ದೀಪಾ ಕರ್ಮಾಕರ್ - ಬಿಸ್ವೇಶ್ವರ್ ನಂದಿ 
ಕ್ರೀಡೆ

ಕಾಮನ್ ವೆಲ್ತ್ ಗೇಮ್ಸ್ ನಿಂದ ಹೊರಗುಳಿದ ದೀಪಾ ಕರ್ಮಾಕರ್

ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಭಾರತದ ಖ್ಯಾತ ಜಿಮ್ನಾಸ್ಟಿಕ್ ತಾರೆ ದೀಪಾ ಕರ್ಮಾಕರ್ ಅವರು ಮುಂಬರುವ ಕಾಮನ್ ವೆಲ್ತ್ ಗೇಮ್ಸ್...

ನವದೆಹಲಿ: ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಭಾರತದ ಖ್ಯಾತ ಜಿಮ್ನಾಸ್ಟಿಕ್ ತಾರೆ ದೀಪಾ ಕರ್ಮಾಕರ್ ಅವರು ಮುಂಬರುವ ಕಾಮನ್ ವೆಲ್ತ್ ಗೇಮ್ಸ್ ನಿಂದ ಹೊರಗುಳಿಯಲಿದ್ದಾರೆ ಎಂದು ಆಕೆಯ ಕೋಚ್ ಬಿಸ್ವೇಶ್ವರ್ ನಂದಿ ಅವರು ಮಂಗಳವಾರ ಹೇಳಿದ್ದಾರೆ.
ಕಾಮನ್ ವೆಲ್ತ್ ಗೇಮ್ಸ್ ನಂತಹ ಪಂದ್ಯಾವಳಿಗೆ ದೀಪಾ ಕರ್ಮಾಕರ್ ಇನ್ನು ಸಿದ್ಧಗೊಂಡಿಲ್ಲ. ಆದರೆ ಆಗಸ್ಟ್ 18ರಿಂದ ಸೆಪ್ಟೆಂಬರ್ 2ರ ವರೆಗೆ ನಡೆಯುವ ಏಷ್ಯಿಯನ್ ಗೇಮ್ಸ್ ಸಂಪೂರ್ಣ ಫಿಟ್ನೆಸ್ ಸಾಧಿಸುವುದು ಆಕೆಯ ಗುರಿಯಾಗಿದೆ ಎಂದು ಎಂದು ನಂದಿ ತಿಳಿಸಿದ್ದಾರೆ. 
ಕಳೆದ ಎಪ್ರಿಲ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ದೀಪಾ ಈಗಲೂ ಪುನಶ್ಚೇತನದ ಹಂತದಲ್ಲಿದ್ದಾರೆ. ಇದರಿಂದಾಗಿ ರಿಯೋ ಒಲಿಂಪಿಕ್ಸ್ ಬಳಿಕ ಸ್ಪರ್ಧಾತ್ಮಕ ಕೂಟದಲ್ಲಿ ಭಾಗವಹಿಸಲೇ ಇಲ್ಲ.
2016 ರಿಯೋ ಗೇಮ್ಸ್‌ನಲ್ಲಿ ದೀಪಾ, ಮಹಿಳಾ ವಾಲ್ಟ್ ವಿಭಾಗದಲ್ಲಿ ಐತಿಹಾಸಿಕ 4ನೇ ಸ್ಥಾನ ಗಿಟ್ಟಿಸಿಕೊಂಡಿದ್ದರು. ಇದಕ್ಕೂ ಮೊದಲು 2014 ಗ್ಲ್ಯಾಸ್ಗೋ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆಲ್ಲುವ ಮೂಲಕ ಜಿಮ್ನಾಸ್ಟಿಕ್‌ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಗೌರವಕ್ಕೆ ಪಾತ್ರವಾಗಿದ್ದರು. ಬಳಿಕ 2016 ಏಷ್ಯನ್ ಚಾಂಪಿಯನ್‌ಶಿಪ್ಸ್‌ನಲ್ಲೂ ಕಂಚಿನ ಪದಕ ಗೆದ್ದಿದ್ದರು.
ಈ ಬಾರಿಯ ಕಾಮನ್‌ವೆಲ್ತ್ ಗೇಮ್ಸ್ ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್‌ನಲ್ಲಿ ಎಪ್ರಿಲ್ 4ರಿಂದ 15ರ ವರೆಗೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT