ಪಿ ವಿ ಸಿಂಧು 
ಕ್ರೀಡೆ

ಕೆಬಿಸಿ ಬಹುಮಾನದ ಮೊತ್ತವನ್ನು ಕ್ಯಾನ್ಸರ್ ಆಸ್ಪತ್ರೆಗೆ ನೀಡಿದ ಪಿವಿ ಸಿಂಧು

ಒಲಂಪಿಕ್ ಬೆಳ್ಳಿ ಪದಕ ವಿಜೇತೆಯಾದ ಭಾರತ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ರಿಯಾಲಿಟಿ ಶೋ ಒಂದರಲ್ಲಿ ತಾವು ಗೆದ್ದ 25 ಲಕ್ಷ ರೂ. ಹಣವನ್ನು ಕಾನ್ಸರ್ ಆಸ್ಪತ್ರೆಗೆ ದಾನವಾಗಿ ನೀಡಿದ್ದಾರೆ.

ಹೈದರಾಬಾದ್: ಒಲಂಪಿಕ್ ಬೆಳ್ಳಿ ಪದಕ ವಿಜೇತೆಯಾದ ಭಾರತ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ರಿಯಾಲಿಟಿ ಶೋ ಒಂದರಲ್ಲಿ ತಾವು ಗೆದ್ದ 25 ಲಕ್ಷ ರೂ. ಹಣವನ್ನು ಕಾನ್ಸರ್ ಆಸ್ಪತ್ರೆಗೆ ದಾನವಾಗಿ ನೀಡಿದ್ದಾರೆ.
ಹಿರಿಯ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆ೩ಸಿಕೊಡುವ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿಂಧು ಒಟ್ಟು 25 ಲಕ್ಷ ರೂ. ಬಹುಮಾನ ಗಳಿಸಿದ್ದರು. ಇದೀಗ ಅದ್ಷ್ಟೂ ಹಣವನ್ನು ಇಂಡೋ ಅಮೆರಿಕನ್ ಕ್ಯಾನ್ಸರ್ ಆಸ್ಪತ್ರೆಯೊಂದಕ್ಕೆ ಕೊಡುಗೆಯಾಗಿ ನೀಡಿದ್ದಾರೆ ಎಂದು ವರದಿಯಾಗಿದೆ.
ತೆಲುಗಿನ ಖ್ಯಾತ ನಟ ಬಾಲಯ್ಯ ನಡೆಸುವ ಇಂಡೊ ಅಮೇರಿಕನ್ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆಗೆ ಸಿಂಧು ತಮ್ಮ ಬಹುಮಾನದ ಮೊತ್ತವನ್ನು ನೀಡಿದ್ದು ಬಾಲಯ್ಯಗೆ ರೂ.25  ಲಕ್ಷದ ಚೆಕ್ ನೀಡಿದ್ದಾರೆ. ಬ್ಯಾಡ್ಮಿಂಟನ್ ಆಟಗಾರ್ತಿಯಿಂದ ನೆರವನ್ನು ಪಡೆದ ಬಾಲಯ್ಯ ಸಿಂಧು ಅವರ ಕೆಲಸವನ್ನು ಪ್ರಶಂಸಿಸಿದ್ದು ಅವರ ಕೆಲಸದಿಂದ ಇನ್ನಷ್ಟು ಜನ ಸ್ಪೂರ್ತಿ ಪಡೆವಂತಾಗಲಿ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯದುವೀರ್ ಒಡೆಯರ್ ರಿಂದ ಬನ್ನಿ ಮರಕ್ಕೆ ಶಮಿ ಪೂಜೆ: ಅರಮನೆ ದಸರಾ ಮುಕ್ತಾಯ

ಭಾರತದಲ್ಲಿ ಪ್ರತಿ ಗಂಟೆಗೆ ಒಬ್ಬ ರೈತ ಆತ್ಮಹತ್ಯೆ: NCRB ವರದಿ

1st Test: Siraj, Bumrah ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ West Indies, ಮೊದಲ ಇನ್ನಿಂಗ್ಸ್ 162 ರನ್ ಗೆ ಆಲೌಟ್!

ಸ್ವದೇಶಿ-ಸ್ವಾವಲಂಬನೆಗೆ ಪರ್ಯಾಯವಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಯಾರೂ ಅಧಿಕಾರ ಹಂಚಿಕೆ ಬಗ್ಗೆ ಮಾತನಾಡಬೇಡಿ, ಅದರಿಂದ ಪಕ್ಷಕ್ಕೆ ಡ್ಯಾಮೇಜ್: ಡಿ ಕೆ ಶಿವಕುಮಾರ್

SCROLL FOR NEXT