ಪ್ರಶಸ್ತಿ ಕೈತಪ್ಪಿದ ಹಿನ್ನೆಲೆ ಕ್ರೀಡಾ ಸಚಿವರನ್ನು ಭೇಟಿ ಮಾಡಿದ ಭಜರಂಗ್ ಪುನಿಯಾ 
ಕ್ರೀಡೆ

ಪ್ರಶಸ್ತಿ ಕೈತಪ್ಪಿದ ಹಿನ್ನೆಲೆ ಕ್ರೀಡಾ ಸಚಿವರನ್ನು ಭೇಟಿ ಮಾಡಿದ ಭಜರಂಗ್ ಪುನಿಯಾ

ಕ್ರೀಡಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಗಳಲ್ಲಿ ತಮ್ಮ ಹೆಸರು ತಪ್ಪಿಹೋಗಿರುವ ಹಿನ್ನೆಲೆಯಲ್ಲಿ ಭಾರತದ ಕುಸ್ತಿಪಟು ಭಜರಂಹ್ ಪುನಿಯಾ, ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರನ್ನು ಭೇಟಿ ಮಾಡಿದ್ದಾರೆ.

ನವದೆಹಲಿ: ಕ್ರೀಡಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಗಳಲ್ಲಿ ತಮ್ಮ ಹೆಸರು ತಪ್ಪಿಹೋಗಿರುವ ಹಿನ್ನೆಲೆಯಲ್ಲಿ ಭಾರತದ ಕುಸ್ತಿಪಟು ಭಜರಂಹ್ ಪುನಿಯಾ, ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರನ್ನು  ಭೇಟಿ ಮಾಡಿದ್ದಾರೆ. 
"ನಾನು ಸಚಿವರನ್ನು ಸೆ.21 ರಂದು ಸಂಜೆ ಭೇಟಿ ಮಾಡಬೇಕಿತ್ತು. ಆದರೆ ಹಿಂದಿನ ದಿನ ಸಂಜೆ ಕರೆ ಬಂದಿತ್ತು. ಖೇಲ್ ರತ್ನಕ್ಕೆ ನನ್ನ ಹೆಸರನ್ನು ಪರಿಗಣಿಸದೇ ಇರುವುದಕ್ಕೆ ಸಂಬಂಧಿಸಿದಂತೆ ನಾನು ಸಚಿವರ ಬಳಿ ಪ್ರಶ್ನಿಸಿದ್ದೇನೆ, ಸಚಿವರು ಈ ಕುರಿತು ಪರಿಶೀಲನೆ ನಡೆಸುವುದಾಗಿ ಹೇಳಿದ್ದಾರೆ.  ಖೇಲ್ ರತ್ನಗೆ ನಾಮನಿರ್ದೇಶನಗೊಂಡಿದ್ದ ಕ್ರೀಡಾಪಟುಗಳಾದ ವಿರಾಟ್ ಕೊಹ್ಲಿ ಹಾಗೂ ಮೀರಾಬಾಯ್ ಚನು ಅವರಿಗಿಂತ ಎರಡೂ ಅಂಕಗಳನ್ನು ಹೆಚ್ಚು ಪಡೆದಿದ್ದರೂ ನನ್ನ ಹೆಸರನ್ನು ಪರಿಗಣಿಸಲಾಗಿರಲಿಲ್ಲ ಎಂದು ಭಜರಂಗ್ ಪುನಿಯಾ ಹೇಳಿದ್ದಾರೆ. 
ಕಾಮನ್ವೆಲ್ತ್ ಹಾಗೂ ಏಷ್ಯನ್ ಗೇಮ್ಸ್ ನಲ್ಲಿ 24 ವರ್ಷದ ಕುಸ್ತಿಪಟು ಚಿನ್ನದ ಪದಕಗಳನ್ನು ಗೆದ್ದಿದ್ದು, ಕ್ರೀಡಾ ಸಚಿವಾಲಯದಿಂದ ತ್ವರಿತ ಪ್ರತಿಕ್ರಿಯೆ ಬಾರದೇ ಇದ್ದಲ್ಲಿ ನ್ಯಾಯಾಂಗದ ಮೊರೆ ಹೋಗಬೇಕಾಗುತ್ತದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

ಜನಸಂಖ್ಯಾ ಬದಲಾವಣೆ ಪರಿಶೀಲಿಸಲು ಸರ್ಕಾರದಿಂದ ಉನ್ನತ ಮಟ್ಟದ ಸಮಿತಿ

ಬೆಂಗಳೂರು: ಕೆಲಸ ಮಾಡುತ್ತಿದ್ದ ಕಂಪನಿಗೆ ಕನ್ನ! ಚಿನ್ನದ ಗಟ್ಟಿ, ಆಭರಣಗಳನ್ನು ಕದ್ದ 9 ಕಾರ್ಮಿಕರ ಬಂಧನ

IPL 2026: ನಾವೇನು ಸಿನಿಮಾ ಸ್ಟಾರ್‌ಗಳಲ್ಲ: ವಿಮಾನ ನಿಲ್ಗಾಣದಲ್ಲಿ Riyan Parag ಗರಂ, ವೈಭವ್ ಸೂರ್ಯವಂಶಿ ಶಾಕ್! Video

SCROLL FOR NEXT