ಸಂಗ್ರಹ ಚಿತ್ರ 
ಕ್ರೀಡೆ

ಕೆನಡಾ: ಜೂನಿಯರ್ ಹಾಕಿ ಆಟಗಾರರಿದ್ದ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ; 14 ಸಾವು

ಕೆನಡದ ಸಾಸ್ಕಾಚೆವನ್ ಪ್ರಾಂತ್ಯದ ತಿಸ್ದಲೆ ಬಳಿ ಜೂನಿಯರ್ ಹಾಕಿ ತಂಡದ ಆಟಗಾರರು ಪ್ರಯಾಣಿಸುತ್ತಿದ್ದ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್...

ಕೆನಡದ ಸಾಸ್ಕಾಚೆವನ್ ಪ್ರಾಂತ್ಯದ ತಿಸ್ದಲೆ ಬಳಿ ಜೂನಿಯರ್ ಹಾಕಿ ತಂಡದ ಆಟಗಾರರು ಪ್ರಯಾಣಿಸುತ್ತಿದ್ದ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್ ಚಾಲಕ ಹಾಗೂ 13 ಆಟಗಾರರು ದಾರುಣ ಸಾವನ್ನಪ್ಪಿದ್ದಾರೆ. 
ಬಸ್ ನಲ್ಲಿ 28 ಮಂದಿ ಆಟಗಾರರು ಪ್ರಯಾಣಿಸುತ್ತಿದ್ದರು. ಈ ಪೈಕಿ ಬಸ್ ನ ಚಾಲಕ ಸೇರಿ 13 ಮಂದಿ ಆಟಗಾರರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನುಳಿದಂತೆ 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಅವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸರು ತಿಳಿಸಿದ್ದಾರೆ. 
ಸಾಸ್ಕಾಚೆವನ್ ಜೂನಿಯರ್ ಹಾಕಿ ಟೂರ್ನಿಯಲ್ಲಿ ಭಾಗವಹಿಸುವ ಸಲುವಾಗಿ ಹಂಬೋಲ್ಟ್ ಬ್ರಾಂಕೋಸ್ ಜೂನಿಯರ್ಸ್ ಹಾಕಿ ತಂಡ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. 
ಆಟಗಾರರೆಲ್ಲಾ 16 ರಿಂದ 21 ವರ್ಷದ ವಯೋಮಿತಿಯವರು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT