ಮರಳಿನಲ್ಲಿ ಧ್ಯಾನ್ ಚಂದ್ ರಚಿಸಿದ ಕಲಾವಿದ ಸುದರ್ಶನ್ ಪಾಟ್ನಾಯಕ್ 
ಕ್ರೀಡೆ

ಹಾಕಿ ದಂತಕಥೆ ಧ್ಯಾನ್ ಚಂದ್ ಗೆ ಭಾರತ ರತ್ನ ಕೊಡಿ: ಪ್ರಧಾನಿ ಕಚೇರಿಗೆ ಕ್ರೀಡಾ ಸಚಿವರ ಪತ್ರ

ಹಾಕಿ ದಂತಕಥೆ ಧ್ಯಾನ್ ಚಂದ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ಪ್ರಶಸ್ತಿ...

ನವದೆಹಲಿ: ಹಾಕಿ ದಂತಕಥೆ ಧ್ಯಾನ್ ಚಂದ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಬೇಕೆಂದು ಕೇಂದ್ರ ಕ್ರೀಡಾ ಇಲಾಖೆ ಸಚಿವ ವಿಜಯ್ ಗೋಯಲ್ ಪ್ರಧಾನ ಮಂತ್ರಿ ಕಚೇರಿಗೆ ಪತ್ರ ಬರೆದಿದ್ದಾರೆ.
ಧ್ಯಾನ್ ಚಂದ್ ಅವರಿಂದಾಗಿ 1928, 1932 ಮತ್ತು 1936ರಲ್ಲಿ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗಳಿಸುವಂತಾಯಿತು.
ಧ್ಯಾನ್ ಚಂದ್ ಅವರಿಗೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರಿಗಿಂತ ಮುನ್ನವೇ ಭಾರತರತ್ನ ಗೌರವ ನೀಡಬೇಕಾಗಿತ್ತು ಎಂದು ಹಲವು ವರ್ಷಗಳಿಂದ ಕ್ರೀಡಾಭಿಮಾನಿಗಳು ಒತ್ತಾಯಿಸುತ್ತಲೇ ಬಂದಿದ್ದಾರೆ.
ಕಳೆದ ವರ್ಷ ಮಾಜಿ ಹಾಕಿ ನಾಯಕ ಅಜಿತ್ ಪಾಲ್ ಸಿಂಗ್, ಝಫರ್ ಇಕ್ಬಾಲ್, ದಿಲೀಪ್ ಟಿರ್ಕಿ ಮತ್ತು ಧ್ಯಾನ್ ಚಂದ್ ಅವರ ಪುತ್ರ ಅಶೋಕ್ ಕುಮಾರ್ ದೆಹಲಿಯ ಜಂತರ್ ಮಂತರ್ ಮುಂದೆ ಧ್ಯಾನ್ ಚಂದ್ ಅವರಿಗೆ ಮರಣೋತ್ತರ ಭಾರತರತ್ನ ನೀಡಬೇಕೆಂದು ಬೇಡಿಕೆಯನ್ನಿಟ್ಟು ಪ್ರತಿಭಟನೆ ನಡೆಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!