ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ (ಸಂಗ್ರಹ ಚಿತ್ರ) 
ಕ್ರೀಡೆ

ಭಾರತ ಟಿ20 ತಂಡ ವಿಶ್ವದ ಯಾವುದೇ ದೇಶದಲ್ಲಿ ಆಡಲು ಸಮರ್ಥ: ಧೋನಿ

ಏಷ್ಯಾಕಪ್ ಟಿ20 ಟೂರ್ನಿಯಲ್ಲಿ ಅಜೇಯವಾಗಿ ಉಳಿದಿರುವ ಭಾರತ ತಂಡ ವಿಶ್ವದ ಯಾವುದೇ ದೇಶದಲ್ಲಿ ಕ್ರಿಕೆಟ್ ಆಡಲು ಸಮರ್ಥವಾಗಿದೆ ಎಂದು ಭಾರತ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಹೇಳಿದ್ದಾರೆ...

ಮೀರ್ ಪುರ: ಏಷ್ಯಾಕಪ್ ಟಿ20 ಟೂರ್ನಿಯಲ್ಲಿ ಅಜೇಯವಾಗಿ ಉಳಿದಿರುವ ಭಾರತ ತಂಡ ವಿಶ್ವದ ಯಾವುದೇ ದೇಶದಲ್ಲಿ ಕ್ರಿಕೆಟ್ ಆಡಲು ಸಮರ್ಥವಾಗಿದೆ ಎಂದು ಭಾರತ ಕ್ರಿಕೆಟ್ ತಂಡದ  ನಾಯಕ ಮಹೇಂದ್ರ ಸಿಂಗ್ ಧೋನಿ ಹೇಳಿದ್ದಾರೆ.

ಮೀರ್ ಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಹೇಂದ್ರ ಸಿಂಗ್ ಧೋನಿ, ಪ್ರಸ್ತುತ ಭಾರತ ಟಿ20 ತಂಡ ಸಮತೋಲಿತವಾಗಿದ್ದು, ಬೌಲಿಂಗ್, ಬ್ಯಾಟಿಂಗ್ ಮತ್ತು ಫೀಲ್ಡಿಂಗ್ ಈ ಮೂರು  ವಿಭಾಗಗಳಲ್ಲಿಯೂ ಸಮರ್ಥವಾಗಿದೆ. ಈಗ ನಾವು ವಿಶ್ವದ ಯಾವುದೇ ತಂಡವನ್ನು ಯಾವುದೇ ದೇಶದಲ್ಲಿ ಎದುರಿಸಲು ಸಿದ್ಧವಿದ್ದೇವೆ ಎಂದು ಹೇಳಿದರು.

ಟಿ20 ಮಾದರಿಯ ಕ್ರಿಕೆಟ್ ನಲ್ಲಿ ಪ್ರಸಕ್ತ ವರ್ಷ ಭಾರತಕ್ಕೆ ಹರ್ಷದಾಯಕವಾಗಿದ್ದು, ಕಳೆದ 10 ಪಂದ್ಯಗಳ ಪೈಕಿ ಭಾರತ ತಂಡ 9 ಪಂದ್ಯಗಳನ್ನು ಗೆದ್ದಿದೆ. ಪ್ರಸ್ತುತವಿರುವ ಭಾರತ ತಂಡ ಯಾವುದೇ  ಪರಿಸ್ಥಿತಿಯ ಪಿಚ್ ನಲ್ಲಿ ಆಡಲು ಸಿದ್ಧವಿದೆ. ಆದರೆ ಇದು ಏಕದಿನ ಹಾಗೂ ಟೆಸ್ಟ್ ಪಂದ್ಯಗಳಿಗೆ ಅನ್ವಯಿಸುವುದಿಲ್ಲ. ಈಗ ನಮ್ಮಲ್ಲಿ ಮೂವರು ಪ್ರಮುಖ ವೇಗಿಗಳಿದ್ದು, ಇಬ್ಬರು ಸ್ಪಿನ್ನರ್ ಗಳಿದ್ದಾರೆ.  ಅವಶ್ಯಕತೆ ಇದ್ದಾಗ ಬಳಸಿಕೊಳ್ಳಲು ಪಾರ್ಟ್ ಟೈಮ್ ಬೌಲರ್ ಗಳು ಕೂಡ ಇದ್ದಾರೆ. ನನ್ನ ಪ್ರಕಾರ ಇದೊಂದು ಉತ್ತಮ ತಂಡ ಸಂಯೋಜನೆಯಾಗಿದೆ. ಇನ್ನು ಬ್ಯಾಟಿಂಗ್ ವಿಭಾಗಕ್ಕೆ ಬಂದರೆ  8ನೇ ಕ್ರಮಾಂಕದವರೆಗೂ ಬ್ಯಾಟಿಂಗ್ ಮಾಡುವ ಸಾಮರ್ಥ್ಯ ನಮ್ಮಲ್ಲಿದೆ. ಹೀಗಾಗಿ ಬೌಲಿಂಗ್ ನಲ್ಲಿ ಒಂದಷ್ಟು ಎಕ್ಸ್ ಟ್ರಾ ರನ್ ಗಳು ಹರಿದರೂ, ಬ್ಯಾಟಿಂಗ್ ನಲ್ಲಿ ಅದನ್ನು  ಸರಿದೂಗಿಸಿಕೊಳ್ಳಬಹುದು ಎಂದು ಧೋನಿ ಹೇಳಿದರು.

ಇನ್ನು ಏಷ್ಯಾಕಪ್ ಫೈನಲ್ ಪಂದ್ಯದ ಕುರಿತು ಮಾತನಾಡಿದ ಧೋನಿ, ನಿಜಕ್ಕೂ ಬಾಂಗ್ಲಾದೇಶದ ಎದುರಿಗಿನ ಫೈನಲ್ ಪಂದ್ಯ ಕಠಿಣವಾಗಿರಲಿದೆ. ಸರಣಿಯಲ್ಲಿ ಬಾಂಗ್ಲಾದೇಶ ನಿಜಕ್ಕೂ ಚೆನ್ನಾಗಿ  ಆಡಿದೆ. ಬಾಂಗ್ಲಾದೇಶಕ್ಕೆ ತವರಿನ ಬೆಂಬಲದೊಂದಿಗೆ ಪಿಚ್ ನ ಗುಣ ಚೆನ್ನಾಗಿ ತಿಳಿದಿದೆ. ಹೀಗಾಗಿ ಅವರ ನೆಲದಲ್ಲಿ ಅವರನ್ನು ಸೋಲಿಸುವುದು ಕಠಿಣ. ನಾವು ಕಠಿಣ ಪರಿಶ್ರಮ ಹಾಕದ ಹೊರತು  ಬಾಂಗ್ಲಾದೇಶವನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಿಲ್ಲ. ಮೊದಲಿಗೆ ಬಾಂಗ್ಲಾದೇಶದ ಪ್ರಬಲ ಬ್ಯಾಟಿಂಗ್ ಅನ್ನು ನಾವು ತಡೆಯಬೇಕು. ಪ್ರಮುಖ ಬ್ಯಾಟ್ಸಮನ್ ಗಳ ರನ್ ಪ್ರವಾಹಕ್ಕೆ ಬ್ರೇಕ್  ಹಾಕಬೇಕು. ಬಳಿಕ ಬಲಿಷ್ಠ ಬೌಲಿಂಗ್ ಪಡೆಯ ವಿರುದ್ಧ ಸಮರ್ಥವಾಗಿ ಬ್ಯಾಟ್ ಬೀಸಬೇಕು. ಆಗ ಮಾತ್ರ ಗೆಲುವು ಸಾಧ್ಯ ಎಂದು ಧೋನಿ ಹೇಳಿದ್ದಾರೆ.

ಒಟ್ಟಾರೆ ಬಲಿಷ್ಠ ತಂಡಗಳಾದ ಶ್ರೀಲಂಕಾ ಮತ್ತು ಪಾಕಿಸ್ತಾನ ತಂಡಗಳನ್ನೇ ಹೊರಹಾಕಿ ಫೈನಲ್ ಗೆ ಲಗ್ಗೆ ಇಟ್ಟಿರುವ ಬಾಂಗ್ಲಾದೇಶ ತಂಡ ಭಾರತಕ್ಕೆ ಕಠಿಣ ಸಾವಾಲೆಸೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT