ಕಿಡಾಂಬಿ ಶ್ರೀಕಾಂತ್ 
ಕ್ರೀಡೆ

ಡೆನ್ಮಾರ್ಕ್ ಓಪನ್: ಫೈನಲ್ ಗೇರಿದ ಭಾರತದ ಕಿಡಾಂಬಿ ಶ್ರೀಕಾಂತ್

ಡೆನ್ಮಾರ್ಕ್ ಓಪನ್ ಬ್ಯಾಡ್ಮಿಂಟನ್ ಸೂಪರ್ ಸೀರಿಸ್ ಪ್ರೀಮಿಯರ್ ಟೂರ್ನಿಯಲ್ಲಿ ತಮ್ಮ ಅದ್ಬುತ ಪ್ರದರ್ಶನ ಮುಂದುವರೆಸಿರುವ ಭಾರತದ ಕಿಡಾಂಬಿ ಶ್ರೀಕಾಂತ್ ಶನಿವಾರ ಫೈನಲ್ ಪ್ರವೇಶ ಮಾಡಿದ್ದಾರೆ.

ಒಡೆನ್ಸ್‌: ಡೆನ್ಮಾರ್ಕ್ ಓಪನ್ ಬ್ಯಾಡ್ಮಿಂಟನ್ ಸೂಪರ್ ಸೀರಿಸ್ ಪ್ರೀಮಿಯರ್ ಟೂರ್ನಿಯಲ್ಲಿ ತಮ್ಮ ಅದ್ಬುತ ಪ್ರದರ್ಶನ ಮುಂದುವರೆಸಿರುವ ಭಾರತದ ಕಿಡಾಂಬಿ ಶ್ರೀಕಾಂತ್ ಶನಿವಾರ ಫೈನಲ್ ಪ್ರವೇಶ ಮಾಡಿದ್ದಾರೆ.
ನಿನ್ನೆ ನಡೆದ ಸೆಮಿಫೈನಲ್ ಹಣಾಹಣಿಯಲ್ಲಿ ಶ್ರೀಕಾಂತ್ ಹಾಂಕಾಂಗ್‌ ನ ವಾಂಗ್ ವಿಂಗ್ ಕೀ ವಿನ್ಸೆಂಟ್ ವಿರುದ್ಧ 21–18, 21–17 ನೇರ ಸೆಟ್ ಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿದರು. ತೀವ್ರ ಕುತೂಹಲ ಕೆರಳಿಸಿದ್ದ  ಸೆಮಿಫೈನಲ್ ಪಂದ್ಯ ಬರೋಬ್ಬರಿ 39 ನಿಮಿಷಗಳ ವರೆಗೂ ಸಾಗಿತು. ಈ ಪಂದ್ಯಕ್ಕೂ ಮುನ್ನ ನಾಲ್ಕು ಬಾರಿ ಪರಸ್ಪರ ಎದುರಾಗಿದ್ದ ಶ್ರೀಕಾಂತ್ ಹಾಗೂ ವಾಂಗ್ ವಿಂಗ್ ಕೀ ವಿನ್ಸೆಂಟ್ ತಲಾ ಎರಡೆರಡು ಪಂದ್ಯಗಳನ್ನು ಗೆದ್ದಿದ್ದರು.  ಹೀಗಾಗಿ ಈ ಪಂದ್ಯ ಕ್ರೀಡಾಭಿಮಾನಿಗಳಲ್ಲಿ ಕುತೂಹಲ ಕೆರಳಿಸಿತ್ತು.
ಇನ್ನು ಪಂದ್ಯದ ಬಳಿಕ ಮಾತನಾಡಿದ ಶ್ರೀಕಾಂತ್, ಪ್ರಸ್ತುತ ಜಯ ನನ್ನಲ್ಲಿನ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ವಾಂಗ್ ವಿಂಗ್ ಕೀ ವಿನ್ಸೆಂಟ್ ಮತ್ತು ನನ್ನ ಪ್ರದರ್ಶನ ಒಂದೇ ತೆರನಾಗಿದೆಯಾದರೂ ಪಂದ್ಯದ ನಡುವೆ ನಾನು ಕೆಲ  ತಪ್ಪುಗಳನ್ನು ಮಾಡಿದ್ದೆ. ಆದರೆ ಕೂಡಲೇ ಸರಿಪಡಿಸಿಕೊಂಡ ಕಾರಣ ಜಯ ಒಲಿಯಿತು. ಫೈನಲ್ ನಲ್ಲಿ ಲೀ ಯನ್ನು ಎದುರಿಸಬೇಕಿದ್ದು, ನಿಜಕ್ಕೂ ಆತ ಕಠಿಣ ಎದುರಾಳಿ ಎಂದು ಶ್ರೀಕಾಂತ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT