ಕೇರಳ ಸಿಎಂ ಭೇಟಿ ಮಾಡಿದ ಸಚಿನ್, ಚಿರಂಜೀವಿ, ನಾಗಾರ್ಜುನ್ ಹಾಗೂ ಇತರರು 
ಕ್ರೀಡೆ

ಸಚಿನ್ ಸಹ ಮಾಲೀಕತ್ವದ ಕೇರಳ ಬ್ಲಾಸ್ಟರ್ಸ್ ಫುಟ್​ಬಾಲ್ ಕ್ಲಬ್ ಗೆ ಚಿರಂಜೀವಿ, ನಾಗಾರ್ಜುನ್ ಎಂಟ್ರಿ

ನಟ ಮತ್ತು ರಾಜಕಾರಣಿ ಚಿರಂಜೀವಿ, ನಟ ಅಕ್ಕಿನೇನಿ ನಾಗಾರ್ಜುನ ಸೇರಿದಂತೆ ಭಾರತೀಯ ಚಿತ್ರೋದ್ಯಮದ ಕೆಲವು ದಿಗ್ಗಜರು....

ತಿರುವನಂತಪುರಂ: ನಟ ಮತ್ತು ರಾಜಕಾರಣಿ ಚಿರಂಜೀವಿ, ನಟ ಅಕ್ಕಿನೇನಿ ನಾಗಾರ್ಜುನ ಸೇರಿದಂತೆ ಭಾರತೀಯ ಚಿತ್ರೋದ್ಯಮದ ಕೆಲವು ದಿಗ್ಗಜರು ಬುಧವಾರ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಸಹ ಮಾಲೀಕತ್ವದ ಕೇರಳ ಬ್ಲಾಸ್ಟರ್ಸ್ ಫುಟ್​ಬಾಲ್ ಕ್ಲಬ್ ಗೆ ಸೇರಿಕೊಂಡಿದ್ದಾರೆ.
ಚಿರಂಜೀವಿ, ನಾಗಾರ್ಜುನ, ನಿರ್ಮಾಪಕ ಅಲ್ಲು ಅರವಿಂದ್ ಹಾಗೂ ಉದ್ಯಮಿ, ಸೀರಿಯಲ್ ನಿರ್ಮಾಪಕ ನಿಮ್ಮಗಡ ಪ್ರಸಾದ್ ಅವರು ಬ್ಲಾಸ್ಟರ್ಸ್ ಸ್ಪೋರ್ಟ್ಸ್ ಪ್ರೈ, ಲಿ.ನಲ್ಲಿ ಹೂಡಿಕೆ ಮಾಡುವ ಮೂಲಕ ಸಚಿನ್ ಗೆ ಕೈಜೋಡಿಸಿದ್ದಾರೆ.
ಸಚಿನ್ ಹಾಗೂ ಕೇರಳ ಸರ್ಕಾರ ಜಂಟಿಯಾಗಿ ಕೇರಳದಲ್ಲಿ ಫುಟ್​ಬಾಲ್ ಅಕಾಡೆಮಿ ಸ್ಥಾಪನೆಗೆ ಸಿದ್ಧತೆ ನಡೆಸಿದ್ದು, ಈ ಸಂಬಂಧ ಸಚಿನ್ ಹಾಗೂ ಸಹ ಮಾಲೀಕರಾದ ಚಿರಂಜೀವಿ, ನಾಗಾರ್ಜುನ್ ಹಾಗೂ ಇತರರು ಇಂದು ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಮುಂಬರುವ ದಿನಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯ ಮಾಡುವಂಥ 100ಕ್ಕೂ ಹೆಚ್ಚು ಫುಟ್​ಬಾಲ್ ಆಟಗಾರರನ್ನು ತಯಾರು ಮಾಡುವುದು ಅಕಾಡೆಮಿ ಪ್ರಮುಖ ಉದ್ದೇಶವಾಗಿದೆ.
ಕೇರಳದಲ್ಲಿ ಫುಟ್​ಬಾಲ್ ಕ್ರೀಡೆ ಸಾಕಷ್ಟು ಜನಪ್ರಿಯ ಆಗಿರುವ ಹಿನ್ನೆಲೆಯಲ್ಲಿ ಪುಟ್​ಬಾಲ್ ಅಕಾಡೆಮಿ ನಿರ್ಮಾಣಕ್ಕೆ ಸಂಬಂಧಿಸಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಬುಧವಾರ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಅಕಾಡೆಮಿಯಿಂದ ಸ್ಥಳೀಯ ಆಸಕ್ತರಿಗೆ ಉತ್ತಮ ವೇದಿಕೆ ನಿರ್ಮಾಣವಾಗಲಿದ್ದು, ಅಕಾಡೆಮಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳನ್ನು, ತರಬೇತಿಯನ್ನು ನೀಡುವುದು ಯೋಜನೆಯ ಪ್ರಮುಖ ಉದ್ದೇಶಗಳಲ್ಲೊಂದಾಗಿದೆ. ಕೇರಳ ಬ್ಲಾಸ್ಟಸ್ ಒಟ್ಟಾರೆ ಯೋಜನೆಯ ಮುತುವರ್ಜಿ ವಹಿಸಲಿದ್ದು, ಅಕಾಡೆಮಿಯನ್ನು ನಡೆಸುವ ಎಲ್ಲಾ ಜವಾಬ್ದಾರಿ ಹೊತ್ತುಕೊಳ್ಳಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT