ಟೀಂ ಇಂಡಿಯಾಕ್ಕೆ ಪ್ರತ್ಯೇಕ ಕೋಚ್ 
ಕ್ರೀಡೆ

ಟೀಂ ಇಂಡಿಯಾಕ್ಕೆ ಪ್ರತ್ಯೇಕ ಕೋಚ್

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೊದಲ ಮೂರೂ ಪಂದ್ಯಗಳಲ್ಲಿ ಟೀಂ ಇಂಡಿಯಾ ಸೋಲು ಕಂಡಿರುವುದು ಬಿಸಿಸಿಐನ ಕಣ್ಣು ಕೆಂಪಾಗಿಸಿದೆ. ಈ ಹಿನ್ನೆಲೆಯಲ್ಲಿ, ಟೀಂ ಇಂಡಿಯಾಕ್ಕೆ ಹೊಸ ಕಾಯಕಲ್ಪ ನೀಡಲು ಚಿಂತನೆ ನಡೆಸಿದೆ. ಅದರ ಮೊದಲ ಅನುಷ್ಠಾನವೆಂಬಂತೆ, ಈ ವರ್ಷ...

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೊದಲ ಮೂರೂ ಪಂದ್ಯಗಳಲ್ಲಿ ಟೀಂ ಇಂಡಿಯಾ ಸೋಲು ಕಂಡಿರುವುದು ಬಿಸಿಸಿಐನ ಕಣ್ಣು ಕೆಂಪಾಗಿಸಿದೆ. ಈ ಹಿನ್ನೆಲೆಯಲ್ಲಿ, ಟೀಂ ಇಂಡಿಯಾಕ್ಕೆ ಹೊಸ ಕಾಯಕಲ್ಪ ನೀಡಲು ಚಿಂತನೆ ನಡೆಸಿದೆ. ಅದರ ಮೊದಲ ಅನುಷ್ಠಾನವೆಂಬಂತೆ, ಈ ವರ್ಷ ನಡೆಯಲಿರುವ ಟಿ20 ವಿಶ್ವಕಪ್ ನಂತರ ಪ್ರತ್ಯೇಕ ಚುಟುಕು ಕ್ರಿಕೆಟ್ಗಾಗಿ ಪೂರ್ಣಾವ„ಯ ಕೋಚ್ ನೇಮಿಸಲಾಗುತ್ತದೆ.

ಪ್ರತ್ಯೇಕ ಕೋಚ್ ನೇಮಿಸುವ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ತಿಳಿಸಿದ್ದಾರೆ. ಆದರೆ, ಇದರ ಜತೆಯಲ್ಲಿಯೇ ಅವರು ಆಸ್ಟ್ರೇಲಿಯಾ ನೆಲದಲ್ಲಿ ಭಾರತ ಅನುಭವಿಸಿರುವ ಮುಖಭಂಗದಿಂದ ಬೇಸತ್ತಿರುವ ಸುಳಿವನ್ನೂ ನೀಡಿದರು. ಅವರ ಮಾತುಗಳಿಂದ ಅದು ಸ್ಪಷ್ಟವಾಗುತ್ತಿತ್ತು. ``ಈ ಬಾರಿಯ ವಿಶ್ವ ಟಿ20ವರೆಗೆ ರವಿಶಾಸ್ತ್ರಿಯವರೇ ತಂಡದ ನಿರ್ದೇಶಕರಾಗಿ ಮುಂದುವರಿಯಲಿದ್ದಾರೆ.

ಟೀಂ ಇಂಡಿಯಾಕ್ಕೆ ಪೂರ್ಣ ಪ್ರಮಾಣದ ಕೋಚ್ ಅಗತ್ಯವಿ ದೆ ಎಂಬ ಬೇಡಿಕೆ ತುಂಬಾ ದಿನಗಳಿಂದ ಇತ್ತು. ಇದರ ಮಹತ್ವವನ್ನು ಅರಿತಿರುವ ಬಿಸಿಸಿಐ, ಟಿ20 ವಿಶ್ವಕಪ್ ನಂತರ ಚುಟುಕು ಕ್ರಿಕೆಟ್ ಕೋಚ್ ಅನ್ನು ನೇಮಿಸುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತದೆ'' ಎಂದು ನೇರವಾಗಿ ಶಾಸಿuಉ ವಿರುದ್ಧ ಅಸಮಾಧಾನ ತೋಡಿಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!