ಪ್ರಶಸ್ತಿ ಕೈತಪ್ಪಿದ ಹಿನ್ನೆಲೆ ಕ್ರೀಡಾ ಸಚಿವರನ್ನು ಭೇಟಿ ಮಾಡಿದ ಭಜರಂಗ್ ಪುನಿಯಾ 
ಕ್ರೀಡೆ

ಪ್ರಶಸ್ತಿ ಕೈತಪ್ಪಿದ ಹಿನ್ನೆಲೆ ಕ್ರೀಡಾ ಸಚಿವರನ್ನು ಭೇಟಿ ಮಾಡಿದ ಭಜರಂಗ್ ಪುನಿಯಾ

ಕ್ರೀಡಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಗಳಲ್ಲಿ ತಮ್ಮ ಹೆಸರು ತಪ್ಪಿಹೋಗಿರುವ ಹಿನ್ನೆಲೆಯಲ್ಲಿ ಭಾರತದ ಕುಸ್ತಿಪಟು ಭಜರಂಹ್ ಪುನಿಯಾ, ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರನ್ನು ಭೇಟಿ ಮಾಡಿದ್ದಾರೆ.

ನವದೆಹಲಿ: ಕ್ರೀಡಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಗಳಲ್ಲಿ ತಮ್ಮ ಹೆಸರು ತಪ್ಪಿಹೋಗಿರುವ ಹಿನ್ನೆಲೆಯಲ್ಲಿ ಭಾರತದ ಕುಸ್ತಿಪಟು ಭಜರಂಹ್ ಪುನಿಯಾ, ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರನ್ನು  ಭೇಟಿ ಮಾಡಿದ್ದಾರೆ. 
"ನಾನು ಸಚಿವರನ್ನು ಸೆ.21 ರಂದು ಸಂಜೆ ಭೇಟಿ ಮಾಡಬೇಕಿತ್ತು. ಆದರೆ ಹಿಂದಿನ ದಿನ ಸಂಜೆ ಕರೆ ಬಂದಿತ್ತು. ಖೇಲ್ ರತ್ನಕ್ಕೆ ನನ್ನ ಹೆಸರನ್ನು ಪರಿಗಣಿಸದೇ ಇರುವುದಕ್ಕೆ ಸಂಬಂಧಿಸಿದಂತೆ ನಾನು ಸಚಿವರ ಬಳಿ ಪ್ರಶ್ನಿಸಿದ್ದೇನೆ, ಸಚಿವರು ಈ ಕುರಿತು ಪರಿಶೀಲನೆ ನಡೆಸುವುದಾಗಿ ಹೇಳಿದ್ದಾರೆ.  ಖೇಲ್ ರತ್ನಗೆ ನಾಮನಿರ್ದೇಶನಗೊಂಡಿದ್ದ ಕ್ರೀಡಾಪಟುಗಳಾದ ವಿರಾಟ್ ಕೊಹ್ಲಿ ಹಾಗೂ ಮೀರಾಬಾಯ್ ಚನು ಅವರಿಗಿಂತ ಎರಡೂ ಅಂಕಗಳನ್ನು ಹೆಚ್ಚು ಪಡೆದಿದ್ದರೂ ನನ್ನ ಹೆಸರನ್ನು ಪರಿಗಣಿಸಲಾಗಿರಲಿಲ್ಲ ಎಂದು ಭಜರಂಗ್ ಪುನಿಯಾ ಹೇಳಿದ್ದಾರೆ. 
ಕಾಮನ್ವೆಲ್ತ್ ಹಾಗೂ ಏಷ್ಯನ್ ಗೇಮ್ಸ್ ನಲ್ಲಿ 24 ವರ್ಷದ ಕುಸ್ತಿಪಟು ಚಿನ್ನದ ಪದಕಗಳನ್ನು ಗೆದ್ದಿದ್ದು, ಕ್ರೀಡಾ ಸಚಿವಾಲಯದಿಂದ ತ್ವರಿತ ಪ್ರತಿಕ್ರಿಯೆ ಬಾರದೇ ಇದ್ದಲ್ಲಿ ನ್ಯಾಯಾಂಗದ ಮೊರೆ ಹೋಗಬೇಕಾಗುತ್ತದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್, ನದಿ ಪಾತ್ರದಲ್ಲಿ ಕಟ್ಟೆಚ್ಚರ

ನಿನ್ನ ತಲೆ ಕಡಿತೀವಿ: ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ, ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

Chandra Grahan 2026: ವರ್ಷದ ಕೊನೆಯ ಸುದೀರ್ಘ ಚಂದ್ರಗ್ರಹಣ; ಭಾರತದಲ್ಲಿ ಸೂತಕ ಕಾಲ ಇಲ್ಲ, ಯಾಕೆ ಗೊತ್ತ?

2ನೇ ಟೆಸ್ಟ್ ಗೆಲುವಿನ ಹಾದಿಯಲ್ಲಿ ಟೀಂ ಇಂಡಿಯಾ; ಶ್ರೀಲಂಕಾ ವಿರುದ್ಧ ಭಾರತ ಗೆದ್ದರೆ WTC ಅಂಕಪಟ್ಟಿಯಲ್ಲಿ ಮಹತ್ತರ ಬದಲಾವಣೆ!