ಭಾರತ- ಬಾಂಗ್ಲಾ ನಡುವಿನ ಪಂದ್ಯದ ರೋಚಕ ಕ್ಷಣ (ಚಿತ್ರಕೃಪೆ: ಕ್ರಿಕ್ ಇನ್ಫೋ) 
ಕ್ರೀಡೆ

ಏಷ್ಯಾಕಪ್ ಟಿ20 ಫೈನಲ್: ಭಾರತಕ್ಕೆ ಗೆಲ್ಲಲು 121 ರನ್ ಗುರಿ

ಏಷ್ಯಾಕಪ್ ಟಿ20 ಫೈನಲ್ ಪಂದ್ಯ ಕುತೂಹಲಕಾರಿ ಘಟ್ಟ ತಲುಪಿದ್ದು, ನಿಗದಿತ 15 ಓವರ್ ಗಳಲ್ಲಿ ಬಾಂಗ್ಲಾದೇಶ 5 ವಿಕೆಟ್ ನಷ್ಟಕ್ಕೆ 120 ರನ್ ಪೇರಿಸಿದೆ...

ಮೀರ್ ಪುರ: ಏಷ್ಯಾಕಪ್ ಟಿ20 ಫೈನಲ್ ಪಂದ್ಯ ಕುತೂಹಲಕಾರಿ ಘಟ್ಟ ತಲುಪಿದ್ದು, ನಿಗದಿತ 15 ಓವರ್ ಗಳಲ್ಲಿ ಬಾಂಗ್ಲಾದೇಶ 5 ವಿಕೆಟ್ ನಷ್ಟಕ್ಕೆ 120 ರನ್ ಪೇರಿಸಿದೆ.

ಮಳೆಯಿಂದಾಗಿ 15 ಓವರ್ ಗಳಿಗೆ ಸಮೀತವಾದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ಸಬ್ಬೀರ್ ರೆಹಮಾನ್ (32 ರನ್), ಶಕೀಬ್ ಅಲ್ ಹಸನ್ (21 ರನ್) ಮತ್ತು ಮಹಮದುಲ್ಲಾ (33 ರನ್) ಅವರ ಸಮಯೋಚಿತ ಆಟದ ನೆರವಿನಿಂದ ನಿಗದಿತ 15  ಓವರ್ ಗಳಲ್ಲಿ 120 ರನ್ ಗಳ ಸಾವಾಲಿನ ಮೊತ್ತ ಪೇರಿಸಿತು. ಭಾರತೀಯ ಬೌಲರ್ ಗಳ ಎದುರು ಆರಂಭದಲ್ಲಿ ಕೊಂಚ ತಿಣುಕಾಡಿದ ಬಾಂಗ್ಲಾ ಬ್ಯಾಟ್ಸಮನ್ ಗಳು ಬಳಿಕ ಚೇತರಿಸಿಕೊಂಡು ಕ್ರಮೇಣ ರನ್ ಗತಿ ಏರಿಸಿದರು. ಉಳಿದಂತೆ ತಮೀಮ್ ಇಕ್ಬಾಲ್ 13, ಸೌಮ್ಯ ಸರ್ಕಾರ್ 14 ಮತ್ತು ಮಷ್ಫಿಕರ್ ರೆಹಮಾನ್ 4 ರನ್  ಸೇರಿಸಿದರು. ಇನ್ನು ನಾಯಕ ಮುಷ್ರಫೆ ಮೋರ್ತಾಜಾ ಶೂನ್ಯಕ್ಕೆ ಔಟ್ ಆಗುವ ಮೂಲಕ ಬಾಂಗ್ಲಾ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದರು.

ಶಿಸ್ತಿನ ಬೌಲಿಂಗ್ ಪ್ರದರ್ಶಿಸಿದ ಭಾರತೀಯ ಬೌಲರ್ ಗಳು, ತಮ್ಮ ಸಂಘಟಿತ ಆಟದೊಂದಿಗೆ ಬಾಂಗ್ಲಾ ಬೃಹತ್ ಮೊತ್ತ ಪೇರಿಸದಂತೆ ನೋಡಿಕೊಂಡರು. ಭಾರತದ ಪರ ಆಶೀಶ್ ನೆಹ್ರಾ, ಆರ್ ಅಶ್ವಿನ್, ಬುಮ್ರಾಹ್ ಮತ್ತು ರವೀಂದ್ರ ಜಡೇಜಾ ತಲಾ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT