ಚಿನ್ನ ಗೆದ್ದ ಸತೀಶ್ ಕುಮಾರ್ 
ಕ್ರೀಡೆ

ಕಾಮನ್ ವೆಲ್ತ್ ಗೇಮ್ಸ್: ವೇಟ್ ಲಿಫ್ಟಿಂಗ್ ನಲ್ಲಿ ಭಾರತಕ್ಕೆ ಚಿನ್ನ ತಂದ ಸತೀಶ್ ಕುಮಾರ್ ಶಿವಲಿಂಗಂ

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ವೇಟ್ ಲಿಫ್ಟಿಂಗ್ ತಂಡದ ಪದಕ ಬೇಟೆ ಮುಂದುವರೆದಿದ್ದು, ಪುರುಷರ 77 ಕೆಜಿ ವಿಭಾಗದಲ್ಲಿ ಭಾರತದ ಸತೀಶ್ ಕುಮಾರ್ ಶಿವಲಿಂಗಮ್ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.

ಗೋಲ್ಡ್ ಕೋಸ್ಟ್: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ವೇಟ್ ಲಿಫ್ಟಿಂಗ್ ತಂಡದ ಪದಕ ಬೇಟೆ ಮುಂದುವರೆದಿದ್ದು, ಪುರುಷರ 77 ಕೆಜಿ ವಿಭಾಗದಲ್ಲಿ ಭಾರತದ ಸತೀಶ್ ಕುಮಾರ್ ಶಿವಲಿಂಗಮ್ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.
77 ಕೆಜಿ ತೂಕದ ವಿಭಾಗದಲ್ಲಿ ಸತೀಶ್ ಕುಮಾರ್ ಶಿವಲಿಂಗಮ್ ಅಗ್ರ ಸ್ಥಾನ ಗಳಿಸುವ ಮೂಲಕ ಚಿನ್ನದ ಪದಕ ಗಳಿಸಿದ್ದಾರೆ. ಎರಡು ಹಂತಗಳ ಸ್ಪರ್ಧೆಯಲ್ಲಿ ಕ್ರಮವಾಗಿ 114 ಕೆಜಿ, 173ಕೆಜಿ ತೂಕ ಸೇರಿದಂತೆ ಸತೀಶ್ ಕುಮಾರ್ ಶಿವಲಿಂಗಮ್ ಒಟ್ಟು 317 ಕೆಜಿ ತೂಕ ಎತ್ತುವ ಮೂಲಕ ಅಗ್ರ ಸ್ಥಾನ ಗಳಿಸಿದ್ದಾರೆ. ಇನ್ನು ಭಾರತದ ಸತೀಶ್ ಗೆ ಇಂಗ್ಲೆಂಡ್ ನ ಜಾಕ್ ಒಲಿವರ್ ತೀವ್ರ ಪೈಪೋಟಿ ನೀಡಿದರು. ಆದರೆ ಎರಡನೇ ಸ್ಥಾನ ಗಳಿಸಿ ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಂಡರು.
ಇನ್ನು ಆಸ್ಚ್ರೇಲಿಯಾದ ಫ್ರಾಂಕೋಯಿಸ್ ಇಟೌಂಡಿ ಒಟ್ಟು 305 ಕೆಜಿ (136 ಮತ್ತು 169 ಕೆಜಿ) ಎತ್ತುವ ಮೂಲಕ ಮೂರನೇ ಸ್ಥಾನಗಳಿಸಿ ಕಂಚಿನ ಪದಕ ಪಡೆದರು. 
2014ರಲ್ಲೂ ಚಿನ್ನ ಗೆದ್ದಿದ್ದ ಸತೀಶ್
 ಪ್ರಸ್ತುತ ಗೋಲ್ಡ್ ಕೋಸ್ಚ್ ನಲ್ಲಿ ಚಿನ್ನದ ಪದಕಕ್ಕೆ ಭಾಜನರಾಗಿರುವ ಭಾರತದ ಸತೀಶ್ 2014ರಲ್ಲಿ ನಡೆದ ಗ್ಲಾಸ್ಗೋ ಕಾಮನ್ ವೆಲ್ತ್ ಗೇಮ್ಸ್ ನಲ್ಲೂ ಚಿನ್ನದ ಪದಕ ಪಡೆದಿದ್ದರು. ಅಂದಿನ ಪಂದ್ಯದಲ್ಲಿ ಸತೀಶ್ ಒಟ್ಟು 328 ಕೆಜಿ (149 ಮತ್ತು 179 ಕೆಜಿ)ತೂಕ ಎತ್ತುವ ಮೂಲಕ ಚಿನ್ನದ ಪದಕಕ್ಕೆ ಭಾಜನರಾಗಿದ್ಗರು. ಅಂದಿನ ಅವರ ಸ್ನಾಚಿಂಗ್ ನಲ್ಲಿ ಸತೀಶ್ ಅವರ 149 ಕೆಜಿ ತೂಕ ಎತ್ತಿದ ದಾಖಲೆ ಈವರೆಗಿನ ಗರಿಷ್ಠ ತೂಕವಾಗಿ ದಾಖಲಾಗಿದೆ. ವಿಶ್ವದ ಯಾವೊಬ್ಬ ಕ್ರೀಡಾಪಟು ಕೂಡ ಈ ದಾಖಲೆಯನ್ನು ಮುರಿದಿಲ್ಲ.
ಇನ್ನು ಹಾಲಿ ಕ್ರೀಡಾಕೂಟದಲ್ಲಿ ಭಾರತಕ್ಕೆ ಇದು ಮೂರನೇ ಚಿನ್ನದ ಪದಕವಾಗಿದ್ದು, ನಿನ್ನೆ ಇದೇ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಸಂಜಿತಾ ಚಾನು ಮತ್ತು ಇದಕ್ಕೂ ಮೊದಲು ಮೀರಾಬಾಯಿ ಚಾನು ಅವರು ಚಿನ್ನದ ಪದಕ ಗಳಿಸಿದ್ದರು. ಇನ್ನು ಗುರುರಾಜ ಅವರು ಇದೇ ವೇಟ್ ಲಿಫ್ಟಿಂಗ್ ನಲ್ಲಿ ಭಾರತಕ್ಕೆ ಮೊದಲ ಪದಕ ಬೆಳ್ಳಿ ಪದಕ ತಂದು ಕೊಟ್ಟಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ: ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ!

ನಾವು ಬಿಟ್ಟರು ಧರ್ಮ, ಜಾತಿ ನಮ್ಮನ್ನು ಬಿಡುವುದಿಲ್ಲ: ಒಕ್ಕಲಿಗನಾಗಿ ಹುಟ್ಟಿದ್ದೇನೆ; ಅಶೋಕಣ್ಣನಿಗೆ ಬ್ಯಾಡ್ಜ್ ಕಳಿಸುತ್ತೇನೆ ಹಾಕಿಕೊಳ್ಳಲಿ; DKS

ಅಮೆರಿಕ ಶಕ್ತಿ ಕೇಂದ್ರ ಶ್ವೇತಭವನ ಬಳಿ ಇಬ್ಬರು ಯುಎಸ್ ರಾಷ್ಟ್ರೀಯ ಗಾರ್ಡ್ ಗಳ ಮೇಲೆ ಗುಂಡಿನ ದಾಳಿ: ಶಂಕಿತನ ಗುರುತು ಪತ್ತೆ

SCROLL FOR NEXT