ವಿಶ್ವನಾಥನ್ ಆನಂದ್ (ಸಂಗ್ರಹ ಚಿತ್ರ) 
ಕ್ರೀಡೆ

ಚೆಸ್: 3 ದಶಕಗಳ ಬಳಿಕ ಅಗ್ರ ಸ್ಥಾನ ಕೈಚೆಲ್ಲಿದ ಆನಂದ್

ಸತತ ಐದು ಬಾರಿ ವಿಶ್ವ ಚಾಂಪಿಯನ್ ಆಗಿ ಮೆರೆದಿದ್ದ ಭಾರತದ ಚೆಸ್ ಆಟಗಾರ ವಿಶ್ವನಾಥನ್ ಆನಂದ 3 ದಶಕಗಳ ಬಳಿಕ ಇದೇ ಮೊದಲ ಬಾರಿಗೆ ತಮ್ಮ ಅಗ್ರಸ್ಥಾನವನ್ನು ಕಳೆದುಕೊಂಡಿದ್ದಾರೆ..

ಮಾಸ್ಕೋ: ಸತತ ಐದು ಬಾರಿ ವಿಶ್ವ ಚಾಂಪಿಯನ್ ಆಗಿ ಮೆರೆದಿದ್ದ ಭಾರತದ ಚೆಸ್ ಆಟಗಾರ ವಿಶ್ವನಾಥನ್ ಆನಂದ 3 ದಶಕಗಳ ಬಳಿಕ ಇದೇ ಮೊದಲ ಬಾರಿಗೆ ತಮ್ಮ ಅಗ್ರಸ್ಥಾನವನ್ನು  ಕಳೆದುಕೊಂಡಿದ್ದಾರೆ.

ಬುಧವಾರ 2016ರ ಕ್ಯಾಂಡಿಡೇಟ್ಸ್ ಚೆಸ್ ಟೂರ್ನಿಯ 4ನೇ ಸುತ್ತಿನ ಪಂದ್ಯದಲ್ಲಿ ರಷ್ಯಾದ ಸೆರ್ಗಿ ಕರ್ಜಾಕಿನ್ ವಿರುದ್ಧ ಆಘಾತಕಾರಿ ಸೋಲು ಕಂಡ ಬೆನ್ನಲ್ಲೇ ಭಾರತದ ನಂ.1 ಚೆಸ್ ಆಟಗಾರ  ಎನ್ನುವ ಪಟ್ಟವನ್ನು ಆನಂದ್ ಪೆಂಟಾಲಾ ಹರಿಕೃಷ್ಣಗೆ ಬಿಟ್ಟುಕೊಟ್ಟಿದ್ದಾರೆ. ಎಲೋ ರೇಟಿಂಗ್‌ನಲ್ಲಿ ಆನಂದ್ 2763 ಅಂಕ ಹೊಂದಿದ್ದರೆ, ಪಿ. ಹರಿಕೃಷ್ಣ 2763.3 ಅಂಕ ಗಳಿಸುವ ಮೂಲಕ  ಭಾರತದ ನಂ.1 ಚೆಸ್ ಆಟಗಾರ ಎನಿಸಿಕೊಂಡಿದ್ದಾರೆ. ಎಲೋ ಜಾಗತಿಕ ರೇಟಿಂಗ್‌ನಲ್ಲಿ ಹರಿಕೃಷ್ಣ 13ನೇ ಸ್ಥಾನಕ್ಕೇರಿದ್ದರೆ, ಆನಂದ್ 14ನೇ ಸ್ಥಾನಕ್ಕೆ ಕುಸಿದಿದ್ದಾರೆ. ಆದರೆ ಆನಂದ್ ಮುಂದಿನ  ಪಂದ್ಯ ಗೆದ್ದರೆ ಮತ್ತೆ ಭಾರತದ ನಂ. 1 ಆಟಗಾರ ಎಂಬ ಶ್ರೇಯ ಒಲಿಸಿಕೊಳ್ಳಲಿದ್ದಾರೆ.

ಇನ್ನೊಂದೆಡೆ ಕಳಪೆ ಫಾರ್ಮ್‌ನಲ್ಲಿರುವ ಆನಂದ್ ಕಳೆದ 26 ಪಂದ್ಯಗಳಲ್ಲಿ 8 ಪಂದ್ಯವನ್ನು ಸೋತಿದ್ದು, ಉಳಿದ ಪಂದ್ಯವನ್ನು ಡ್ರಾ ಮಾಡಿಕೊಂಡಿದ್ದಾರೆ. ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸೆನ್  ವಿರುದ್ಧ ಚೆಸ್ ವಿಶ್ವಚಾಂಪಿಯನ್‌ಷಿಪ್‌ನ ಎದುರಾಳಿಯನ್ನು ನಿರ್ಧರಿಸಲು ಕ್ಯಾಂಡಿಡೇಟ್ಸ್ ಟೂರ್ನಿಯಲ್ಲಿ ಆಡಿಸಲಾಗುತ್ತಿದ್ದು, ಇದರಲ್ಲಿ ವಿಜೇತರಾದ ಆಟಗಾರ ಕಾರ್ಲ್‌ಸೆನ್ ವಿರುದ್ಧ ಆಡಲಿದ್ದಾರೆ.

25 ವರ್ಷದ ಕರ್ಜಾಕಿನ್ ಇದೇ ಮೊದಲ ಬಾರಿಗೆ ಆನಂದ್ ವಿರುದ್ಧ ಗೆಲುವು ಸಾಧಿಸಿದ್ದು, ಕ್ಯಾಂಡಿಡೇಟ್ಸ್ ಟೂರ್ನಿಯ 4 ಸುತ್ತಿನ ಪಂದ್ಯಗಳ ಅಂತ್ಯಕ್ಕೆ 3 ಅಂಕದೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.  ಆನಂದ್ 2 ಅಂಕದೊಂದಿಗೆ ಜಂಟಿ 3ನೇ ಸ್ಥಾನದಲ್ಲಿದ್ದು, ಇನ್ನೂ 10 ಸುತ್ತಿನ ಆಟ ಬಾಕಿ ಉಳಿದಿದೆ. ಅತಿ ಚಿಕ್ಕ ವಯಸ್ಸಿನಲ್ಲೇ ಗ್ರಾಂಡ್ ಮಾಸ್ಟರ್ ಆದ ರಷ್ಯಾ ಆಟಗಾರ ಎನ್ನುವ ಕೀರ್ತಿ  ಹೊಂದಿರುವ ಕರ್ಜಾಕಿನ್, 12ನೇ ವರ್ಷದಲ್ಲೇ ವೃತ್ತಿಪರ ಚೆಸ್‌ಗೆ ಪದಾರ್ಪಣೆ ಮಾಡಿ ಕಳೆದ ವರ್ಷ ಚೆಸ್ ವಿಶ್ವಕಪ್ ಕೂಡ ಜಯಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT