ಜ್ಯೋತಿ ರಾಂಧವ 
ಕ್ರೀಡೆ

ಕಾಡು ಪ್ರಾಣಿಗಳ ಬೇಟೆಯಾಡಿದ ಆರೋಪ: ಅಂತರಾಷ್ಟ್ರೀಯ ಗಾಲ್ಫರ್ ಜ್ಯೋತಿ ರಾಂಧವ ಬಂಧನ

ಕಾಡು ಪ್ರಾಣಿಗಳನ್ನು ಬೇಟೆಯಾಡಿದ ಆರೋಪದ ಮೇಲೆ ಅಂತರಾಷ್ಟ್ರೀಯ ಗಾಲ್ಫರ್ ಜ್ಯೋತಿ ರಾಂಧವ ಅವರನ್ನು ಉತ್ತರಪ್ರದೇಶ ರಾಜ್ಯದ ಅರಣ್ ಇಲಾಖೆ ಅಧಿಕಾರಿಗಳು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ...

ನವದೆಹಲಿ: ಕಾಡು ಪ್ರಾಣಿಗಳನ್ನು ಬೇಟೆಯಾಡಿದ ಆರೋಪದ ಮೇಲೆ ಅಂತರಾಷ್ಟ್ರೀಯ ಗಾಲ್ಫರ್ ಜ್ಯೋತಿ ರಾಂಧವ ಅವರನ್ನು ಉತ್ತರಪ್ರದೇಶ ರಾಜ್ಯದ ಅರಣ್ ಇಲಾಖೆ ಅಧಿಕಾರಿಗಳು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ. 
ಬಂಧಿತ ಜ್ಯೋತಿ ರಾಂಧವ ಅವರಿಂದ ರೈಫಲ್,  ಕಾರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆಂದು ವರದಿಗಳು ತಿಳಿಸಿವೆ. 
ಜ್ಯೋತಿ ರಾಂಧವ ಅವರು ತಮ್ಮ ಸಹಚರನೊಂದಿಗೆ ಕರ್ತಾರ್ನಿಘಾಟ್ ಮೋತಿಪುರ್ ಅರಣ್ಯ ಪ್ರದೇಶದಲ್ಲಿ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 
ಇದಲ್ಲದೆ ವಶಕ್ಕೆ ಪಡೆದಿರುವ ಕಾರಿನಲ್ಲಿ ಹಂದಿ ಚರ್ಮ, ಬೈನಾಕ್ಯುಲರ್ ಮತ್ತು ಬೇಟೆಗೆ ಸಂಬಂಧಿಸಿತ ವಸ್ತುಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. 
ಬಂಧನಕ್ಕೊಳಗಾಗಿರುವ ರಾಂಧವ ಅವರು 2004ರಿಂದ 2009ರವರೆಗೆ ವಿಶ್ವ ಗಾಲ್ಫ್ ರ್ಯಾಂಕಿಂಗ್ ಪಟ್ಟಿಯಲ್ಲಿ 100ರಲ್ಲಿ ಸ್ಥಾನ ಪಡೆದುಕೊಂಡಿದ್ದರು. ಅಲ್ಲದೆ, ಅಂತರಾಷ್ಟ್ರೀಯ ಶೂಟಿಂಗ್ ತರಬೇತಿಯನ್ನೂ ಪಡೆಯುತ್ತಿದ್ದರು. 
ಅರಣ್ಯ ಪ್ರದೇಶದ ನಿರ್ದೇಶಕ ರಮೇಶ್ ಪಾಂಡೆಯವರು ಈ ಕುರಿತಂತೆ ಪ್ರತಿಕ್ರಿಯೆ ನೀಡಿ, ರಾಂಧವ ಅವರು ಮೋತಿಪುರ್ ವಲಯದಲ್ಲಿ ಸ್ವಂತ ಫಾರ್ಮ್ ಹೊಂದಿದ್ದು, ಕಳೆದ 4-5 ದಿನಗಳಿಂದ ಈ ಭಾಗದಲ್ಲಿ ಕಾರಿನಲ್ಲಿ ಸುತ್ತಾಡುತ್ತಿದ್ದರು. ಇವರ ಓಡಾಟದಿಂದ ಅನುಮಾನಗೊಂಡು ಸಿಬ್ಬಂದಿಗಳು ಇಂದು ಬೆಳಿಗ್ಗೆ ಬಂಧನಕ್ಕೊಳಪಡಿಸಿದ್ದಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಎಲ್ಲರ ಹುಬ್ಬೇರಿಸಿದ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT