ಆಂಧ್ರ ಪ್ರದೇಶ ಉಪ ಕಲೆಕ್ಟರ್ ಹುದ್ದೆಗೇರಿದ ಶೆಟ್ಲರ್ ಕಿಡಂಬಿ ಶ್ರೀಕಾಂತ್ 
ಕ್ರೀಡೆ

ಆಂಧ್ರ ಪ್ರದೇಶ: ಶಟ್ಲರ್ ಕಿಡಂಬಿ ಶ್ರೀಕಾಂತ್ ಗೆ ಉಪ ಕಲೆಕ್ಟರ್ ಹುದ್ದೆ

ಭಾರತದ ಖ್ಯಾತ ಶಟಲ್ ಆಟಗಾರ ಕಿಡಂಬಿ ಶ್ರೀಕಾಂತ್ ಅವರನ್ನು ಆಂಧ್ರ ಪ್ರದೇಶ ಸರ್ಕಾರ ಉಪ ಕಲೆಕ್ಟರ್ ಆಗಿ ನೇಮಕಗೊಳಿಸಿ ಆದೇಶಿಸಿದೆ.

ಅಮರಾವತಿ (ಆಂಧ್ರ ಪ್ರದೇಶ): ಭಾರತದ ಖ್ಯಾತ ಶಟಲ್ ಆಟಗಾರ ಕಿಡಂಬಿ ಶ್ರೀಕಾಂತ್ ಅವರನ್ನು ಆಂಧ್ರ ಪ್ರದೇಶ ಸರ್ಕಾರ  ಉಪ ಕಲೆಕ್ಟರ್ ಆಗಿ ನೇಮಕಗೊಳಿಸಿ ಆದೇಶಿಸಿದೆ.
ಮಾಜಿ ಆಲ್ ಇಂಗ್ಲೆಂಡ್ ಚಾಂಪಿಯನ್ ಹಾಗೂ ಬ್ಯಾಡ್ಮಿಂಟನ್ ತರಬೇತುದಾರ ಪುಲ್ಲೆಲೆ ಗೋಪಿಚಂದ್.ಸಮ್ಮುಖದಲ್ಲಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು  ಶ್ರೀಕಾಂತ್ ಅವರಿಗೆ ನೇಮಕಾತಿ ಆದೇಶವನ್ನು ಹಸ್ತಾಂತರಿಸಿದ್ದಾರೆ.
ಭಾರತದ ಅತ್ಯುನ್ನತ ನಾಗರಿಕ ಪುರಸ್ಕಾರದಲ್ಲೊಂದಾದ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದುಕೊಂಡಿದ್ದಕ್ಕಾಗಿ ಶ್ರೀಕಾಂತ್ ಅವರನ್ನು  ನಾಯ್ಡು ಅಭಿನಂದಿಸಿದ್ದಾರೆ.
ಕಳೆದ ವರ್ಷ ಇಂಡೋನೇಷಿಯಾ ಚಾಂಪಿಯನ್ ಶಿಪ್ ಪ್ರಶಸ್ತಿ ಜಯಿಸಿದ್ದ ಶ್ರೀಕಾಂತ್ ಅವರನ್ನು ಸನ್ಮಾನಿಸಿದ್ದ ಮುಖ್ಯಮಂತ್ರಿ, ಶ್ರೀಕಾಂತ್ ಅವರಿಗೆ ಸರ್ಕಾರಿ ಕೆಲಸದ ಭರವಸೆ ನೀಡಿದ್ದರು.
ರಿಯೊ ಒಲಿಂಪಿಕ್ ಬೆಳ್ಳಿ ಪದಕ ವಿಜೇತೆಯಾದ ಪಿ.ವಿ. ಸಿಂಧು ಅವರ ಬಳಿಕ ಪದ್ಮಶ್ರೀ ಪುರಸ್ಕಾರ ಪಡೆದ ಎರಡನೇ ಅತಿ ಕಿರಿಯ ಕ್ರೀಡಾಳು ಕಿಡಂಬಿ ಶ್ರೀಕಾಂತ್ ಅವರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬೆಂಜಮಿನ್ ನೆತನ್ಯಾಹು ಮಾಡಿದ ಫೋನ್ ಕರೆಯೇ ಅಮೆರಿಕ-ಇರಾನ್ ಶಾಂತಿ ಮಾತುಕತೆ ಹಳಿತಪ್ಪುವಂತೆ ಮಾಡಿತು'

ಮಹಿಳಾ ಕೋಟಾ ಕಾನೂನು ಸಮಾನತೆಯ ಭಾರತಕ್ಕೆ ಪ್ರಮುಖ: ಪ್ರಧಾನಿ ಮೋದಿ

ಕ್ಷೇತ್ರಗಳ ಮರುವಿಂಗಡಣೆ ಪ್ರಸ್ತಾಪ ಅತ್ಯಂತ ಅಪಾಯಕಾರಿ ಹಾಗೂ ಸಂವಿಧಾನದ ಮೇಲಿನ ದಾಳಿ: ಸೋನಿಯಾ ಗಾಂಧಿ

ರಾಜ್ಯದಲ್ಲಿ ರಣ ಬಿಸಿಲು: 35 ಡಿಗ್ರಿ ತಲುಪಿದ ತಾಪಮಾನ, ಮಳೆ ಮುನ್ಸೂಚನೆ ಇಲ್ಲ ಎಂದ IMD

ಆಗ VOLVO, ಈಗ BMW; ಹಾರುಬೂದಿ ಸಾಗಿಸುತ್ತಿದ್ದ ಲಾರಿ ಉರುಳಿ ಐಶಾರಾಮಿ ಕಾರು ಅಪ್ಪಚ್ಚಿ, Video

SCROLL FOR NEXT