ಸಚಿನ್ ತೆಂಡೂಲ್ಕರ್ 
ಕ್ರೀಡೆ

9ನೇ ತರಗತಿಯಿಂದ ದೈಹಿಕ ಶಿಕ್ಷಣ ಕಡ್ಡಾಯ: ಸಿಬಿಎಸ್ ಇ ನಿರ್ಧಾರಕ್ಕೆ ಸಚಿನ್ ಬೆಂಬಲ

9ನೇ ತರಗತಿಯಿಂದ ೧೨ನೇ ತರಗತಿಯ ಎಲ್ಲಾ ಮಕ್ಕಳು ಪ್ರತಿದಿನ ಆರೋಗ್ಯ ಮತ್ತು ದೈಹಿಕ ಶಿಕ್ಷಣ ತರಗತಿಗಳಲ್ಲಿ ಹಾಜರಿರುವುದನ್ನುಕೇಂದ್ರಿಯ ಪ್ರೌಢ ಶಿಕ್ಷಣ....

ನವದೆಹಲಿ: 9ನೇ ತರಗತಿಯಿಂದ ೧೨ನೇ ತರಗತಿಯ ಎಲ್ಲಾ ಮಕ್ಕಳು ಪ್ರತಿದಿನ ಆರೋಗ್ಯ ಮತ್ತು ದೈಹಿಕ ಶಿಕ್ಷಣ ತರಗತಿಗಳಲ್ಲಿ ಹಾಜರಿರುವುದನ್ನುಕೇಂದ್ರಿಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(ಸಿಬಿಎಸ್ ಇ) ಕಡ್ಡಾಯಗೊಳಿಸಿದ್ದು, ಇದಕ್ಕೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಬೆಂಬಲ ಸೂಚಿಸಿದ್ದಾರೆ. ಅಲ್ಲದೆ ಕೆಳ ಹಂತದ ತರಗತಿಗಳಲ್ಲೂ ದೈಹಿಕ ಶಿಕ್ಷಣ ಕಡ್ಡಾಯಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಸಂಬಂಧ ಸಿಬಿಎಸ್ ಇ ಮುಖ್ಯಸ್ಥೆ ಅನಿತಾ ಕರ್ವಾಲ್ ಅವರಿಗೆ ಪತ್ರ ಬರೆದಿರುವ ತೆಂಡೂಲ್ಕರ್, ಕ್ರೀಡಾ ಶಿಕ್ಷಣವನ್ನು ಪಠ್ಯಕ್ರಮದಲ್ಲಿ ಸೇರಿಸಿರುವುದು ವಿದ್ಯಾರ್ಥಿಗಳ ಒಟ್ಟಾರೆ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.
ಬಹಳ ದಿನಗಳ ಹಿಂದೆಯೇ ಕ್ರೀಡಾ ಶಿಕ್ಷಣವನ್ನು ಪಠ್ಯದಲ್ಲಿ ಸೇರಿಸಬೇಕಾಗಿತ್ತು. ಈಗ ಅದನ್ನು ಕಡ್ಡಾಯಗೊಳಿಸಿರುವುದು ಸ್ವಾಗತಾರ್ಹ ಎಂದು ಹೇಳಿದ್ದಾರೆ.
ಶಾಲಾ ಮಕ್ಕಳಲ್ಲಿ ಹೆಚ್ಚುತ್ತಿರುವ ಸ್ಥೂಲಕಾಯ ತಡೆಗಟ್ಟುವ ನಿಟ್ಟಿನಲ್ಲಿ ಸಿಬಿಎಸ್ ಇ ಈ ವರ್ಷದಿಂದ 9ನೇ ತರಗತಿಯಿಂದ 12ನೇ ತರಗತಿಯವರೆಗೆ ಆರೋಗ್ಯ ಮತ್ತು ದೈಹಿಕ ಶಿಕ್ಷಣ ಕಡ್ಡಾಯಗೊಳಿಸಿದ್ದು, ಇದು ಗ್ರೇಡ್ ಪಡೆಯಲು ಅರ್ಹತಾ ವಿಷಯವಾಗಿದೆ ಮತ್ತು ಹತ್ತನೇ ತರಗತಿ ಹಾಗೂ ೧೨ನೇ ತರಗತಿಯ ಮಂಡಳಿಯ ಪರೀಕ್ಷೆಗೆ ಹಾಜರಾಗಲು ಎಲ್ಲಾ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

SCROLL FOR NEXT