ಸೈಲಿಂಗ್‌ ಗಾಗಿ ಶಾಲೆಯನ್ನೇ ಬಿಟ್ಟರು: ಏಷ್ಯನ್ ಗೇಮ್ಸ್ ನಲ್ಲಿ ಬೆಳ್ಳಿ, ಕಂಚು ಗೆದ್ದರು! 
ಕ್ರೀಡೆ

ಸೈಲಿಂಗ್‌ ಗಾಗಿ ಶಾಲೆಯನ್ನೇ ಬಿಟ್ಟರು: ಏಷ್ಯನ್ ಗೇಮ್ಸ್ ನಲ್ಲಿ ಬೆಳ್ಳಿ, ಕಂಚು ಗೆದ್ದರು!

ಏಶ್ಯಾಡ್‌ ಸೈಲಿಂಗ್‌ ಸ್ಪರ್ಧೆಯಲ್ಲಿ ಭಾರತ 3 ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಎಲ್ಲಾ ಕ್ರೀಡೆ-ಕ್ರೀಡಾಪಟುಗಳ ಸಾಧನೆ ಹಿಂದೆ ಅಚ್ಚರಿಯ, ಪ್ರೇರಣೆ ನೀಡುವ ಕಥೆಗಳು ಬೆಸೆದುಕೊಂಡಿರುತ್ತೆ, ಸೈಲಿಂಗ್ ನಲ್ಲಿ ಪದಕ ಗೆದ್ದ ಯುವಕರ ಸಾಧನೆಯ ಹಿಂದೆಯೂ ಇಂಥಹದ್ದೇ ಕಥೆಯೊಂದು ಇದೆ.

ಏಶ್ಯಾಡ್‌ ಸೈಲಿಂಗ್‌ ಸ್ಪರ್ಧೆಯಲ್ಲಿ ಭಾರತ 3 ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಎಲ್ಲಾ ಕ್ರೀಡೆ-ಕ್ರೀಡಾಪಟುಗಳ ಸಾಧನೆ ಹಿಂದೆ ಅಚ್ಚರಿಯ, ಪ್ರೇರಣೆ ನೀಡುವ ಕಥೆಗಳು ಬೆಸೆದುಕೊಂಡಿರುತ್ತೆ, ಸೈಲಿಂಗ್ ನಲ್ಲಿ ಪದಕ ಗೆದ್ದ ಯುವಕರ ಸಾಧನೆಯ ಹಿಂದೆಯೂ ಇಂಥಹದ್ದೇ ಕಥೆಯೊಂದು ಇದೆ. 
ಸೈಲಿಂಗ್ ನಲ್ಲಿ ಸಾಧನೆ ಮಾಡಲು ವರುಣ್ ಅಶೋಕ್ ಠಾಕ್ಕರ್, ಕೆಸಿ ಗಣಪತಿ ಶಾಲೆಯನ್ನೇ ಬಿಟ್ಟಿದ್ದರು. ಈಗ ಏಷ್ಯನ್ ಗೇಮ್ಸ್ ನಲ್ಲಿ ಪದಕ್ ಅಗೆದ್ದು ತಮ್ಮ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ.  ಕ್ರೀಡಾ ಸಾಧನೆಗಾಗಿ ಶಾಲೆಯನ್ನು ತೊರೆದಿರುವ ಬಗ್ಗೆ ಅಶೋಕ್ ಠಾಕ್ಕರ್ ಹಾಗೂ ಕೆಸಿ ಗಣಪತಿಗೆ ಯಾವುದೇ ಪಶ್ಚಾತ್ತಾಪವಿಲ್ಲ. ಒಂದು ಕಾಲದಲ್ಲಿ ಕ್ರೀಡೆಯಲ್ಲಿ ಪ್ರಬಲ ಎದುರಾಳಿಗಳಾಗಿದ್ದ ಠಾಕ್ಕರ್ ಹಾಗೂ ಕೆಸಿ ಗಣಪತಿ ಏಷ್ಯನ್ ಗೇಮ್ಸ್ ನಲ್ಲಿ ಒಟ್ಟಾಗಿ ಕಂಚಿನ ಪದಕ ಗೆದ್ದಿದ್ದಾರೆ. 
"ಕಿರಿಯ ವಯಸ್ಸಿನಲ್ಲಿ ನಮ್ಮ ನಡುವೆಯೇ ಪೈಪೋಟಿ ಏರ್ಪಡುತ್ತಿತ್ತು, ಈ ವ್ಯಕ್ತಿಯೊಂದಿಗೆ ಸೇರಿ ಪದಕ ಗೆದ್ದಿರುವುದು ಅತ್ಯಂತ ಸಂತಸ ಮೂಡಿಸಿದೆ, ನಾವು 2011 ಕ್ಕೂ ಮುನ್ನ ಪ್ರಬಲ ಎದುರಾಳಿಗಾಳಿದ್ದೆವು, ಆದರೆ  ಆ ನಂತರ ಒಂದೇ ತಂಡದಲ್ಲಿ ಸೇರ್ಪಡೆಗೊಂಡೆವು ಎಂದು ಠಾಕ್ಕರ್ ಕೆಸಿ ಗಣಪತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 
9 ನೇ ತರಗತಿಯಲ್ಲಿದ್ದಾಗ ನಾನು ಶಾಲೆಯನ್ನು ತೊರೆದು ಸೈಲಿಂಗ್ ಕಲಿಯಲು ಪ್ರಾರಂಭಿಸಿದೆ, ನಂತರ ಮುಕ್ತ ಶಿಕ್ಷಣ ವ್ಯವಸ್ಥೆಯ ಮೂಲಕ ಶಿಕ್ಷಣ ಕಲಿತೆ ಎಂದು ಗಣಪತಿ ಹೇಳಿದ್ದಾರೆ.  ನಮ್ಮ ಶಾಲೆಯಲ್ಲಿ ವರ್ಷಕ್ಕೆ 10 ದಿನ ಮಾತ್ರ ರಜೆ ತೆಗೆದುಕೊಳ್ಳಬಹುದಾಗಿತ್ತು. ಆದರೆ ಇಷ್ಟು ಕಡಿಮೆ ಅವಧಿಯಲ್ಲಿ ಸೈಲಿಂಗ್ ನಲ್ಲಿ ಪ್ರಭುತ್ವ ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ. ಸೈಲಿಂಗ್ ಫುಲ್ ಟೈಮ್ ಜಾಬ್ ಎನ್ನುತ್ತಾರೆ ಗಣಪತಿ. 2011 ರಿಂದ ಠಾಕ್ಕರ್ ಹಾಗೂ ಗಣಪತಿ ಇಬ್ಬರೂ ವಾರಕ್ಕೆ 6 ದಿನಗಳ ಕಾಲ ಚೆನ್ನೈ ನಲ್ಲಿ ತರಬೇತಿ ಪಡೆಯುತ್ತಿದ್ದರು. ಪೂರ್ಣಾವಧಿ ಸೈಲಿಂಗ್ ತರಬೇತಿಯಲ್ಲಿ ತೊಡಗಿಸಿಕೊಳ್ಳುವ ತಮ್ಮ ನಿರ್ಧಾರಕ್ಕೆ ಪೋಷಕರೂ ಸಾಥ್ ನೀಡಿದರು ಎನ್ನುತ್ತಾರೆ ಕೆಸಿ ಗಣಪತಿ  ಹಾಗೂ ಅಶೋಕ್ ಠಾಕ್ಕರ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT