ರಾಹುಲ್ ದ್ರಾವಿಡ್ 
ಕ್ರೀಡೆ

ಬೆಂಗಳೂರು ಕ್ರೀಡೋತ್ಸವಕ್ಕೆ ರಾಹುಲ್ ದ್ರಾವಿಡ್, ಪ್ರಕಾಶ್ ಪಡುಕೋಣೆ ಪ್ರೋತ್ಸಾಹ

ಡಿಸೆಂಬರ್ ತಿಂಗಳಲ್ಲಿ ಆಯೋಜಿಸಿರುವ ಎರಡು ದಿನಗಳ ಬೆಂಗಳೂರು ಕ್ರೀಡೋತ್ಸವಕ್ಕೆ ಖ್ಯಾತ ಕ್ರೀಡಾಪಟುಗಳಾದ ರಾಹುಲ್ ದ್ರಾವಿಡ್ ಹಾಗೂ ಪ್ರಕಾಶ್ ಪಡುಕೋಣೆ ಕೈ ಜೋಡಿಸುತ್ತಿದ್ದಾರೆ.

ಬೆಂಗಳೂರು: ಪ್ರತಿಯೊಂದು ಕುಟುಂಬದಲ್ಲೂ ಕ್ರೀಡೆಯನ್ನು ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಡಿಸೆಂಬರ್ ತಿಂಗಳಲ್ಲಿ ಆಯೋಜಿಸಿರುವ ಎರಡು ದಿನಗಳ ಬೆಂಗಳೂರು ಕ್ರೀಡೋತ್ಸವಕ್ಕೆ ಖ್ಯಾತ ಕ್ರೀಡಾಪಟುಗಳಾದ ರಾಹುಲ್ ದ್ರಾವಿಡ್ ಹಾಗೂ ಪ್ರಕಾಶ್ ಪಡುಕೋಣೆ ಪ್ರೋತ್ಸಾಹ ನೀಡುತ್ತಿದ್ದಾರೆ.

ಬೆಂಗಳೂರು ಕ್ರೀಡೋತ್ಸವ 2018 ಆಯೋಜಿಸುತ್ತಿರುವುದಕ್ಕೆ  ಸಂತೋಷವಾಗುತ್ತಿದೆ ಎಂದು ಕ್ರೀಡೆ ಎಕ್ಸಲೆನ್ಸ್ ಟ್ರಸ್ಟ್ ಅಧ್ಯಕ್ಷ ವಿಮಲ್ ಕುಮಾರ್ ತಿಳಿಸಿದ್ದಾರೆ.

ಡಿಸೆಂಬರ್ 8 ಮತ್ತು 9 ರಂದು ಈ ಕ್ರಿಡೋತ್ಸವ ನಡೆಯಲಿದ್ದು,  20 ಸಾವಿರ ಕ್ರೀಡಾಪಟುಗಳ ಭಾಗವಹಿಸುವ ಸಾಧ್ಯತೆ ಇದೆ. ಈ ಕ್ರೀಡೋತ್ಸವದಲ್ಲಿ ಎಲ್ಲ ವಯೋಮಾನದ ಕ್ರೀಡಾಪಟುಗಳ ಪಾಲ್ಗೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು.

 ಸುಮಾರು 100 ಕ್ರೀಡಾ ತಜ್ಞರು, ನಗರದ ಸೆಲೆಬ್ರಿಟಿಗಳು ಈ ಕ್ರಿಡೋತ್ಸವದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.  32 ದೇಶಿಯ ಕಾರ್ಪೋರೇಟ್ಸ್ ಮತ್ತು  3. 200 ಕ್ಕೂ ಹೆಚ್ಚು ಕಾರ್ಪೋರೇಟ್ಸ್ ಪಾಲ್ಗೊಳ್ಳಲುವ  ಸಾಧ್ಯತೆ ಇದೆ ಎಂದರು.

ದೇಶದಲ್ಲಿ ಕ್ರೀಡೆಯನ್ನು ಅಭಿವೃದ್ದಿ ಪಡಿಸಿ, ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಈ ಕ್ರೀಡೋತ್ಸವ ಆಯೋಜಿಸಲಾಗುತ್ತಿದೆ ಎಂದು ನಿರ್ದೇಶಕ ಶ್ಯಾಮ್ ಸುಂದರ್ ಪಣಿ ತಿಳಿಸಿದರು.

 ರಾಹುಲ್ ದ್ರಾವಿಡ್, ಪ್ರಕಾಶ್ ಪಡುಕೋಣೆ ಹೊರತುಪಡಿಸಿದರೆ, ವಿದ್ಯಾ ಲಕ್ಷ್ಮಣ್ , ಮತ್ತು ಅಥ್ಲೀಟ್  ರೀತ್ ಅಬ್ರಾಹಂ ಕ್ರೀಡೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT