ಜ್ಯೋತಿ ರಾಂಧವ 
ಕ್ರೀಡೆ

ಕಾಡು ಪ್ರಾಣಿಗಳ ಬೇಟೆಯಾಡಿದ ಆರೋಪ: ಅಂತರಾಷ್ಟ್ರೀಯ ಗಾಲ್ಫರ್ ಜ್ಯೋತಿ ರಾಂಧವ ಬಂಧನ

ಕಾಡು ಪ್ರಾಣಿಗಳನ್ನು ಬೇಟೆಯಾಡಿದ ಆರೋಪದ ಮೇಲೆ ಅಂತರಾಷ್ಟ್ರೀಯ ಗಾಲ್ಫರ್ ಜ್ಯೋತಿ ರಾಂಧವ ಅವರನ್ನು ಉತ್ತರಪ್ರದೇಶ ರಾಜ್ಯದ ಅರಣ್ ಇಲಾಖೆ ಅಧಿಕಾರಿಗಳು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ...

ನವದೆಹಲಿ: ಕಾಡು ಪ್ರಾಣಿಗಳನ್ನು ಬೇಟೆಯಾಡಿದ ಆರೋಪದ ಮೇಲೆ ಅಂತರಾಷ್ಟ್ರೀಯ ಗಾಲ್ಫರ್ ಜ್ಯೋತಿ ರಾಂಧವ ಅವರನ್ನು ಉತ್ತರಪ್ರದೇಶ ರಾಜ್ಯದ ಅರಣ್ ಇಲಾಖೆ ಅಧಿಕಾರಿಗಳು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ. 
ಬಂಧಿತ ಜ್ಯೋತಿ ರಾಂಧವ ಅವರಿಂದ ರೈಫಲ್,  ಕಾರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆಂದು ವರದಿಗಳು ತಿಳಿಸಿವೆ. 
ಜ್ಯೋತಿ ರಾಂಧವ ಅವರು ತಮ್ಮ ಸಹಚರನೊಂದಿಗೆ ಕರ್ತಾರ್ನಿಘಾಟ್ ಮೋತಿಪುರ್ ಅರಣ್ಯ ಪ್ರದೇಶದಲ್ಲಿ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 
ಇದಲ್ಲದೆ ವಶಕ್ಕೆ ಪಡೆದಿರುವ ಕಾರಿನಲ್ಲಿ ಹಂದಿ ಚರ್ಮ, ಬೈನಾಕ್ಯುಲರ್ ಮತ್ತು ಬೇಟೆಗೆ ಸಂಬಂಧಿಸಿತ ವಸ್ತುಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. 
ಬಂಧನಕ್ಕೊಳಗಾಗಿರುವ ರಾಂಧವ ಅವರು 2004ರಿಂದ 2009ರವರೆಗೆ ವಿಶ್ವ ಗಾಲ್ಫ್ ರ್ಯಾಂಕಿಂಗ್ ಪಟ್ಟಿಯಲ್ಲಿ 100ರಲ್ಲಿ ಸ್ಥಾನ ಪಡೆದುಕೊಂಡಿದ್ದರು. ಅಲ್ಲದೆ, ಅಂತರಾಷ್ಟ್ರೀಯ ಶೂಟಿಂಗ್ ತರಬೇತಿಯನ್ನೂ ಪಡೆಯುತ್ತಿದ್ದರು. 
ಅರಣ್ಯ ಪ್ರದೇಶದ ನಿರ್ದೇಶಕ ರಮೇಶ್ ಪಾಂಡೆಯವರು ಈ ಕುರಿತಂತೆ ಪ್ರತಿಕ್ರಿಯೆ ನೀಡಿ, ರಾಂಧವ ಅವರು ಮೋತಿಪುರ್ ವಲಯದಲ್ಲಿ ಸ್ವಂತ ಫಾರ್ಮ್ ಹೊಂದಿದ್ದು, ಕಳೆದ 4-5 ದಿನಗಳಿಂದ ಈ ಭಾಗದಲ್ಲಿ ಕಾರಿನಲ್ಲಿ ಸುತ್ತಾಡುತ್ತಿದ್ದರು. ಇವರ ಓಡಾಟದಿಂದ ಅನುಮಾನಗೊಂಡು ಸಿಬ್ಬಂದಿಗಳು ಇಂದು ಬೆಳಿಗ್ಗೆ ಬಂಧನಕ್ಕೊಳಪಡಿಸಿದ್ದಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT