ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವ ರಾಹುಲ್ ದ್ರಾವಿಡ್ 
ಕ್ರೀಡೆ

ಹೊಸ ಸವಾಲಿನ ಹೊಸ್ತಿಲಲ್ಲಿ ರಾಹುಲ್ ದ್ರಾವಿಡ್ ಶಿಷ್ಯ ಬಳಗ

ಕಿರಿಯರ ಕ್ರಿಕೆಟ್ ಕಲೆಯನ್ನು ಒರೆಗೆ ಹಚ್ಚಲಿರುವ 19 ವರ್ಷದೊಳಗಿನವರ ವಿಶ್ವಕಪ್ ಪಂದ್ಯಾವಳಿಗೆ ಬುಧವಾರ ಚಾಲನೆ ದೊರೆಯಲಿದೆ. ಬಾಂಗ್ಲಾದೇಶ ಆತಿಥ್ಯ ವಹಿಸಲಿರುವ...

ಢಾಕಾ: ಕಿರಿಯರ ಕ್ರಿಕೆಟ್ ಕಲೆಯನ್ನು ಒರೆಗೆ ಹಚ್ಚಲಿರುವ 19 ವರ್ಷದೊಳಗಿನವರ ವಿಶ್ವಕಪ್ ಪಂದ್ಯಾವಳಿಗೆ ಬುಧವಾರ ಚಾಲನೆ ದೊರೆಯಲಿದೆ.

ಬಾಂಗ್ಲಾದೇಶ ಆತಿಥ್ಯ ವಹಿಸಲಿರುವ ಈ ಟೂರ್ನಿಯ ಮೊದಲ ಹಣಾಹಣಿಯಲ್ಲಿ ಇಂಗ್ಲೆಂಡ್ ಹಾಗೂ ಫಿಜಿ ಮುಖಾಮುಖಿಯಾಗಲಿವೆ. ಟೂರ್ನಿಯ ಆರಂಭಿಕ ದಿನದಿಂದೇ ನಡೆಯಲಿರುವ ಮತ್ತೊಂದು ಪಂದ್ಯದಲ್ಲಿ ಆತಿಥೇಯ ಬಾಂಗ್ಲಾದೇಶ ಹಾಗೂ ದಕ್ಷಿಣ ಆಫ್ರಿಕಾ ಸೆಣಸಲಿವೆ.
 ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ಟೂರ್ನಿಗೆ ಕಾಲಿಟ್ಟಿರುವ ಭಾರತ ಕಿರಿಯರ ತಂಡ, ನಾಳೆ ನಡೆಯಲಿರುವ ತನ್ನ ಮೊದಲ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಲಿದೆ. ಈಗಾಗಲೇ ಮೂರು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ಭಾರತ ತಂಡ ಈ ಬಾರಿಯೂ ಪ್ರಶಸ್ತಿ ಗೆಲ್ಲುವ ಮೂಲಕ ನಾಲ್ಕು ಬಾರಿ ಪ್ರಶಸ್ತಿ ಗೆದ್ದ ತಂಡವೆಂಬ ಹೆಗ್ಗಳಿಕೆಗೆ ಭಾಜನವಾಗಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

ಮರುಕಳಿಸಲಿದೆಯೇ ಕಿರಿಯರ ಸಾಧನೆಯ ಇತಿಹಾಸ?
ಭಾರತದ ಕಿರಿಯ ಕ್ರಿಕೆಟಿಗರಿಗೆ ಇತಿಹಾಸ ನಿರ್ಮಿಸುವ ಮತ್ತೊಂದು ಅವಕಾಶ ಬಂದೊದಗಿದೆ. ಬಹು ನಿರೀಕ್ಷಿತ, 19 ವರ್ಷದೊಳಗಿನವರ ಕ್ರಿಕೆಟ್ ವಿಶ್ವಕಪ್ ಜನವರಿ 27ರಿಂದ ಬಾಂಗ್ಲಾದೇಶದ ಚಿತ್ತಗಾಂಗ್ ನಲ್ಲಿ ಶುರುವಾಗಲಿದೆ. ಭಾರತದ ಹಣಾಹಣಿ 28ರಿಂದ ಆರಂಭವಾಗಲಿದೆ. ಈಗಾಗಲೇ 3 ಬಾರಿ ಈ ಕಪ್ ಗೆದ್ದ ಸಾಧನೆ ಮಾಡಿರುವ ಭಾರತ, ಈ ಬಾರಿ ಅದೇ ಸಾಧನೆಯನ್ನು ಮರುಕಳಿಸುವ ಮೂಲಕ ಅತಿ ಹೆಚ್ಚು ಬಾರಿ ಕಪ್ ಗೆದ್ದ ಸಾಧನೆ ಮಾಡಲಿದೆಯೇ? ಗೊತ್ತಿಲ್ಲ. ಆದರೆ, ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಅಖಾಡಕ್ಕಿಳಿದಿದೆ ಎಂಬ ಕಾರಣಕ್ಕೆ ಮಾತ್ರವಲ್ಲ ಹಾಗೂ ತಂಡದಲ್ಲಿರುವ ಕೆಲವಾರು ಉತ್ತಮ ಪ್ರತಿಭೆಗಳ ಮೇಲಿರುವ ಭರವಸೆಯೂ ಈ ಬಾರಿಯ ನಿರೀಕ್ಷೆಯನ್ನು ಹೆಚ್ಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT