ಪ್ರೋ ಕಬಡ್ಡಿ ಲೀಗ್ 
ಕ್ರೀಡೆ

ಪ್ರೋ ಕಬಡ್ಡಿ ಲೀಗ್ ನಲ್ಲಿ ಪಾಕ್ ಆಟಗಾರರಿಗೆ ನೋ ಎಂಟ್ರಿ: ಕೇಂದ್ರ ಸರ್ಕಾರ

ಭಯೋತ್ಪಾದನೆಯನ್ನು ಉತ್ತೇಜಿಸುವ ಪಾಕಿಸ್ತಾನದ ಮನಸ್ಥಿತಿಯ ವಿರುದ್ಧ ಸರ್ಕಾರ ಕಠಿಣ ನಿಲುವು ತಳೆದಿದ್ದು, ಪಾಕ್ ಭಯೋತ್ಪಾದನೆಯನ್ನು ಬಿಡುವವರೆಗೂ ಅಲ್ಲಿನ ಆಟಗಾರರು ಪ್ರೋ ಕಬಡ್ಡಿ ಲೀಗ್ ನಲ್ಲಿ ಆಡುವುದಕ್ಕೆ...

ನವದೆಹಲಿ: ಭಯೋತ್ಪಾದನೆಯನ್ನು ಉತ್ತೇಜಿಸುವ ಪಾಕಿಸ್ತಾನದ ಮನಸ್ಥಿತಿಯ ವಿರುದ್ಧ ಭಾರತ ಸರ್ಕಾರ ಕಠಿಣ ನಿಲುವು ತಳೆದಿದ್ದು, ಪಾಕ್ ಭಯೋತ್ಪಾದನೆಯನ್ನು ಬಿಡುವವರೆಗೂ ಅಲ್ಲಿನ ಆಟಗಾರರು ಪ್ರೋ ಕಬಡ್ಡಿ ಲೀಗ್ ನಲ್ಲಿ ಆಡುವುದಕ್ಕೆ ನಾವು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. 
ಜೂ.25 ರಿಂದ ಕಬಡ್ಡಿ ಲೀಗ್ ನ 5 ನೇ ಸೆಷನ್ ಪ್ರಾರಂಭವಾಗಲಿದ್ದು, ಪಾಕಿಸ್ತಾನ ಉಗ್ರವಾದದಿಂದ ಮುಕ್ತಿ ಪಡೆಯುವವರೆಗೂ ನಾವು ಪಾಕಿಸ್ತಾನಿ ಆಟಗಾರರಿಗೆ ಕಬಡ್ಡಿ ಲೀಗ್ ನಲ್ಲಿ ಭಾಗವಹಿಸಲು ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಕ್ರೀಡಾ ಸಚಿವ ವಿಜಯ್ ಗೋಯಲ್ ಹೇಳಿದ್ದಾರೆ. 
ಪ್ರೋ ಕಬಡ್ಡಿ ಲೀಗ್ ನ ಆಯೋಜಕರು ಪಾಕಿಸ್ತಾನಿ ಆಟಗಾರರನ್ನು ಹರಾಜು ಪ್ರಕ್ರಿಯೆಯಲ್ಲಿ ಪರಿಗಣಿಸಬಹುದು. ಆದರೆ ಆಯ್ಕೆಯಾದ ಪಾಕಿಸ್ತಾನಿ ಆಟಗಾರರು ಕಬಡ್ಡಿ ಲೀಗ್ ನಲ್ಲಿ ಆಡಬೇಕೋ ಬೇಡವೋ ಎಂಬುದನ್ನು ಭಾರತ ಸರ್ಕಾರ ಮಾತ್ರ ನಿರ್ಧರಿಸುತ್ತದೆ. ಎಲ್ಲಿಯವರೆಗೂ ಪಾಕಿಸ್ತಾನ ಭಯೋತ್ಪಾದನೆ ಬಿಡುವುದಿಲ್ಲವೋ ಅಲ್ಲಿಯವರೆಗೂ ಪಾಕಿಸ್ತಾನಿ ಆಟಗಾರರು ಭಾರತದ ನೆಲದಲ್ಲಿ ಆಡಲು ಬಿಡುವುದಿಲ್ಲ ಎಂದು ಗೋಯಲ್ ಸ್ಪಷ್ಟಪಡಿಸಿದ್ದಾರೆ. 
ಕಬಡ್ಡಿ ಲೀಗ್ ಮಾತ್ರವಲ್ಲದೇ, ಹಾಕಿ ಹಾಗೂ ಕ್ರಿಕೆಟ್ ಗಳಲ್ಲೂ ಸಹ ಪಾಕಿಸ್ತಾನಿ ಆಟಗಾರರಿಗೆ ಆಡಲು ಅವಕಾಶ ಮಾಡಿಕೊಟ್ಟಿಲ್ಲ. ಭಾರತ-ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿದ್ದು, ಕುಲಭೂಷಣ್ ಜಾಧವ್ ಗೆ ಪಾಕ್ ಗಲ್ಲು ಶಿಕ್ಷೆ ವಿಧಿಸಿದ ನಂತರ ಇನ್ನೂ ಹದಗೆಟ್ಟಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT