ಸಂಗ್ರಹ ಚಿತ್ರ 
ಕ್ರೀಡೆ

ಕಾಮನ್ ವೆಲ್ತ್ ರೆಸ್ಲಿಂಗ್ ಚಾಂಪಿಯನ್ ಷಿಪ್: ಭಾರತದ ಸುಶೀಲ್ ಕುಮಾರ್, ಸಾಕ್ಷಿ ಮಲ್ಲಿಕ್ ಗೆ ಚಿನ್ನ

ದಕ್ಷಿಣ ಆಫ್ರಿಕಾದ ಜೋಹನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ರೆಸ್ಲಿಂಗ್ ಚಾಂಪಿಯನ್ ಷಿಪ್ ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಇದೀಗ ಭಾರತದ ಕುಸ್ತಿ ಪಟುಗಳಾದ ಸಾಕ್ಷಿ ಮಲ್ಲಿಕ್ ಹಾಗೂ ಸುಶೀಲ್ ಕುಮಾರ್ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.

ಜೊಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾದ ಜೋಹನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ರೆಸ್ಲಿಂಗ್ ಚಾಂಪಿಯನ್ ಷಿಪ್ ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಇದೀಗ ಭಾರತದ ಕುಸ್ತಿ ಪಟುಗಳಾದ ಸಾಕ್ಷಿ ಮಲ್ಲಿಕ್ ಹಾಗೂ ಸುಶೀಲ್ ಕುಮಾರ್ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.
ಭಾನುವಾರ ನಡೆದ ಪುರುಷರ ವಿಭಾಗದ 74 ಕೆ.ಜಿ. ಫ್ರೀಸ್ಟೈಲ್​ ವಿಭಾಗದ ಫೈನಲ್​ನಲ್ಲಿ ಸುಶೀಲ್​ ಕುಮಾರ್​ ನ್ಯೂಜಿಲೆಂಡ್​ನ ಆಕಾಶ್​ ಖುಲ್ಲರ್​ ಅವರನ್ನು ಸೋಲಿಸಿದರು. ಅಂತೆಯೇ ಮಹಿಳೆಯರ ವಿಭಾಗದಲ್ಲಿ ರಿಯೋ ಒಲಿಂಪಿಕ್ಸ್​ನಲ್ಲಿ ಕಂಚಿನ ಪದಕ ಗೆದ್ದಿದ್ದ ಸಾಕ್ಷಿ ಮಲಿಕ್​ 62 ಕೆ.ಜಿ ವಿಭಾಗದ ಫೈನಲ್​ನಲ್ಲಿ ನ್ಯೂಜಿಲೆಂಡ್​ನ ತಾಯಲಾ ತುಹಾನೆ ಫೋರ್ಡ್​ ಅವರನ್ನು 13-2 ಅಂತರದಿಂದ ಸೋಲಿಸುವ ಮೂಲಕ ಚಿನ್ನದ ಪದಕ ಮುಡಿಗೇರಿಸಿಕೊಂಡರು.
ಇನ್ನು ಟೂರ್ನಿಯಲ್ಲಿ ಭಾರತೀಯ ಕ್ರೀಡಾ ಪಟುಗಳ ಪದಕ ಬೇಟೆ ಮುಂದುವರೆದಿದ್ದು, ಶನಿವಾರವಷ್ಟೇ ಭಾರತೀಯ ಮಹಿಳಾ ಕುಸ್ತಿ ಪಟುಗಳು ಒಟ್ಟು 9 ಚಿನ್ನ ಮತ್ತು 7 ಬೆಳ್ಳಿ ಪದಕ ಜಯಿಸಿದ್ದರು. ನಿನ್ನೆ ಸಾಕ್ಷಿ ಮಲ್ಲಿಕ್ ಮತ್ತು ಸುಶೀಲ್ ಕುಮಾರ್ ಚಿನ್ನದ ಪದಕ ಗಳಿಸುವ ಮೂಲಕ ಭಾರತದ ಪದಕಗಳಿಕೆಯನ್ನು 59ಕ್ಕೆ ಏರಿಕೆ ಮಾಡಿದ್ದಾರೆ ಈ ಪೈಕಿ ಭಾರತ ಟೂರ್ನಿಯಲ್ಲಿ ಒಟ್ಟು 29 ಚಿನ್ನ, 24 ಬೆಳ್ಳಿ ಮತ್ತು 6 ಕಂಚಿನ ಪದಕಗಳನ್ನು ಜಯಿಸಿದಂತಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

SCROLL FOR NEXT