ಸಂಗ್ರಹ ಚಿತ್ರ 
ಕ್ರೀಡೆ

ಇತಿಹಾಸದಲ್ಲೇ ಮೊದಲ ಬಾರಿಗೆ ಒಲಿಂಪಿಕ್ಸ್ ಆಯೋಜನೆಗೆ ಅವಕಾಶ ಕೋರಿದ ಭಾರತ!

ಒಲಿಂಪಿಕ್ಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಎಂಬಂತೆ ಭಾರತೀಯ ಒಲಿಂಪಿಕ್​ ಅಸೋಸಿಯೇಷನ್ ದೇಶದಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟ ಆಯೋಜನೆಗೆ ಅವಕಾಶ ನೀಡುವಂತೆ ಮನವಿ ಮಾಡಿಕೊಂಡಿದೆ.

ನವದೆಹಲಿ: ಒಲಿಂಪಿಕ್ಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಎಂಬಂತೆ ಭಾರತೀಯ ಒಲಿಂಪಿಕ್​ ಅಸೋಸಿಯೇಷನ್ ದೇಶದಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟ ಆಯೋಜನೆಗೆ ಅವಕಾಶ ನೀಡುವಂತೆ ಮನವಿ ಮಾಡಿಕೊಂಡಿದೆ.
ದೇಶಕ್ಕೆ ಒಲಿಂಪಿಕ್​ ಕ್ರೀಡಾ ಕೂಟವನ್ನು ತರುವತ್ತ ಭಾರತೀಯ ಒಲಿಂಪಿಕ್​ ಅಸೋಸಿಯೇಷನ್​ (ಐಒಎ) ದಾಪುಗಾಲು ಇಟ್ಟಿದ್ದು, ಇದೇ ಮೊದಲ ಬಾರಿಗೆ ಮಹಾ ಕ್ರೀಡಾಕೂಟದ ಆಯೋಜನೆಗೆ ಅವಕಾಶ ನೀಡುವಂತೆ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಂಸ್ಥೆಯಲ್ಲಿ ಮನವಿ ಮಾಡಿಕೊಂಡಿದೆ.
ಮೂಲಗಳ ಪ್ರಕಾರ 2032ರ ಒಲಿಂಪಿಕ್​ ಕ್ರೀಡಾ ಕೂಟ ಆಯೋಜನೆಯ ಅವಕಾಶವನ್ನು ಭಾರತಕ್ಕೆ ನೀಡುವಂತೆ ಕೋರಿಕೆ ಸಲ್ಲಿಸಿರುವ ಐಒಎ ಇದಕ್ಕಾಗಿ ಭಾರತದ ಸರ್ಕಾರದ ಸಹಕಾರ ಕೂಡ ಕೋರಿದೆ. ಭಾರತಕ್ಕೆ ಅವಕಾಶ ನೀಡುವ ಕುರಿತು ಐಒಎ ಅಧ್ಯಕ್ಷ ನರಿಂದರ್​ ಬಾತ್ರ ನೀಡಿದ ಸಲಹೆಗೆ ಅಂತಾರಾಷ್ಟ್ರೀಯ ಒಲಿಂಪಿಕ್​ ಸಮಿತಿಯ(ಐಒಸಿ) ಮುಖ್ಯಸ್ಥ ಥಾಮಸ್​ ಬ್ಯಾಚ್​ ಅವರೂ ಸ್ವಾಗತಿಸಿದ್ದಾರೆ ಎನ್ನಲಾಗಿದೆ.
'ಭಾರತದಲ್ಲಿ 2032ರ ಒಲಿಂಪಿಕ್​ ಆಯೋಜಿಸುವ ಬಗ್ಗೆ ನಾವು ತುಂಬಾ ಗಂಭೀರವಾಗಿ ಯೋಚಿಸುತ್ತಿದ್ದೇವೆ. ಕ್ರೀಡಾ ಕೂಟ ಆಯೋಜಿಸುವ ವಿಚಾರದಲ್ಲಿ ನಮಗಿರುವ ಆಸಕ್ತಿಯ ಬಗ್ಗೆ ನಾವು ಐಒಸಿಗೆ ಪತ್ರದ ಮೂಲಕ ತಿಳಿಸಿದ್ದೇವೆ. ಒಲಿಂಪಿಕ್​ ಬಿಡ್​ ಸಮಿತಿಯೊಂದಿಗೆ ನಾನು ಈಗಾಗಲೇ ಸಭೆ ನಡೆಸಿದ್ದೇನೆ. ಭಾರತದ ಆಸಕ್ತಿಯನ್ನು ಅವರು ಸ್ವಾಗತಿಸಿದ್ದಾರೆ. ಅಲ್ಲದೆ, ಆದಷ್ಟು ಶೀಘ್ರ ಭಾರತ ಕ್ರೀಡಾ ಕೂಟವನ್ನು ಆಯೋಜಿಸಬೇಕೆಂದು ಅವರೂ ಅಭಿಪ್ರಾಯಪಟ್ಟಿದ್ದಾರೆ ಎಂದು ಐಒಎ ಪ್ರಧಾನ ಕಾರ್ಯದರ್ಶಿ ರಾಜೀವ್​ ಮೆಹ್ತಾ ತಿಳಿಸಿದ್ದಾರೆ.
ಭಾರತದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಹೀಗೊಂದು ಪ್ರಸ್ತಾವನೆ ಸಲ್ಲಿಸಲಾಗುತ್ತಿದ್ದು, ದೆಹಲಿ ಅಥವಾ ಮುಂಬೈನಲ್ಲಿ ಕ್ರೀಡಾ ಕೂಟಕ್ಕೆ ಅವಕಾಶ ನೀಡುವಂತೆ ಕೋರಲಾಗಿದೆ. ಭಾರತದಂತೆಯೇ 2032ರ ಒಲಿಂಪಿಕ್​ ಕೂಟ ಆಯೋಜಿಸಲು ಇಂಡೋನೇಷ್ಯಾ, ಜರ್ಮನಿ, ಚೀನಾ ಮತ್ತು ಆಸ್ಟ್ರೇಲಿಯಾ ತೀವ್ರ ಪ್ರಯತ್ನ ನಡೆಸುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT