ಕ್ರೀಡೆ

ತಂಡದ ಉತ್ತಮ ಪ್ರದರ್ಶನಕ್ಕೆ ಸಂಘಟಿತ ನಾಯಕತ್ವ ಸಹಕಾರಿ: ಹಾಕಿ ತಂಡದ ನಾಯಕ ಶ್ರೀಜೇಶ್

ತಂಡ ಉತ್ತಮ ಪ್ರದರ್ಶನ ನೀಡುವುದಕ್ಕೆ ಸಂಘಟಿತ ನಾಯಕತ್ವವೂ ಸಹಕಾರಿ ಎಂದು ಭಾರತ ಹಾಕಿ ತಂಡದ ನಾಯಕ ಶ್ರೀಜೇಶ್ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು: ತಂಡ ಉತ್ತಮ ಪ್ರದರ್ಶನ ನೀಡುವುದಕ್ಕೆ ಸಂಘಟಿತ ನಾಯಕತ್ವವೂ ಸಹಕಾರಿ ಎಂದು ಭಾರತ ಹಾಕಿ ತಂಡದ ನಾಯಕ ಶ್ರೀಜೇಶ್ ಅಭಿಪ್ರಾಯಪಟ್ಟಿದ್ದಾರೆ.

ಸಂಘಟಿತ ನಾಯಕತ್ವ ತಂಡದ ಪ್ರತಿಯೊಬ್ಬ ಆಟಗಾರನಿಗೂ ತಮ್ಮ ಜವಾಬ್ದಾರಿಯನ್ನು ಅರಿತು ಕ್ರೀಡೆ ಮೇಲೆ ಗಮನ ಕೇಂದ್ರೀಕರಿಸಲು ನೆರವಾಗಲಿದೆ, ನನ್ನ ಮಟ್ಟಿಗೆ ಸಂಘಟಿತ ನಾಯಕತ್ವ ಗೋಲ್ ಕೀಪಿಂಗ್ ನತ್ತ ಹೆಚ್ಚು ಗಮನ ಕೇಂದ್ರೀಕರಿಸಲು ಸಹಕಾರಿಯಾಗಿದೆ ಎಂದು ಶ್ರೀಜೇಶ್ ಹೇಳಿದ್ದಾರೆ.

ತಮಗೆ ಗೋಲ್ ಕೀಪಿಂಗ್ ನತ್ತ ಹೆಚ್ಚು ಗಮನ ಕೇಂದ್ರೀಕರಿಸಲು ಸಾಧ್ಯವಾಗುವಂತೆ ಸಂಘಟಿತ ನಾಯಕತ್ವದಿಂದ ಉಳಿದ ಆಟಗಾರರಿಗೆ ಅವರಿಗೆ ವಹಿಸಿರುವ ಕ್ಷೇತ್ರಗಳತ್ತ ಗಮನ ಕೇಂದ್ರೀಕರಿಸಬಹುದು. ಹಾಕಿ ವ್ಯಕ್ತಿಗತವಾಗಿ ನಡೆಯುವ ಕ್ರೀಡೆ. ಅದು ತಂಡದ ಸಂಘಟಿತ ಬಲದಿಂದ ನಡೆಯುವ ಕ್ರೀಡೆ, ತಂಡದ ನಾಯಕನ ಮೇಲೆ ಮಾತ್ರವೇ ಇಡೀ ಕ್ರೀಡೆ ಅವಲಂಬಿತವಾಗಿರುವುದಿಲ್ಲ ಎಂದು ಶ್ರೀಜೇಶ್ ತಿಳಿಸಿದ್ದಾರೆ.

ಕಾಮನ್ ವೆಲ್ತ್ ಕ್ರೀಡಾಕೂಟಗಳಂತಹ ಕ್ರೀಡಾಕೂಟಗಳನ್ನು ಗಮನದಲ್ಲಿಟ್ಟುಕೊಂಡು ತಂಡವನ್ನು ತಯಾರು ಮಾಡಲಾಗುತ್ತದೆ. ಡಿಫೆಂಡರ್ ಬೀರೇಂದ್ರ ಲಕ್ರಾ ಗಾಯದ ಸಮಸ್ಯೆಯಿಂದ ರಿಯೋ ಒಲಂಪಿಕ್ಸ್ ನಲ್ಲಿ ಆಡಲು ಸಾಧ್ಯವಾಗಲಿಲ್ಲ. ಆದರೆ ಅವರ ಬದಲು ಹರ್ಮನ್ ಪ್ರೀತ್ ಸಿಂಗ್ ಸುರೇಂದ್ರರ ಕುಮಾರ್ ಇದ್ದರು ಅವರು ರಿಯೋ ಒಲಂಪಿಕ್ಸ್ ನಲ್ಲಿ ಆಡುವ ಅವಕಾಶವನ್ನು ಉತ್ತಮ ಸದುಪಯೋಗಪಡಿಸಿಕೊಂಡರು ಎಂದು ಶ್ರೀಜೇಶ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT