್ ಗಳಿಸಿದರು. ಈ ಇಬ್ಬರು ಆಟಗಾರರು ಉತ್ತಮ ಆರಂಭ ಸಿಕ್ಕ ನಂತರ ವಿಕೆಟ್ ಒಪ್ಪಿಸಿದ್ದು ತಂಡಕ್ಕೆ ದುಬಾರಿಯಾಗಿ ಪರಿಣಮಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 World Cup: ಭಾರತಕ್ಕೆ ಬರದಿದ್ದರೇ ಟೂರ್ನಿಯಿಂದ ಹೊರಕ್ಕೆ; ಬಾಂಗ್ಲಾಗೆ ಐಸಿಸಿಯಿಂದ 24 ಗಂಟೆ ಅಂತಿಮ ಗಡುವು!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯ ನಡೆಸಲು ನಾವು ರೆಡಿ, ಆದರೆ RCB ಹಿಂಜರಿಯುತ್ತಿದೆ: ವೆಂಕಟೇಶ್ ಪ್ರಸಾದ್

ಜಂಟಿ ಅಧಿವೇಶನ: ಸದನ ಕದನಕ್ಕೆ ಆಡಳಿತರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಸಿದ್ಧತೆ

ಶಬರಿಮಲೆ ಚಿನ್ನ ಕಳವು ಪ್ರಕರಣ: EDಯಿಂದ 1.3 ಕೋಟಿ ರೂ. ಆಸ್ತಿ ಮುಟ್ಟುಗೋಲು, ಚಿನ್ನದ ಗಟ್ಟಿ ವಶಕ್ಕೆ!

ಕಂಪನಿಯ ಆದಾಯ ಶೇ.202 ರಷ್ಟು ಹೆಚ್ಚಿಸಿದ್ದ ಎಟರ್ನಲ್ ಸಿಇಒ ದೀಪಿಂದರ್ ಗೋಯಲ್ ರಾಜೀನಾಮೆ; ಕಾರಣವೇನು?

SCROLL FOR NEXT