ಸೈನಾ ನೆಹ್ವಾಲ್ ಮತ್ತು ಕಿಡಾಂಬಿ ಶ್ರೀಕಾಂತ್ (ಸಂಗ್ರಹ ಚಿತ್ರ) 
ಕ್ರೀಡೆ

ಆಸ್ಟ್ರೇಲಿಯನ್ ಓಪನ್: ಸಿಂಗಲ್ಸ್ ಕ್ವಾರ್ಟರ್ ಫೈನಲ್ ಗೆ ಸೈನಾ, ಶ್ರೀಕಾಂತ್ ಲಗ್ಗೆ

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯನ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಮತ್ತು ಕಿಡಾಂಬಿ ಶ್ರೀಕಾಂತ್ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ..

ಸಿಡ್ನಿ: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯನ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಮತ್ತು ಕಿಡಾಂಬಿ ಶ್ರೀಕಾಂತ್  ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.

ಸಿಡ್ನಿಯ ಒಲಿಂಪಿಕ್ಸ್ ಪಾರ್ಕ್ ನಲ್ಲಿ ಇಂದು ನಡೆದ ಮಹಿಳೆಯರ ಸಿಂಗಲ್ಸ್ ಪಂದ್ಯದಲ್ಲಿ ಮಲೇಷ್ಯಾದ ಆಟಗಾರ್ತಿ ಜಿನ್ ವೈ ಗೊಹ್ ವಿರುದ್ಧ ಭಾರತದ ಸೈನಾ ನೆಹ್ವಾಲ್ 21-12, 21-14 ನೇರ ಸೆಟ್  ಗಳ ಅಂತರದಲ್ಲಿ ಪಾರಾಭವಗೊಳಿಸಿದರು. ಪಂದ್ಯದ ಆರಂಭದಿಂದಲೂ ಮಲೇಷ್ಯಾದ ಆಟಗಾರ್ತಿ ವಿರುದ್ಧ ಅಕ್ರಮಣಕಾರಿ ಆಟಕ್ಕೆ ಮೊರೆ ಹೋಗಿದ್ದ ಸೈನಾ, ಸುಲಭವಾಗಿ ಮೊದಲ ಸೆಟ್ ಅನ್ನು  ಜಯಿಸಿದ್ದರು. ಆದರೆ ಎರಡನೇ ಸೆಟ್ ನಲ್ಲಿ ಮಲೇಷ್ಯನ್ ಆಟಗಾರ್ತಿ ಸೈನಾಗೆ ತಿರುಗೇಟು ನೀಡುವ ಪ್ರಯತ್ನ ಮಾಡಿದರಾದರೂ, ಉತ್ತಮ ಫಾರ್ಮ್ ನಲ್ಲಿರುವ ಸೈನಾ ಯಾವುದೇ  ಸಂದರ್ಭದಲ್ಲಿಯೂ ತಮ್ಮ ಹಿಡಿತ ಬಿಟ್ಟುಕೊಡಲಿಲ್ಲ. ಅಂತಿಮವಾಗಿ ಸೈನಾ ಜಿನ್ ವೈ ಗೊಹ್ ವಿರುದ್ಧ 21-12, 21-14 ನೇರ ಸೆಟ್ ಗಳ ಅಂತರದಲ್ಲಿ ಗೆಲುವು ಸಾಧಿಸಿದರು.

ಕ್ವಾರ್ಟರ್ ಫೈನಲ್ ನಲ್ಲಿ ಸೈನಾ ವಿಶ್ವದ ನಂಬರ್ 2 ಸ್ಥಾನದಲ್ಲಿರುವ ರ್ಯಾಟ್ಚನೋಕ್ ಇಂಟಾನಾನ್ ಅವರ ವಿರುದ್ಧ ಸೆಣಸಲಿದ್ದಾರೆ.

ಮತ್ತೊಂದು ಪಂದ್ಯದಲ್ಲಿ ಇತ್ತೀಚೆಗಷ್ಟೇ ಬ್ಯಾಡ್ಮಿಂಟನ್ ನಲ್ಲಿ ಒಂದು ಸ್ಥಾನ ಕೆಳಕ್ಕೆ ಕುಸಿದಿದ್ದ ಕಿಡಾಂಬಿ ಶ್ರೀಕಾಂತ್ ಅವರು ಇಂಡೋನೇಷ್ಯಾದ ಸೋನಿ ಡ್ವಿಕುನ್ಕೊರೋ ವಿರುದ್ಧ 4-6, 13-15 ನೇರ  ಸೆಟ್ ಗಳ ಅಂತರದ ಜಯ ದಾಖಲಿಸಿ, ಕ್ವಾರ್ಟರ್ ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ. ಈ ಹಿಂದಿನ ಹಲವು ಸರಣಿಗಳಲ್ಲಿ ನಿರಾಶಾದಾಯಕ ಆರಂಭ ಕಂಡಿದ್ದ ಶ್ರೀಕಾಂತ್ ಈ ಭಾರಿ ಆಸ್ಟ್ರೇಲಿಯನ್  ಓಪನ್ ನಲ್ಲಿ ಉತ್ತಮ ಆರಂಭ ಪಡೆದು ತಮ್ಮ ಆತ್ಮ ವಿಶ್ವಾಸ ಹೆಚ್ಚಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT