ಭಾರತ ತಂಡ (ಸಂಗ್ರಹ ಚಿತ್ರ) 
ಕ್ರೀಡೆ

ವಿಶ್ವಕಪ್ ಗೂ ಮುನ್ನ ಚುಟುಕು ಮುನ್ನುಡಿಗೆ ಸಜ್ಜು

ಭಾರತ ತಂಡ ಇದೀಗ ಮಂಗಳವಾರದಿಂದ ಆರಂಭವಾಗಲಿರುವ ಮೂರು ಟಿ 20 ಪಂದ್ಯ ಸರಣಿಯನ್ನು ಗೆದ್ದು ಅದರೊಂದಿಗೆ ಈ ಬಾರಿಯ ಆಸ್ಟ್ರೇಲಿಯಾ ಪ್ರವಾಸಕ್ಕೆ ಗೌರವಯುತ ವಿದಾಯ ಹೇಳಲು ಸಂಕಲ್ಪ ತೊಟ್ಟಿದೆ.

ಅಡಿಲೇಡ್: ಐದು ಏಕದಿನ ಪಂದ್ಯ ಸರಣಿಯ ಮೊದಲ ನಾಲ್ಕು ಪಂದ್ಯಗಳಲ್ಲಿ ಸೋಲನುಭವಿಸಿ ಸರಣಿಯನ್ನು ಕಳೆದುಕೊಂಡ ಪ್ರವಾಸಿ ಭಾರತ ತಂಡ ಇದೀಗ ಮಂಗಳವಾರದಿಂದ ಆರಂಭವಾಗಲಿರುವ ಮೂರು ಟಿ 20 ಪಂದ್ಯ ಸರಣಿಯನ್ನು ಗೆದ್ದು ಅದರೊಂದಿಗೆ ಈ ಬಾರಿಯ ಆಸ್ಟ್ರೇಲಿಯಾ ಪ್ರವಾಸಕ್ಕೆ ಗೌರವಯುತ ವಿದಾಯ ಹೇಳಲು ಸಂಕಲ್ಪ ತೊಟ್ಟಿದೆ.

ಎಲ್ಲಕ್ಕಿಂತ ಮಿಗಿಲಾಗಿ ಭಾರತದಲ್ಲಿ ಶುರುವಾಗಲಿರುವ ಐಸಿಸಿ ವಿಶ್ವ ಟಿ 20 ಟೂರ್ನಿಗೆ ಇದನ್ನು ಇತ್ತಂಡಗಳೂ ಮುನ್ನುಡಿಯಾಗಿ ಪರಿಗಣಿಸಿದೆ. ಆದರೆ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಅನುಭವಿಸಿದ ಸೋಲಿನಿಂದ ಕೆರಳಿ ಕೆಂಡದಂತಾಗಿರುವ ಆತಿಥೇಯ ಆಸ್ಟ್ರೇಲಿಯಾಗೆ ಮತ್ತೆ ಗೆಲುವಿನ ಹಳಿಗೆ ಮರಳುವ ತವಕ ಶುರುವಾಗಿದೆ. ಮನೀಶ್ ಪಾಂಡೆಯ ಅವಿಸ್ಮರಣೀಯ ಇನ್ನಿಂಗ್ಸ್ ನ ನೆರವಿನೊಂದಿಗೆ 5 ನೇ ಏಕದಿನ ಪಂದ್ಯದಲ್ಲಿ 6 ವಿಕೆಟ್ ಗೆಲುವು ಸಾಧಿಸಿದ ಭಾರತ, ಆಸ್ಟ್ರೇಲಿಯಾದ ಕ್ಲೀನ್ ಸ್ವೀಪ್ ಆಸೆಯನ್ನು ಹೊಸಕಿಹಾಕಿತ್ತು. ಮಾತ್ರವಲ್ಲದೇ ಈ ಸೋಲು ಆತಿಥೇಯರು ತವರಿನಲ್ಲಿ ಕಾಯ್ದುಕೊಂಡುಬಂದಿದ್ದ ಸತತ 18 ಪಂದ್ಯಗಳ ಜೈತ್ರಯಾತ್ರೆಗೆ ತಡೆಯೊಡ್ಡಿತ್ತು.
ಯುವಿಗೆ ಸ್ಥಾನ?: ಸಾಕಷ್ಟು ಬಿಡುವಿನ ಬಳಿಕ ಭಾರತ ತಂಡದಲ್ಲಿ ಸ್ಥಾನ ಪಡೆದಿರುವ ಯುವರಾಜ್ ಸಿಂಗ್ ಅಂತಿಮ ಇಲೆವೆನ್ ನಲ್ಲಿ ಸ್ಥಾನ ಗಿಟ್ಟಿಸುತ್ತಾರೋ ಇಲ್ಲವೋ ಎಂಬ ಕೌತುಕ ಶುರುವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT