ಚಿನ್ನ ಗೆದ್ದ ಸತೀಶ್ ಕುಮಾರ್ 
ಕ್ರೀಡೆ

ಕಾಮನ್ ವೆಲ್ತ್ ಗೇಮ್ಸ್: ವೇಟ್ ಲಿಫ್ಟಿಂಗ್ ನಲ್ಲಿ ಭಾರತಕ್ಕೆ ಚಿನ್ನ ತಂದ ಸತೀಶ್ ಕುಮಾರ್ ಶಿವಲಿಂಗಂ

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ವೇಟ್ ಲಿಫ್ಟಿಂಗ್ ತಂಡದ ಪದಕ ಬೇಟೆ ಮುಂದುವರೆದಿದ್ದು, ಪುರುಷರ 77 ಕೆಜಿ ವಿಭಾಗದಲ್ಲಿ ಭಾರತದ ಸತೀಶ್ ಕುಮಾರ್ ಶಿವಲಿಂಗಮ್ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.

ಗೋಲ್ಡ್ ಕೋಸ್ಟ್: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ವೇಟ್ ಲಿಫ್ಟಿಂಗ್ ತಂಡದ ಪದಕ ಬೇಟೆ ಮುಂದುವರೆದಿದ್ದು, ಪುರುಷರ 77 ಕೆಜಿ ವಿಭಾಗದಲ್ಲಿ ಭಾರತದ ಸತೀಶ್ ಕುಮಾರ್ ಶಿವಲಿಂಗಮ್ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.
77 ಕೆಜಿ ತೂಕದ ವಿಭಾಗದಲ್ಲಿ ಸತೀಶ್ ಕುಮಾರ್ ಶಿವಲಿಂಗಮ್ ಅಗ್ರ ಸ್ಥಾನ ಗಳಿಸುವ ಮೂಲಕ ಚಿನ್ನದ ಪದಕ ಗಳಿಸಿದ್ದಾರೆ. ಎರಡು ಹಂತಗಳ ಸ್ಪರ್ಧೆಯಲ್ಲಿ ಕ್ರಮವಾಗಿ 114 ಕೆಜಿ, 173ಕೆಜಿ ತೂಕ ಸೇರಿದಂತೆ ಸತೀಶ್ ಕುಮಾರ್ ಶಿವಲಿಂಗಮ್ ಒಟ್ಟು 317 ಕೆಜಿ ತೂಕ ಎತ್ತುವ ಮೂಲಕ ಅಗ್ರ ಸ್ಥಾನ ಗಳಿಸಿದ್ದಾರೆ. ಇನ್ನು ಭಾರತದ ಸತೀಶ್ ಗೆ ಇಂಗ್ಲೆಂಡ್ ನ ಜಾಕ್ ಒಲಿವರ್ ತೀವ್ರ ಪೈಪೋಟಿ ನೀಡಿದರು. ಆದರೆ ಎರಡನೇ ಸ್ಥಾನ ಗಳಿಸಿ ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಂಡರು.
ಇನ್ನು ಆಸ್ಚ್ರೇಲಿಯಾದ ಫ್ರಾಂಕೋಯಿಸ್ ಇಟೌಂಡಿ ಒಟ್ಟು 305 ಕೆಜಿ (136 ಮತ್ತು 169 ಕೆಜಿ) ಎತ್ತುವ ಮೂಲಕ ಮೂರನೇ ಸ್ಥಾನಗಳಿಸಿ ಕಂಚಿನ ಪದಕ ಪಡೆದರು. 
2014ರಲ್ಲೂ ಚಿನ್ನ ಗೆದ್ದಿದ್ದ ಸತೀಶ್
 ಪ್ರಸ್ತುತ ಗೋಲ್ಡ್ ಕೋಸ್ಚ್ ನಲ್ಲಿ ಚಿನ್ನದ ಪದಕಕ್ಕೆ ಭಾಜನರಾಗಿರುವ ಭಾರತದ ಸತೀಶ್ 2014ರಲ್ಲಿ ನಡೆದ ಗ್ಲಾಸ್ಗೋ ಕಾಮನ್ ವೆಲ್ತ್ ಗೇಮ್ಸ್ ನಲ್ಲೂ ಚಿನ್ನದ ಪದಕ ಪಡೆದಿದ್ದರು. ಅಂದಿನ ಪಂದ್ಯದಲ್ಲಿ ಸತೀಶ್ ಒಟ್ಟು 328 ಕೆಜಿ (149 ಮತ್ತು 179 ಕೆಜಿ)ತೂಕ ಎತ್ತುವ ಮೂಲಕ ಚಿನ್ನದ ಪದಕಕ್ಕೆ ಭಾಜನರಾಗಿದ್ಗರು. ಅಂದಿನ ಅವರ ಸ್ನಾಚಿಂಗ್ ನಲ್ಲಿ ಸತೀಶ್ ಅವರ 149 ಕೆಜಿ ತೂಕ ಎತ್ತಿದ ದಾಖಲೆ ಈವರೆಗಿನ ಗರಿಷ್ಠ ತೂಕವಾಗಿ ದಾಖಲಾಗಿದೆ. ವಿಶ್ವದ ಯಾವೊಬ್ಬ ಕ್ರೀಡಾಪಟು ಕೂಡ ಈ ದಾಖಲೆಯನ್ನು ಮುರಿದಿಲ್ಲ.
ಇನ್ನು ಹಾಲಿ ಕ್ರೀಡಾಕೂಟದಲ್ಲಿ ಭಾರತಕ್ಕೆ ಇದು ಮೂರನೇ ಚಿನ್ನದ ಪದಕವಾಗಿದ್ದು, ನಿನ್ನೆ ಇದೇ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಸಂಜಿತಾ ಚಾನು ಮತ್ತು ಇದಕ್ಕೂ ಮೊದಲು ಮೀರಾಬಾಯಿ ಚಾನು ಅವರು ಚಿನ್ನದ ಪದಕ ಗಳಿಸಿದ್ದರು. ಇನ್ನು ಗುರುರಾಜ ಅವರು ಇದೇ ವೇಟ್ ಲಿಫ್ಟಿಂಗ್ ನಲ್ಲಿ ಭಾರತಕ್ಕೆ ಮೊದಲ ಪದಕ ಬೆಳ್ಳಿ ಪದಕ ತಂದು ಕೊಟ್ಟಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT