ಸಂಗ್ರಹ ಚಿತ್ರ 
ಕ್ರೀಡೆ

ಕಾಮನ್ ವೆಲ್ತ್ ಗೇಮ್ಸ್ 2018: ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧುಗೆ ಭಾರತದ ಧ್ವಜ ಹಿಡಿಯುವ ಗೌರವ

2018ನೇ ಸಾಲಿನ ಕಾಮನ್ ವೆಲ್ತ್ ಗೇಮ್ಸ್ ಉದ್ಘಾಟನಾ ಸಮಾರಂಭದಲ್ಲಿ ಭಾರತೀಯ ಅಥ್ಲೀಟ್ ಗಳ ಪಥ ಸಂಚಲನದಲ್ಲಿ ಭಾರತದ ಧ್ವಜ ಹಿಡಿಯುವ ಗೌರವಕ್ಕೆ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಪಾತ್ರರಾಗಿದ್ದಾರೆ.

ನವದೆಹಲಿ: 2018ನೇ ಸಾಲಿನ ಕಾಮನ್ ವೆಲ್ತ್ ಗೇಮ್ಸ್  ಉದ್ಘಾಟನಾ ಸಮಾರಂಭದಲ್ಲಿ ಭಾರತೀಯ ಅಥ್ಲೀಟ್ ಗಳ ಪಥ ಸಂಚಲನದಲ್ಲಿ ಭಾರತದ ಧ್ವಜ ಹಿಡಿಯುವ ಗೌರವಕ್ಕೆ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಪಾತ್ರರಾಗಿದ್ದಾರೆ.
ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ವರದಿ ಮಾಡಿರುವಂತೆ ಪ್ರಸಕ್ತ ಸಾಲಿನ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತದ ಧ್ವಜ ಹಿಡಿಯುವ ಗೌರವಕ್ಕೆ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರನ್ನು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಇಂದು ನಡೆದ ಭಾರತೀಯ ಒಲಿಂಪಿಕ್ಸ್ ಸಂಸ್ಥೆಯ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಭಾರತ ತಂಡದಲ್ಲಿ ಒಲಿಂಪಿಕ್ಸ್ ಪದಕ ವಿಜೇತರಾದ ಮೇರಿಕೋಮ್, ಸೈನಾ ನೆಹ್ವಾಲ್ ರಂತಹ ಹಿರಿಯ ಆಟಗಾರರು ಇದ್ದರೂ, ಪಿವಿ ಸಿಂಧು ಅವರನ್ನು ಧ್ವಜ ಹಿಡಿಯುವ ಗೌರವಕ್ಕೆ ಆಯ್ಕೆ ಮಾಡಲಾಗಿದೆ. ಮೇರಿಕೋಮ್ ಮತ್ತು ಸೈನಾ ನೆಹ್ವಾಲ್ ಅವರಿಗೆ ಇದು 2ನೇ ಕಾಮನ್ ವೆಲ್ತ್ ಕ್ರೀಡಾಕೂಟವಾಗಿದೆ.
ಇನ್ನು ಈ ಬಗ್ಗೆ ಮಾಹಿತಿ ನೀಡಿರುವ ಐಒಎ ಅಧಿಕಾರಿಯೊಬ್ಬರು, ಇತ್ತೀಚಿನ ಟೂರ್ನಿಗಳಲ್ಲಿ ಪಿವಿ ಸಿಂಧು ಅವರ ಅದ್ಬುತ ಪ್ರದರ್ಶನ ಗಮನಿಸಿ ಅವರಿಗೆ ಈ ಗೌರವ ನೀಡಲಾಗಿದೆ ಎಂದು ಹೇಳಿದ್ದಾರೆ.
ಇದೇ ಏಪ್ರಿಲ್ 4ರಂದು ಕ್ವೀನ್ಸ್ ಲ್ಯಾಂಡ್ ನ ಗೋಲ್ಡ್ ಕೋಸ್ಟ್ ನ ಕರ್ರಾರಾ ಸ್ಟೇಡಿಯಂನಲ್ಲಿ 2018ನೇ ಸಾಲಿನ ಕಾಮನ್ ವೆಲ್ತ್ ಗೇಮ್ಸ್ ಆರಂಭವಾಗಲಿದ್ದು, ಈ ಟೂರ್ನಿಯ ಉದ್ಘಾಟನಾ ಸಮಾರಂಭದಲ್ಲಿ ಪಿವಿ ಸಿಂಧು ನೇತೃತ್ವದಲ್ಲಿ ಭಾರತೀ. ಅಥ್ಲೀಟ್ ಗಳ ತಂಡ ಸ್ಟೇಡಿಯಂನಲ್ಲಿ ಪಥ ಸಂಚಲನ ನಡೆಸಲಿದೆ. ತಂಡದ ಸಾರಥಿಯಾಗುವ ಪಿವಿ ಸಿಂಧು ಭಾರತದ ಧ್ವಜವನ್ನು ಹಿಡಿದು ಮುಂದೆ ಸಾಗುವ ಮೂಲಕ ಪ್ರೇಕ್ಷಕರಿಗೆ ಭಾರತದ ಒಲಿಂಪಿಕ್ಸ್ ತಂಡವನ್ನು ಪರಿಚಯ ಮಾಡಿಕೊಡಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT