ಪ್ರೋ ಕಬಡ್ಡಿ ಲೀಗ್ 
ಕ್ರೀಡೆ

ಪ್ರೋ ಕಬಡ್ಡಿ ಲೀಗ್ ನಲ್ಲಿ ಪಾಕ್ ಆಟಗಾರರಿಗೆ ನೋ ಎಂಟ್ರಿ: ಕೇಂದ್ರ ಸರ್ಕಾರ

ಭಯೋತ್ಪಾದನೆಯನ್ನು ಉತ್ತೇಜಿಸುವ ಪಾಕಿಸ್ತಾನದ ಮನಸ್ಥಿತಿಯ ವಿರುದ್ಧ ಸರ್ಕಾರ ಕಠಿಣ ನಿಲುವು ತಳೆದಿದ್ದು, ಪಾಕ್ ಭಯೋತ್ಪಾದನೆಯನ್ನು ಬಿಡುವವರೆಗೂ ಅಲ್ಲಿನ ಆಟಗಾರರು ಪ್ರೋ ಕಬಡ್ಡಿ ಲೀಗ್ ನಲ್ಲಿ ಆಡುವುದಕ್ಕೆ...

ನವದೆಹಲಿ: ಭಯೋತ್ಪಾದನೆಯನ್ನು ಉತ್ತೇಜಿಸುವ ಪಾಕಿಸ್ತಾನದ ಮನಸ್ಥಿತಿಯ ವಿರುದ್ಧ ಭಾರತ ಸರ್ಕಾರ ಕಠಿಣ ನಿಲುವು ತಳೆದಿದ್ದು, ಪಾಕ್ ಭಯೋತ್ಪಾದನೆಯನ್ನು ಬಿಡುವವರೆಗೂ ಅಲ್ಲಿನ ಆಟಗಾರರು ಪ್ರೋ ಕಬಡ್ಡಿ ಲೀಗ್ ನಲ್ಲಿ ಆಡುವುದಕ್ಕೆ ನಾವು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. 
ಜೂ.25 ರಿಂದ ಕಬಡ್ಡಿ ಲೀಗ್ ನ 5 ನೇ ಸೆಷನ್ ಪ್ರಾರಂಭವಾಗಲಿದ್ದು, ಪಾಕಿಸ್ತಾನ ಉಗ್ರವಾದದಿಂದ ಮುಕ್ತಿ ಪಡೆಯುವವರೆಗೂ ನಾವು ಪಾಕಿಸ್ತಾನಿ ಆಟಗಾರರಿಗೆ ಕಬಡ್ಡಿ ಲೀಗ್ ನಲ್ಲಿ ಭಾಗವಹಿಸಲು ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಕ್ರೀಡಾ ಸಚಿವ ವಿಜಯ್ ಗೋಯಲ್ ಹೇಳಿದ್ದಾರೆ. 
ಪ್ರೋ ಕಬಡ್ಡಿ ಲೀಗ್ ನ ಆಯೋಜಕರು ಪಾಕಿಸ್ತಾನಿ ಆಟಗಾರರನ್ನು ಹರಾಜು ಪ್ರಕ್ರಿಯೆಯಲ್ಲಿ ಪರಿಗಣಿಸಬಹುದು. ಆದರೆ ಆಯ್ಕೆಯಾದ ಪಾಕಿಸ್ತಾನಿ ಆಟಗಾರರು ಕಬಡ್ಡಿ ಲೀಗ್ ನಲ್ಲಿ ಆಡಬೇಕೋ ಬೇಡವೋ ಎಂಬುದನ್ನು ಭಾರತ ಸರ್ಕಾರ ಮಾತ್ರ ನಿರ್ಧರಿಸುತ್ತದೆ. ಎಲ್ಲಿಯವರೆಗೂ ಪಾಕಿಸ್ತಾನ ಭಯೋತ್ಪಾದನೆ ಬಿಡುವುದಿಲ್ಲವೋ ಅಲ್ಲಿಯವರೆಗೂ ಪಾಕಿಸ್ತಾನಿ ಆಟಗಾರರು ಭಾರತದ ನೆಲದಲ್ಲಿ ಆಡಲು ಬಿಡುವುದಿಲ್ಲ ಎಂದು ಗೋಯಲ್ ಸ್ಪಷ್ಟಪಡಿಸಿದ್ದಾರೆ. 
ಕಬಡ್ಡಿ ಲೀಗ್ ಮಾತ್ರವಲ್ಲದೇ, ಹಾಕಿ ಹಾಗೂ ಕ್ರಿಕೆಟ್ ಗಳಲ್ಲೂ ಸಹ ಪಾಕಿಸ್ತಾನಿ ಆಟಗಾರರಿಗೆ ಆಡಲು ಅವಕಾಶ ಮಾಡಿಕೊಟ್ಟಿಲ್ಲ. ಭಾರತ-ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿದ್ದು, ಕುಲಭೂಷಣ್ ಜಾಧವ್ ಗೆ ಪಾಕ್ ಗಲ್ಲು ಶಿಕ್ಷೆ ವಿಧಿಸಿದ ನಂತರ ಇನ್ನೂ ಹದಗೆಟ್ಟಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT