ಭಾರತ 
ಕ್ರೀಡೆ

ಕಬಡ್ಡಿ ಮಾಸ್ಟರ್ಸ್: ಪಾಕ್ ಧೂಳಿಪಟ ಮಾಡಿದ ಭಾರತ ಸೆಮಿಫೈನಲ್‌ಗೆ!

ದುಬೈನಲ್ಲಿ ನಡೆಯುತ್ತಿರುವ ಕಬಡ್ಡಿ ಮಾಸ್ಟರ್ಸ್ ಪಂದ್ಯಾವಳಿಯಲ್ಲಿ ಬದ್ಧವೈರಿ ಪಾಕಿಸ್ತಾನವನ್ನು ಬಗ್ಗುಬಡಿದು ಭಾರತ ಸೆಮಿಫೈನಲ್ ಪ್ರವೇಶಿಸಿದೆ...

ದುಬೈ: ದುಬೈನಲ್ಲಿ ನಡೆಯುತ್ತಿರುವ ಕಬಡ್ಡಿ ಮಾಸ್ಟರ್ಸ್ ಪಂದ್ಯಾವಳಿಯಲ್ಲಿ ಬದ್ಧವೈರಿ ಪಾಕಿಸ್ತಾನವನ್ನು ಬಗ್ಗುಬಡಿದು ಭಾರತ ಸೆಮಿಫೈನಲ್ ಪ್ರವೇಶಿಸಿದೆ. 
ಮೊದಲ ಪಂದ್ಯದಲ್ಲೇ ಪಾಕಿಸ್ತಾನವನ್ನು ಮಣಿಸಿದ್ದ ಭಾರತ, 2ನೇ ಪಂದ್ಯದಲ್ಲಿ ಕೀನ್ಯಾ ವಿರುದ್ಧ ಗೆಲುವು ಸಾಧಿಸಿತ್ತು. ಇನ್ನು ಮೂರನೇ ಪಂದ್ಯದಲ್ಲಿ ಮತ್ತೆ ಪಾಕಿಸ್ತಾನವನ್ನು 41-17 ಅಂಕಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ. 
ಭಾರತ ಎರಡು ಬಾರಿ ಪಾಕಿಸ್ತಾನವನ್ನು ಆಲೌಟ್ ಮಾಡಿತ್ತು. ಮೊದಲ 8ನೇ ನಿಮಿಷದಲ್ಲಿ ಪಾಕಿಸ್ತಾನವನ್ನು ಭಾರತ ಆಲ್ ಔಟ್ ಮಾಡಿತು. ನಂತರ 25ನೇ ನಿಮಿಷದಲ್ಲಿ ಮತ್ತೊಂದು ಬಾರಿ ಆಲ್ ಔಟ್ ಮಾಡಿದ್ದು ಪಂದ್ಯ ಭಾರತ ಪರ ವಾಲಲು ಕಾರಣವಾಯಿತು. 
ಸೆಮಿಫೈನಲ್ ಪಂದ್ಯದಲ್ಲಿ ಭಾರತ ಇರಾನ್ ತಂಡವನ್ನು ಎದುರಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!